ವೇತನ, ಭವಿಷ್ಯ ನಿಧಿ ನೀಡದೆ ದಬ್ಟಾಳಿಕೆ
Team Udayavani, Sep 14, 2019, 2:29 PM IST
ಕೊರಟಗೆರೆ ತಾಲೂಕು ಕಸಬಾ ಹೋಬಳಿ ಬಜ್ಜನಹಳ್ಳಿ ಬಳಿಯ ಗಾರ್ಮೆಂಟ್ಸ್ ಎದುರು ಭವಿಷ್ಯನಿಧಿ ಮತ್ತು ಸಂಬಳಕ್ಕೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಕೊರಟಗೆರೆ: ಎರಡು ತಿಂಗಳ ವೇತನ ಮತ್ತು 1 ವರ್ಷದ ವಿಶೇಷ ಭತ್ಯೆ ಜೊತೆ ಭವಿಷ್ಯ ನಿಧಿ ನೀಡದೆ ದಬ್ಟಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಗಾರ್ಮೆಂಟ್ಸ್ ಎದುರು 300ಕ್ಕೂ ಹೆಚ್ಚು ಕಾರ್ಮಿಕರು ಶುಕ್ರವಾರ ಪ್ರತಿಭಟನೆ ನಡೆಸಿದರು. ಕಸಬಾ ಹೋಬಳಿ ಬಜ್ಜನಹಳ್ಳಿ ಬಳಲಿಯ ಬಳಿಯ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಕಳೆದ ಎರಡು ತಿಂಗಳ ಸಂಬಳ ಮತ್ತು 1 ವರ್ಷದಿಂದ ಭವಿಷ್ಯನಿಧಿ ನೀಡದೆ ಮಾಲೀಕರು ದಬ್ಟಾಳಿಕೆ ನಡೆ ಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಾರ್ಮೆಂಟ್ಸ್ ಲೆಕ್ಕಾಧಿಕಾರಿ ರಾಘವೇಂದ್ರ ರಾಜಅರಸ್ ಮಾತನಾಡಿ, ಕಂಪನಿ ಪ್ರಾರಂಭ ಆದಾಗ 1600 ಕಾರ್ಮಿಕರಿದ್ದರು. ಈಗ ಕೇವಲ 300 ಕಾರ್ಮಿಕರಿದ್ದಾರೆ. ಐದು ಘಟಕದಲ್ಲಿ ನಾಲ್ಕು ಮುಚ್ಚಿದ್ದಾರೆ. ಈಗ ಗಾರ್ಮೆಂಟ್ಸ್ ಮಾತ್ರ ಉಳಿದಿದೆ. ನಮ್ಮ ಸಮಸ್ಯೆ ಹೇಳಿದರೆ ವರ್ಗಾವಣೆ ಅಥವಾ ಕೆಲಸದಿಂದ ವಜಾ ಮಾಡುತ್ತಾರೆ ಎಂದು ಕಿಡಿಕಾರಿದರು.
ಕಾರ್ಮಿಕ ಹರೀಶ್ ಮಾತನಾಡಿ, ಕಾರ್ಮಿಕರು ಪ್ರತಿಭಟನೆ ಮಾಡಿದಾಗ ಸಂಬಳ ಕೊಡುತ್ತಾರೆ. ಸಂಬಳದಿಂದ ಭವಿಷ್ಯನಿಧಿ ಕಡಿತ ಮಾಡಿ ಸರ್ಕಾರಕ್ಕೆ ಹಣ ಕಟ್ಟದೆ ನಿರ್ಲಕ್ಷ್ಯ ಮಾಡಿದ್ದಾರೆ. ನಮಗೆ ಎರಡು ತಿಂಗಳ ಸಂಬಳದ ಜೊತೆ ಒಂದು ವರ್ಷದ ಭವಿಷ್ಯನಿಧಿ ಬರಬೇಕಾಗಿದೆ ಎಂದು ಆಗ್ರಹಿಸಿದರು.
ಶಿವಮ್ಮ ಮಾತನಾಡಿ, ಆರು ವರ್ಷದಿಂದ ಗಾರ್ಮೆಂಟ್ಸ್ ನಂಬಿ ಜೀವನ ಮಾಡುತ್ತಿದ್ದೇನೆ. ಈಗ ಏಕಾಏಕಿ ಗಾರ್ಮೆಂಟ್ಸ್ ವಾಹನಗಳಿಗೆ ವಿಮೆ ಮತ್ತು ದಾಖಲೆ ಇಲ್ಲವೆಂದು ಕಂಪನಿ ವಾಹನ ನಿಲ್ಲಿಸಿದ್ದಾರೆ. ಸಮಸ್ಯೆ ಕೇಳುವ ಕಾರ್ಮಿಕ ಅಧಿಕಾರಿ ಮತ್ತು ಭವಿಷ್ಯನಿಧಿ ಅಧಿಕಾರಿಗಳು ನಾಪತ್ತೆಯಾಗಿ ದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರಾದ ರಾಕೇಶ್, ರಾಘವೇಂದ್ರ, ಈಶ್ವರ, ಸುರೇಶ್, ಲೊಕೇಶ್, ನಾಗರಾಜು, ಕೃಷ್ಣ, ಮೋಹನ, ಗೋಪಾಲ, ಅಂಬಿಕಾ, ಮಂಜುಳ, ಗಂಗಮ್ಮ, ರತ್ನಮ್ಮ, ಶಶಿ, ವೀರಕ್ಯಾತ, ಹರೀಶ, ರವಿಕುಮಾರ 300ಕ್ಕೂ ಹೆಚ್ಚು ಕಾರ್ಮಿಕರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು