ಶಸ್ತ್ರ ಚಿಕಿತ್ಸೆ ಬಳಿಕ ಸ್ವಾಮೀಜಿ ಮಠಕ್ಕೆ ವಾಪಸ್
Team Udayavani, Dec 20, 2018, 6:00 AM IST
ತುಮಕೂರು: ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಶತಾಯುಷಿ, ಭಕ್ತರ ಪಾಲಿನ ನಡೆದಾಡುವ ದೇವರು ಸಿದ್ಧಗಂಗಾ ಡಾ. ಶಿವಕುಮಾರ ಸ್ವಾಮೀಜಿ ಅವರು ಕ್ಷೇಮವಾಗಿ ಮಠಕ್ಕೆ ವಾಪಸ್ಸಾಗಿದ್ದಾರೆ. 13 ದಿನಗಳಿಂದ ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮಧ್ಯಾಹ್ನ ಸಿದ್ಧಗಂಗಾ ಮಠಕ್ಕೆ ಆಗಮಿಸುತ್ತಿದ್ದಂತೆ ಸಾವಿರಾರು ಭಕ್ತರು ಹರ್ಷದಿಂದ ಜಯಕಾರ ಮೊಳಗಿಸಿದರು.
ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಲವಲವಿಕೆಯಿಂದ ಇದ್ದರು. ಇನ್ನೂ ಕೆಲ ದಿನಗಳ ಕಾಲ ಶ್ರೀಗಳಿಗೆ ವಿಶ್ರಾಂತಿ ಅಗತ್ಯವಿದ್ದು, ಹಳೇ ಮಠದಲ್ಲೇ ಶ್ರೀಗಳ ವಿಶ್ರಾಂತಿಗೆ ಸಿದ್ಧತೆ ಮಾಡಲಾಗಿದೆ. ಡಿಸ್ಚಾರ್ಜ್ ಆದ ಬಳಿಕ ವಿಶೇಷ ವಿಮಾನದ ಮೂಲಕ ಶ್ರೀಗಳು ಬೆಂಗಳೂರಿನ ಎಚ್ಎಎಲ್ಗೆ ಬಂದಿಳಿದರು. ಅಲ್ಲಿಂದ ಆ್ಯಂಬುಲೆನ್ಸ್ನಲ್ಲಿ ಶ್ರೀಮಠಕ್ಕೆ ಆಗಮಿಸಿದರು. ನಾಲ್ಕು ಗಂಟೆಗಳ ಪ್ರಯಾಣ ಬೆಳೆಸಿ ಆಗಮಿಸಿದ ಬಳಿಕ ಶ್ರೀಗಳು ಯಾವುದೇ ಆಯಾಸ ಇಲ್ಲದೆ, ಮಧ್ಯಾಹ್ನ ಇಷ್ಟಲಿಂಗ ಪೂಜೆ ನೆರವೇರಿಸಿ ಪ್ರಸಾದ ಸೇವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ