Tumkur: ಪೊಲೀಸ್ ಠಾಣೆಯಿಂದಲೇ ಕಾಣೆಯಾದ ಆರೋಪಿ
ಗೃಹ ಸಚಿವರ ತವರು ಜಿಲ್ಲೆಯಲ್ಲೇ ನಡೆದ ಘಟನೆ
Team Udayavani, Feb 2, 2024, 11:51 AM IST
ತುಮಕೂರು: ಪೊಲೀಸ್ ಠಾಣೆಯಿಂದಲೇ ಕಳ್ಳತನದ ಆರೋಪಿಯೊಬ್ಬ ಕಾಣೆಯಾಗಿರುವ ಘಟನೆ ಗೃಹ ಸಚಿವರ ತವರು ಜಿಲ್ಲೆಯಲ್ಲೇ ನಡೆದಿದೆ.
ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಿಂದ ಎಸ್ಕೆಪ್ ಆದ ಆರೋಪಿ ಸೈಯದ್ ಎಂದು ತಿಳಿದು ಬಂದಿದೆ.
ಕಳ್ಳತನದ ಅಡಿಯಲ್ಲಿ ಆರೋಪಿಯನ್ನು ಸಿಆರ್ ನಂ. 13/2024 ರ ಪ್ರಕರಣದಲ್ಲಿ ಕರೆತಂದಿದ್ದು, ಆರೋಪಿಯನ್ನು ಬಂಧಿಸಿ ಠಾಣೆಯಲ್ಲಿ ಇಡಲಾಗಿತ್ತು. ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿ ಗುಬ್ಬಿ ಠಾಣೆಗೆ ಕರೆತಂದಿದ್ದರು ಎಂದು ತಿಳಿದು ಬಂದಿದೆ.
ಶುಕ್ರವಾರ ಬೆಳಗ್ಗೆ ಸುಮಾರು 4. 30 ರ ಸಮಯದಲ್ಲಿ ಠಾಣೆಯಿಂದ ಆರೋಪಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಆರೋಪಿ ಎಡಗೈ ಮೇಲೆ ಸಿರಿಗನ್ನಡಂ ಬಲಗೈ ಮೇಲೆ ಎಲ್ಲಾ ಧರ್ಮದ ಹಚ್ಚೆ ಇರುವುದಾಗಿ ತಿಳಿದು ಬಂದಿದೆ.
ಗದಗ ಜಿಲ್ಲೆಯ ಹುಲ್ಲುರು ಗ್ರಾಮದ ವಾಸಿ ಸೈಯದ್, ಡ್ಯಾನ್ಸ್ ಕೋರಿಯಾಗ್ರಾಪರ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
Rajinikanth ಬಯೋಪಿಕ್ಗೆ ಭರ್ಜರಿ ತಯಾರಿ; ಬಾಲಿವುಡ್ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ