ನಿರಂತರ ತುಂತುರು ಮಳೆ ಕೃಷಿ ಚಟುವಟಿಕೆ ಕುಂಠಿತ


Team Udayavani, Jul 23, 2021, 7:02 PM IST

Agricultural activity

ತುಮಕೂರು: ಮಳೆ ಹೋಗಿ ಮುಗಿಲು ಸೇರೈತೆ, ಬಿತ್ತನೆ ಈವರ್ಷವೂ ಕೈ ಕೊಡಲಿದೆ ಎಂದು ಅಂದುಕೊಂಡಿದ್ದ ರೈತರಿಗೆಹುಸಿಯಾಗುವಂತೆ ಮುಂಗಾರು ಬಿತ್ತನೆ ಮಾಡುವ ಜುಲೈತಿಂಗಳಲ್ಲಿ ಸರಾಸರಿ ವಾಡಿಕೆ ಮಳೆಗಿಂತ ಅಧಿಕ ಮಳೆ ಬಿದ್ದಿದ್ದು,ರೈತರ ಮುಖದಲ್ಲಿ ಮಂದಹಾಸ ಕಂಡುಬಂದಿದೆ.

ಎಲ್ಲ ಹಳ್ಳಿಗಳಲ್ಲಿ ರೈತರು ತಮ್ಮ ತಮ್ಮ ಹೊಲಗಳಲ್ಲಿ ಕೃಷಿ ಚಟುವಟಿಕೆಯಲ್ಲಿತಲ್ಲೀನರಾಗಿದ್ದಾರೆ.ಜಿಲ್ಲಾದ್ಯಂತ ಮುಂಗಾರು ಮಳೆ ಜುಲೈ ತಿಂಗಳಲ್ಲಿ ಧಾರಕಾರವಾಗಿ ಸುರಿದಿದೆ. ಜಿಲ್ಲೆಯಲ್ಲಿ ಜನವರಿ 1ರಿಂದ ಆಗಸ್ಟ್‌1ರವರೆಗೆ ವಾಡಿಕೆ ಮಳೆ ಜುಲೈ ಅಂತ್ಯಕ್ಕೆ 368.6 ಮಿ.ಮೀ.ಮಳೆ ಬೀಳಬೇಕು. ಕಳೆದ ವರ್ಷ 361.1 ಮಿ.ಮೀ. ಮಳೆಬಿದ್ದಿದ್ದು, ಈ ವರ್ಷ ಜುಲೈ ಅಂತ್ಯಕ್ಕೆ 319.9 ಮಿ.ಮೀ. ಮಳೆಬಿದ್ದಿದೆ. ವಾಡಿಕೆ ಮತ್ತು ವಾಸ್ತವಿಕ ಮಳೆಗಿಂತ ಈ ಬಾರಿ ಮಳೆಕಡಿಮೆಯಾಗಿದ್ದರೂ, ಜುಲೈ ತಿಂಗಳಲ್ಲಿ ವಾಡಿಕೆ ಮತ್ತು ವಾಸ ¤ವಿಕಮಳೆಗಿಂತ ಅಧಿಕ ಮಳೆ ಬಿದ್ದಿದೆ. ಜುಲೈ ತಿಂಗಳಲ್ಲಿ ವಾಡಿಕೆ ಮಳೆ 75.4 ಮಿ.ಮೀ. ಬೀಳಬೇಕು.

ಕಳೆದ ವರ್ಷ ಕೇವಲ 29.3ಮಿ.ಮೀ. ಬಿದ್ದಿತ್ತು. ಈ ವರ್ಷ 132.4 ಮಿ.ಮೀ. ಮಳೆಜಿಲ್ಲಾದ್ಯಂತ ಆಗುತ್ತಿರುವುದು ರೈತರಲ್ಲಿ ಸಂತಸ ಮೂಡಿದೆ.ಆದರೆ, ರೈತರು ಮುಂಗಾರು ಚಟುವಟಿಕೆ ಆರಂಭಿಸಲು ನಿರತರಾದರೆಆಗಾಗಬರವು ನೀಡದೇಕಳೆದಹದಿನೈದು ದಿನಗ ಳಿಂದನಿರಂತರವಾಗಿ ಸುರಿಯುತ್ತಿರುವ ತುಂತುರು ಮಳೆ ಯಿಂದಕೃಷಿ ಚಟುವಟಿಕೆ ಮಾಡಲು ತೊಂದರೆ ಉಂಟಾಗುತ್ತಿದೆ.
ಕೃಷಿ ಕಾಯಕದಲ್ಲಿ ತಲ್ಲೀನ: ಮಳೆಯಿಂದ ಸ್ವಲ್ಪ ಬರವುನೀಡಿದರೂ ರೈತರು ಸಂತಸದಿಂದ ಕುಟುಂಬ ಸಮೇತವಾಗಿ ಹೊಲಗಳಲ್ಲಿ ಬಿತ್ತನೆ ಕಾರ್ಯವನ್ನು ಚುರುಕುಗೊಳಿಸುತ್ತಿದ್ದಾರೆ.ನೇಗಿಲುಹಿಡಿದುಭೂಮಿಯನ್ನುಹಸನು ಮಾಡುತ್ತಿರುವುದುಒಂದೆಡೆಯಾದರೆ, ಇನ್ನು ಕೆಲವು ಕಡೆಗಳಲ್ಲಿ ರಾಗಿ ಸಸಿ ಹಾಕುತ್ತಿರುವುದು, ಕಾಳು ಬಿತ್ತುತ್ತಿರುವುದು ಕಂಡು ಬರುತ್ತಿದ್ದು,ಇಡೀ ಜಿಲ್ಲೆಯಲ್ಲಿ ಜುಲೈ ತಿಂಗಳ ವಾತಾವರಣದಂತೆ ಆಗಸ್ಟ್‌ತಿಂಗಳಲ್ಲೂ ಮಳೆ ಸಮರ್ಪಕವಾಗಿ ಬಂದರೆ ರೈತರಿಗೆ ಹರ್ಷಮೂಡಲಿದೆ.

ಆದರೆ, ಎಲ್ಲಿ ಮಳೆ ಕೈಕೊಡುವುದೋ ಎನ್ನುವಆತಂಕದಿಂದಲೇ ರೈತರು ಕೃಷಿಯಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 4.02 ಲಕ್ಷ ಹೆಕ್ಟೇರ್‌ಬಿತ್ತನೆ ಗುರಿ ಪೈಕಿ ಜುಲೈ 22ಕ್ಕೆ 31 ಸಾವಿರ ಹೆಕ್ಟೇರ್‌ ಮಾತ್ರಬಿತ್ತನೆಯಾಗಿದೆ. ವಾಡಿಕೆಯಂತೆ ಜುಲೈ ಅಂತ್ಯಕ್ಕೆ ಶೇ.56ರಷ್ಟುಬಿತ್ತನೆಯಾಗಬೇಕಿದ್ದು, ಈ ಬಾರಿ ಕಡಿಮೆ ಬಿತ್ತನೆಯಾಗಿರುವುದು ಕಂಡುಬಂದಿದೆ.

ಶೇಂಗಾ ಬಿತ್ತನೆ ಸಂಪೂರ್ಣ ಇಳಿಮುಖ: ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ ಭಾಗಗಳಲ್ಲಿ ಪ್ರಧಾನಬೆಳೆಯಾಗಿರುವ ಶೇಂಗಾ ಬಿತ್ತನೆ ಈ ಬಾರಿ ಸಂಪೂರ್ಣ ಇಳಿಮುಖವಾಗಿದೆ. ಈ ಭಾಗದಲ್ಲಿ 1.20 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬಿತ್ತನೆಯಾಗಬೇಕಾಗಿತ್ತು.

ಕೇವಲ 31 ಸಾವಿರಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು, ಶೇ.24ರಷ್ಟುಮಾತ್ರ ಪ್ರಗತಿಯಾಗಿದೆ. ಕಳೆದ ವರ್ಷ ಈ ವೇಳೆಗೆ ಶೇ.36ರಷ್ಟು ಬಿತ್ತನೆಯಾಗಿತ್ತು. ಜೂನ್‌-ಜುಲೈ ತಿಂಗಳಲ್ಲಿ ಶೇಂಗಾಬಿತ್ತನೆಗೆ ಸಕಾಲವಾಗಿದೆ. ಆದರೆ, ಜೂನ್‌ ತಿಂಗಳಲ್ಲಿ ಪಾವಗಡ, ಶಿರಾ, ಮಧುಗಿರಿ, ಕೊರಟಗೆರೆ ಭಾಗಗಳಲ್ಲಿ ನಿರೀಕ್ಷಿಸಿದಷ್ಟು ಮಳೆ ಬಾರದ ಹಿನ್ನಲೆ ಬಿತ್ತನೆಕುಂಠಿತವಾಗಿದೆ.ರಾಗಿ ಬೆಳೆಯುವ ತಾಲೂಕುಗಳಾದ ತುಮಕೂರು, ಕುಣಿಗಲ್‌, ತುರುವೇಕೆರೆ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರುತಾಲೂಕುಗಳಲ್ಲಿ ಈ ವೇಳೆಗೆ ಶೇ.40ರಷ್ಟು ರಾಗಿ ಬಿತ್ತನೆಯಾಗಬೇಕಾಗಿತ್ತು.

ಆದರೆ, ಮಳೆಯ ಅಭಾವದಿಂದ ಬಿñನೆ ‌¤ ಕುಂಠಿತಗೊಂಡಿದೆ. 1.50 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ರಾಗಿ ಬಿñನೆ ‌¤ಮಾಡಬೇಕಾಗಿದ್ದು, 7 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರಬಿತ್ತನೆಯಾಗಿದ್ದು, ಶೇ.5ರಷ್ಟು ಮಾತ್ರ ಬಿತ್ತನೆ ಯಾಗಿದೆ, ಕಳೆದವರ್ಷ ಶೇ. 18ರಷ್ಟು ಈ ವೇಳೆಗೆ ಬಿತ್ತನೆಯಾಗಿತ್ತು. ಜಿಲ್ಲೆಯಲ್ಲಿರಾಗಿ ಬಿತ್ತನೆಗೆ ಆಗಸ್ಟ್‌ ಮೊದಲ ವಾರದವರೆಗೆ ಕಾಲಾವಕಾಶವಿದೆ. ಜುಲೈ ತಿಂಗಳಲ್ಲಿ ಧಾರಾಕಾರವಾಗಿ ಮಳೆ ಬಿದ್ದಿದೆ. ಮಧ್ಯಮಧ್ಯ ಬರವು ನೀಡದ ಹಿನ್ನೆಲೆ ಬಿತ್ತನೆ ಕುಂಠಿತಗೊಂಡಿದೆ. ಮಳೆಬರವು ನೀಡಿದರೆ ರಾಗಿ ಬಿತ್ತನೆಕಾರ್ಯ ಚುರುಕಾಗಲಿದೆ.

ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.