ಆಧಾರ್‌ ನೋಂದಣಿ ಕೇಂದ್ರದಲ್ಲಿ ಸರತಿ ಸಾಲು; ನಿತ್ಯ ಸವಾಲು

300 ಮಂದಿ ಬಂದರೂ ನೋಂದಣಿ ಕೇಂದ್ರದಲ್ಲಿ ಓರ್ವ ಸಿಬ್ಬಂದಿ; ದಿನಕ್ಕೆ 15 ಮಂದಿಯ ಆಧಾರ್‌ ತಿದ್ದುಪಡಿ: ಉಳಿದವರು ಮನೆಗೆ

Team Udayavani, Aug 13, 2021, 5:56 PM IST

ಆಧಾರ್‌ ನೋಂದಣಿ ಕೇಂದ್ರದಲ್ಲಿ ಸರತಿ ಸಾಲು; ನಿತ್ಯ ಸವಾಲು

ಹುಳಿಯಾರು: ಪಟ್ಟಣದ ನಾಡಕಚೇರಿಯಲ್ಲಿ ತೆರೆದಿರುವ ಆಧಾರ್‌ ಕೇಂದ್ರದಲ್ಲಿ ತಿದ್ದುಪಡಿ ಮಾಡಿಸಲು ಟೋಕನ್‌ಗಾಗಿ ಸಾರ್ವಜನಿಕರು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಲ್ಲುವ ಅನಿವಾರ್ಯ ಸ್ಥಿತಿ ಎದುರಾಗಿದ್ದರೂ ತಾಲೂಕು ಆಡಳಿತ ದಿವ್ಯ ನಿರ್ಲಕ್ಷ್ಯ ತಾಳಿದೆ.

ಶಾಲಾ ಮಕ್ಕಳ ದಾಖಲಾತಿಗಾಗಿ, ಬ್ಯಾಂಕ್‌ ಖಾತೆ ತೆರೆಯಲು, ಪಡಿತರ ಚೀಟಿಗೆ ಹೆಸರು ಸೇರ್ಪಡೆಗೆ ಆಧಾರ್‌ ನೋಂದಣಿ ಕಡ್ಡಾಯ. ಹೀಗಾಗಿ ಹುಳಿಯಾರು ನಾಡಕಚೇರಿಯ ಆಧಾರ್‌ ಕೇಂದ್ರಕ್ಕೆ ಆಧಾರ್‌ ನೋಂದಣಿ, ಹೆಸರು, ದೂರವಾಣಿ ಸಂಖ್ಯೆ, ವಿಳಾಸ,ಭಾವಚಿತ್ರ, ಸೇರಿದಂತೆ ಹಲವು ತಿದ್ದುಪಡಿಗಳಿಗಾಗಿ ನೂರಾರು ಜನ ಬರುತ್ತಾರೆ. ಆದರೆ, ಆಧಾರ್‌ ನೋಂದಣಿ ಕೇಂದ್ರ ಹಾಗೂ ನಾಡಕಚೇರಿಯ ಚೆಕ್‌ಲಿಸ್ಟ್‌ ತೆಗೆಯಲು ಇರುವುದು ಒಬ್ಬ ಸಿಬ್ಬಂದಿ ಮಾತ್ರ. ಇತ್ತ ಸಾರ್ವಜನಿಕ ಜಾತಿ ಆದಾಯ ಪತ್ರ, ವಂಶವೃಕ್ಷ, ಸಣ್ಣ ಹಿಡುವಳಿ ಪತ್ರ, 11 ಇ ಸ್ಕೆಚ್‌, ಫವತಿ ಖಾತೆ ಸೇರಿದಂತೆ ವಿವಿಧ ಸೇವೆಯ ಚೆಕ್‌ಲಿಸ್ಟ್‌ ತೆಗೆಯಬೇಕು. ಜತೆಗೆ ಆಧಾರ್‌ ತಿದ್ದುಪಡಿಯನ್ನೂ ಮಾಡಬೇಕು.

ಒಬ್ಬ ವ್ಯಕ್ತಿ ಅಥವಾ ಒಂದು ಮಗುವಿನ ಆಧಾರ್‌ ನೋಂದಣಿ ಮಾಡಲು ಕನಿಷ್ಠ 10 ರಿಂದ 15 ನಿಮಿಷ ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ದಿನಕ್ಕೆ15 ರಿಂದ 20 ಜನರಿಗೆ ಮಾತ್ರ ಆಧಾರ್‌ ತಿದ್ದುಪಡಿ ಮತ್ತು ನೋಂದಣಿ ಸೇವೆ ದೊರೆಯುತ್ತಿದೆ. ಇದರಿಂದ ನಿತ್ಯ ನೂರಾರು ಜನ ಮಳೆ ಲೆಕ್ಕಿಸದೆ ಊಟ ತಿಂಡಿ ಬಿಟ್ಟು ಆಧಾರ್‌ ಕೇಂದ್ರದ ಬಳಿ ದಿನಕಳೆಯುತ್ತಿದ್ದಾರೆ.

ಇದನ್ನೂ ಓದಿ:ಹುಲಿ ಕಾಳಗ : ಕಾದಾಟದಲ್ಲಿ ಗಂಡು ಹುಲಿ ಸಾವು..!

ಕೋವಿಡ್‌ 3ನೇ ಅಲೆ ಆತಂಕ ಕಾಡುತ್ತಿದ್ದರೂ ಜನ ಆಧಾರ್‌ ತಿದ್ದುಪಡಿಗಾಗಿ, ಚೆಕ್‌ಲಿಸ್ಟ್‌ ತೆಗೆಸಲು ಕೋವಿಡ್‌ ನಿಯಮ ಗಾಳಿಗೆ ತೂರಿ ಮುಗಿ ಬೀಳುತ್ತಿದ್ದಾರೆ. ಒಬ್ಬರ ಮೇಲೊಬ್ಬರು ಬಿದ್ದು ಟೋಕನ್‌ ಪಡೆಯುತ್ತಿದ್ದಾರೆ. ಸರಿಯಾಗಿ ಮಾಸ್ಕ್ ಧರಿಸದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ದಿನಗಟ್ಟಲೇ ನಿಲ್ಲುವ ದೃಶ್ಯ ಕಲ್ಲು ಹೃದಯಿಗಳನ್ನುಕರಗಿಸುವಂತಿದ್ದರೂ ಅಧಿಕಾರಿಗಳ ಹೃದಯ ಮಾತ್ರ ಕರಗುತ್ತಿಲ್ಲ. ಕೇವಲ ಒಬ್ಬ ಸಿಬ್ಬಂದಿಯಿಂದ ಆಧಾರ್‌ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ.ಈಮಧ್ಯೆ ವಿದ್ಯುತ್‌ ಸಮಸ್ಯೆ, ನೆಟ್‌ವರ್ಕ್‌ ಸಮಸ್ಯೆ ಉಂಟಾದರೆ ಸಾಕಷ್ಟು ತೊಂದರೆ ಆಗುತ್ತದೆ. ಜತೆಗೆ ಮಕ್ಕಳನ್ನು ಕರೆತರುತ್ತಿರುವುದರಿಂದ ಕೋವಿಡ್‌ ಹರಡುವ ಭೀತಿ ಕಾಡುತ್ತಿದೆ

ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಆಧಾರ್‌ ನೋಂದಣಿ ಸೇವೆ ಒದಗಿಸಲು ಇನ್ನೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕಿದೆ. ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಆಧಾರ್‌ ನೋಂದಣಿ ಕೇಂದ್ರ ತೆರೆಯಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ ಹುಳಿಯಾರಿನಲ್ಲಿ ಅಂಚೆಕಚೇರಿ ಸೇರಿ ಕೆನರಾ ಬ್ಯಾಂಕ್‌ ಪಕ್ಕ, ರಾಮಹಾಲ್‌ ಸಮೀಪ ಖಾಸಗಿಯವರೂ ಆಧಾರ್‌ ತಿದ್ದುಪಡಿ ಮಾಡುತ್ತಿದ್ದಾರೆ. ಆದರೆ, ನಾಡಕಚೇರಿ ಬಳಿಯೇ ಜನ ಹೆಚ್ಚಾಗಿ ಬರುತ್ತಿದ್ದಾರೆ. ನಿತ್ಯ300ಕ್ಕೂ ಹೆಚ್ಚು ಟೋಕನ್‌ ಕೊಡುತ್ತಿದ್ದೇವೆ. ಆದರೆ, ಓರ್ವ ಸಿಬ್ಬಂದಿ ಮಾತ್ರ ಇದ್ದು ದಿನಕ್ಕೆ15-20 ಮಂದಿಗೆ ಮಾತ್ರ ಆಧಾರ್‌ ತಿದ್ದುಪಡಿ ಮಾಡಬಹುದಾಗಿದೆ. ಕೆಲಸದ ಒತ್ತಡದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ ಎಂದು ಹುಳಿಯಾರು ನಾಡಕಚೇರಿ ಸಿಬ್ಬಂದಿ ಭುವನೇಶ್ವರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲೇ ದೊಡ್ಡ ಹೋಬಳಿ
ಹುಳಿಯಾರು ಹೋಬಳಿ ಜಿಲ್ಲೆಯಲ್ಲೇ ಅತೀ ದೊಡ್ಡ ಹೋಬಳಿ ಕೇಂದ್ರವಾಗಿದೆ. 2 ಜಿಪಂ ಕ್ಷೇತ್ರ, 9 ಗ್ರಾಪಂ ಮತ್ತು 1 ಪಪಂ ನೂರಾರು ಗ್ರಾಮಗಳ ಜನರ ಕೇಂದ್ರ ಸ್ಥಾನವಾಗಿದೆ. ನಿತ್ಯ ನೂರಾರು ಮಂದಿಚೆಕ್‌ಲಿಸ್ಟ್‌ ತೆಗೆಸಲು ಬರುತ್ತಾರೆ. ಆಧಾರ ತಿದ್ದುಪಡಿ ಮಧ್ಯೆ ಬಿಡುವ ಮಾಡಿಕೊಂಡು ಚೆಕ್‌ಲಿಸ್ಟ್‌ ತೆಗೆಯುತ್ತಿರುವುದರಿಂದ ದಿನಕ್ಕೆ 50 ಮಂದಿಗೆ ಮಾತ್ರ ಸೇವೆ ಲಭ್ಯವಾಗುತ್ತಿದೆ. ಉಳಿದವರು ದಿನಗಟ್ಟಲೆ ಕಾದುಬಂದದಾರಿಗೆ ಸುಂಕವಿಲ್ಲವೆಂದು ವಾಪಸ್ಸಾಗಿ ಮರುದಿನ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.