![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-415x276.jpg)
ಸಾಧನೆಗೆ ಭಗೀರಥ ಪ್ರಯತ್ನ ಅಗತ್ಯ
ಜಯಂತಿ ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ಶ್ರೀರಂಗಯ್ಯ ಸಲಹೆ
Team Udayavani, May 13, 2019, 4:59 PM IST
![tumkur-tdy-7..](https://www.udayavani.com/wp-content/uploads/2019/05/tumkur-tdy-7..-620x405.jpg)
ಕೊರಟಗೆರೆ: ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಿದ್ದರೆ ಮಹರ್ಷಿ ಭಗೀರಥರ ಪ್ರಯತ್ನ ಅನುಸರಿಸಿದರೆ ತಕ್ಕ ಫಲಿತಾಂಶ ಸಿಗಲಿದೆ. ಭಗೀರಥ ಪ್ರಯತ್ನಕ್ಕೆ ಅಷ್ಟೊಂದು ಮಹತ್ವವಿದೆ ಎಂದು ಶಿರಸ್ತೇದಾರ್ ಶ್ರೀರಂಗಯ್ಯ ತಿಳಿಸಿದರು. ಪಟ್ಟಣದ ತಾಲೂಕು ಕಚೆೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಭಗೀರಥ ಉಪ್ಪಾರ ಸಂಘ ಏರ್ಪಡಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಗಂಗೆ ಭೂಮಿಗೆ ಕರೆತಂದ ಮಹಾತ್ಮ: ಮಹರ್ಷಿ ಭಗೀರಥರು ಅನ್ನ, ಆಹಾರಗಳನ್ನು ತ್ಯಜಿಸಿ ಅವಿರತ ತಪಸ್ಸು ಮಾಡಿ, ಭೂಮಿಯನ್ನು ಪವಿತ್ರಗೊಳಿಸಲು ಎಷ್ಟೇ ಅಡೆ ತಡೆ ಎದುರಾದರೂ ಸಹ ಛಲಬಿಡದೇ ಗಂಗೆಯನ್ನು ಭೂಮಿಗೆ ಕರೆತಂದ ಮಹಾ ಪುರುಷರಾಗಿದ್ದಾರೆ ಎಂದು ತಿಳಿಸಿದರು.
ನೀರು ಸಂರಕ್ಷಿಸಿ: ಗಂಗೆ ಎಂದರೆ ನೀರು. ಮನುಷ್ಯನಿಗೆ ನೀರಿನ ಮಹತ್ವ, ಮೌಲ್ಯ ತಿಳಿದಿದ್ದರೂ ಇಂದು ನೀರು ಎಲ್ಲೆಡೆ ಕಲುಷಿತಗೊಳಿಸುತ್ತಿರುವುದು ದುರಂತವಾಗಿದೆ. ನೀರಿನ ಮಹತ್ವವನ್ನು ಎಲ್ಲರೂ ಮನಗಾಣಬೇಕು. ನೀರನ್ನು ಉಳಿಸುವಲ್ಲಿ ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು. ತಾಲೂಕು ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ನಾಗಣ್ಣ ಮಾತನಾಡಿ, ಭಗೀರಥರ ಸಾಧನೆ, ಜೀವನ ಗಾಥೆಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ. ಯಾವುದೇ ವ್ಯಕ್ತಿ ಗುರಿ ಮುಟ್ಟಲು ಸಾಧನೆ, ಭಗೀರಥನ ತ್ಯಾಗ, ಛಲ, ಸದ್ಗುಣಗಳನ್ನು ಅನುಸರಿಸಬೇಕು. ಅವರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ತಿಳಿಸಿದರು.
ನಿವೇಶನ ,.ಜೂರು ಮಾಡಿ: ತಾಲೂಕು ಉಪ್ಪಾರ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ಕಳೆದ 5 ವರ್ಷದ ಹಿಂದೆ ಸರ್ಕಾರದಿಂದ ನಿವೇಶನ ಕೋರಿ ಮನವಿ ಸಲ್ಲಿಸಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಪರಿಗಣಿಸಿ ಮಂಜೂರು ಮಾಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಚನ್ನವೀರಯ್ಯ, ನಕುಲ್, ಚಿಕ್ಕರಾಜು, ರೇವಣ್ಣ, ಉಪ್ಪಾರ ಸಮುದಾಯದ ನಾಗರಾಜು, ಕೀರ್ತಿರಾಜು, ದಾದಾಪೀರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.