ಅನ್ನದಾತರ ಒಪ್ಪಿಗೆ ಇಲ್ಲದೆ ಭೂಮಿ ಸ್ವಾಧೀನ ಸರಿಯಲ್ಲ


Team Udayavani, Feb 13, 2020, 3:00 AM IST

annadatara

ತುಮಕೂರು: ರೈತ ಆಧಾರಿತ ಕೃಷಿ ಉಳಿಸಲು ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಭಯ್ನಾರೆಡ್ಡಿ ತಿಳಿಸಿದರು.ನಗರದ ಕನ್ನಡ ಸಾಹಿತ್ಯ ಸುವರ್ಣ ಸಭಾಂಗಣದಲ್ಲಿ ಬುಧವಾರ ನಡೆದ ದುಂಡು ಮೇಜಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಭೆಗೆ ಸಚಿವರು, ಮಾಜಿ ಸಚಿವರು, ಶಾಸಕರು ಭಾಗವಹಿಸದೆ ರೈತರ ಕಡೆಗಣಿಸುವ ಪರಿಸ್ಥಿತಿ ಗಮನಿಸಿದರೆ ಅವರಿಗೆ ರೈತಪರ ಕಾಳಜಿ ಇಲ್ಲ ಎಂದು ಅರ್ಥವಾಗುತ್ತಿದೆ ಎಂದ‌ು ಬೇಸರಿಸಿದರು.

ಹಲವು ಹೋರಾಟಗಳ ಪ್ರತಿಫ‌ಲವಾಗಿ “ಉಳುವವನೇ ಭೂಮಿಯ ಒಡೆಯ’ ಘೋಷಣೆ ಬಂದಿದ್ದರೂ “ದುಡ್ಡಿದ್ದವನೇ ಭೂಮಿಯ ಒಡೆಯ’ ಎಂಬ ಸ್ಥಿತಿ ನಿರ್ಮಾಣವಾಗುತ್ತಿದೆ. ಕೈಗಾರಿಕೆ, ರೈಲ್ವೆ, ವಿದ್ಯುತ್‌, ವಿಮಾನ ನಿಲ್ದಾಣಗಳ ರಿಯಲ್‌ ಎಸ್ಟೇಟ್‌ ಕಾರಿಡಾರ್‌ ಇತ್ಯಾದಿ ಅಭಿವೃದ್ಧಿ ಹೆಸರಿನಲ್ಲಿ ಹತ್ತಾರು ಸಾವಿರ ಎಕರೆ ಭೂಮಿ ರೈತರ ಒಪ್ಪಿಗೆ ಇಲ್ಲದೆ ಸ್ವಾಧೀನಪಡಿಸಿಕೊಳ್ಳುತ್ತಿರುವುದು ವಿಷಾದನೀಯ ಎಂದರು.

ಭೂಮಿ ಕಂಪನಿಗಳ ಪಾಲು: ರೈತ ವಿರೋಧಿ ಸರ್ಕಾರಗಳ ವಿರುದ್ಧ ಹಲವು ಹೋರಾಟಗಳು ದೇಶಾದ್ಯಂತ ನಡೆಯುತ್ತಿರುವಾಗಲೇ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಗುತ್ತಿಗೆ ಆಧಾರದಲ್ಲಿ ಕಂಪನಿಗಳಿಗೆ ಭೂಮಿ ಕೊಡಲು ಸರ್ಕಾರಗಳು ತುದಿಗಾಲಲ್ಲಿ ನಿಂತಿದ್ದರಿಂದ ಭೂಮಿಗಳು ಕಂಪನಿಗಳ ಪಾಲಾಗಿದೆ. ಇಂತಹ ಸ್ಥಿತಿಯಲ್ಲಿ ದೇಶಕ್ಕೆ ಅನ್ನ ಹಾಕುವ ಅನ್ನದಾನ ಪರ ನಿಲ್ಲಬೇಕಾದದ್ದು ಎಲ್ಲಾ ಕಾರ್ಮಿಕ, ದಲಿತ, ರೈತ ಸಂಘಟನೆಗಳ, ಜನಸಾಮಾನ್ಯರ ಆದ್ಯ ಕರ್ತವ್ಯ ಎಂದರು.

ಈ ಸಾಲಿನ ಬಜೆಟ್‌ನಲ್ಲಿ ಕಾಲಮಿತಿಯೊಳಗೆ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆ ಇತ್ಯರ್ಥಪಡಿಸಿ ಪಹಣಿಯಲ್ಲಿನ ಪೈಕಿ (ಪಿ) ನಂಬರ್‌ನೂ° ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಿಂದ ಘೋಷಣೆ ಮಾಡಿಸಿ ಇದಕ್ಕೆ ಅಗತ್ಯವಾಗಿರುವ ಮಾನವ ಸಂಪನ್ಮೂಲ ಮತ್ತು ಹಣಕಾಸು ಒದಗಿಸಲು ಮುಂದಾಗಬೇಕೆಂದು ಆಗ್ರಹಿಸಿದರು.

ಪ್ರಗತಿಪರ ಚಿಂತಕ ಕೆ.ದೊರೈರಾಜ್‌ ಮಾತನಾಡಿ, ಸರ್ಕಾರ ರಚನೆಯಾದ ಮೇಲೆ ನಿಯಂತ್ರಣ ಮಾಡುವ ಅಧಿಕಾರ ಮಾತ್ರ ಜನರ ಕೈಯಲ್ಲಿಲ್ಲ. ಸಮಸ್ಯೆ ಇತ್ಯರ್ಥಪಡಿಸದೆ ಭೂಕಬಳಿಕೆಗಷ್ಟೇ ಕಾನೂನು ದುರ್ಬಳಕೆಯಾಗುತ್ತಿವೆ. ಆದ್ದರಿಂದ ಹೋರಾಟಗಳಿಂದಷ್ಟೇ ರೈತರಿಗೆ ಭೂಮಿ ಸಿಗುವಂತೆ ಮಾಡಲಿವೆ ಎಂದರು.

ಎಲ್ಲಾ ಸಚಿವರು, ಶಾಸಕರಿಗೂ ಮನವಿ ಸಲ್ಲಿಸಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸುವುದು. ಫೆಬ್ರವರಿ 25ರಂದು ಗಂಗಯ್ಯನಪಾಳ್ಯದಿಂದ ಆರಂಭವಾಗುವ ರೈತ ಪಾದಯಾತ್ರೆ ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ರಾಜ್ಯ ರೈತ ಸಂಘದ ರಂಗಹನುಮಯ್ಯ, ಎಐಕೆಎಸ್‌ನ ಗಿರೀಶ್‌, ಸಿಐಟಿಯುನ ಎನ್‌.ಕೆ.ಸುಬ್ರಹ್ಮಣ್ಯ ಮೊದಲಾದವರು ಪ್ರತಿಕ್ರಿಯಿಸಿದರು.

ಎಐಟಿಯುಸಿ ಗಿರೀಶ್‌, ಪ್ರಾಂತ ರೈತ ಸಂಘದ ದೊಡ್ಡನಂಜಯ್ಯ, ಬಗರ್‌ಹುಕುಂ ಸಾಗವಳಿದಾರರ ಹೋರಾಟ ಸಮಿತಿಯ ನರಸಿಂಹಮೂರ್ತಿ, ರಾಚಪ್ಪ, ಆರ್‌.ಎಸ್‌.ಚನ್ನಬಸವಣ್ಣ, ಕರಿಬಸವಯ್ಯ, ಸಿದ್ದನಂಜಯ್ಯ, ಲೋಕೇಶ್‌, ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸಹ ಸಂಚಾಲಕ ಬಿ.ಉಮೇಶ್‌ ಇದ್ದರು.

ಬಗರ್‌ಹುಕುಂ ಸಾಗುವಳಿ ಸಮಸ್ಯೆ ದೀರ್ಘ‌ವಾಗಿ ಬೆಳೆದು ಬಂದಿದೆ. ಸಮಸ್ಯೆ ಪೂರ್ಣ ಪರಿಹಾರಕ್ಕೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಇದೆ. ಇಂತಹ ಸಮಸ್ಯೆ ಪರಿಹಾರ ಸರ್ಕಾರದ ಕೈಯಲ್ಲಿದೆ. ಇಂತಹ ಸರ್ಕಾರ ರಚಿಸುವ ಶಾಸಕರ ಆಯ್ಕೆ ಮಾಡುವ ಹಕ್ಕು ಮತ್ತು ಶಕ್ತಿ ರೈತರಲ್ಲಿದೆ.
-ಕೆ.ದೊರೈರಾಜ್‌, ಪ್ರಗತಿಪರ ಚಿಂತಕ

ವಿಶಾಲ ತಳಹದಿಯ ಪಕ್ಷಾತೀತ ಹೋರಾಟ ರಾಜ್ಯಮಟ್ಟದಲ್ಲಿ ನಡೆಯಬೇಕು. ಫೆ.25ರಂದು ಗುಬ್ಬಿ ತಾಲೂಕು ಚೇಳೂರಿನ ಗಂಗಯ್ಯನಪಾಳ್ಯದಿಂದ ಹೊರಡುವ ರೈತ ಪಾದಯಾತ್ರೆ ಯಶಸ್ವಿಗೊಳಿಸಲು ಮುಂದಾಗಬೇಕು.
-ಸಿ.ಯತಿರಾಜು, ಪರಿಸರ ಹೋರಾಟಗಾರ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.