ಏಡ್ಸ್‌ ತಡೆಗೆ ಜಾಗೃತಿ ಅವಶ್ಯಕ


Team Udayavani, Dec 4, 2019, 4:36 PM IST

tk-tdy-2

ಕೊರಟಗೆರೆ: ಎಚ್‌ಐವಿ ಸೋಂಕು ತಡೆಗಟ್ಟುವಲ್ಲಿ ಯುವಜನತೆ ಪಾತ್ರ ಅತಿ ಮುಖ್ಯವಾಗಿದೆ. ಆರೋಗ್ಯವಂತೆ ಸಮಾಜವನ್ನು ನಿರ್ಮಿಸ ಬೇಕಾದರೆ ಪ್ರತಿಯೊಬ್ಬರೂ ಈ ಮಾರಕ ರೋಗದ ಬಗ್ಗೆ ಜಾಗೃತರಾಗಿರಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗಭೂಷಣ್‌ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ವಿಶ್ವಏಡ್ಸ್‌ ದಿನಾಚರಣೆ ಪ್ರಯುಕ್ತ ತಾಲೂಕು ಆರೋಗ್ಯ ಇಲಾಖೆ ಏರ್ಪಡಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಎಚ್‌ಐವಿ, ಏಡ್ಸ್‌ ನಿಯಂತ್ರಿಸುವಲ್ಲಿ ಶಾಲಾಕಾಲೇಜುಗಳಲ್ಲಿ ಏಡ್ಸ್‌ ಜಾಗೃತಿ ಕಾರ್ಯಕ್ರಮಗಳ ಮುಖಾಂತರ ತಿಳಿವಳಿಕೆ ನೀಡಿದರೆ ಗಣನೀಯವಾಗಿ ಸೋಂಕು ನಿಯಂತ್ರಿಸ ಬಹುದು ಎಂದರು.

ಈ ಸೋಂಕು ಹರಡಲು ಅಸುರಕ್ಷಿತ ಲೈಂಗಿಕತೆ ಮುಖ್ಯ ಕಾರಣವಾಗಿದೆ, ಆದ್ದರಿಂದ ಸ್ವತ್ಛ ಜೀವನದ ಬಗ್ಗೆ ಶಾಲಾಕಾಲೇಜುಗಳಲ್ಲಿ ತಿಳಿವಳಿಕೆ ನೀಡುವುದು ಅವಶ್ಯಕತೆ ಇದೆ ಎಂದು ತಿಳಿಸಿದರು.

ನಿಯಂತ್ರಣ ವಿಧಾನ: ಏಕೈತ ಸಂಗಾತಿಯೊಂದಿಗೆಲೈಂಗಿಕ ಸಂಪರ್ಕ, ಸುರಕ್ಷತೆ ಲೈಂಗಿಕತೆಗೆ ನಿರೋಧ್‌ ಬಳಸುವುದು, ಹೊಸ ಸೂಜಿ, ಸಿರಂಜ್‌ಗಳ ಬಳಕೆ, ಗರ್ಭಿಣಿ ಮಹಿಳೆಯರ ಎಚ್‌ಐವಿ ಪರೀಕ್ಷೆಯನ್ನು ಸ್ವಯಂ ಪ್ರೇರಿತವಾಗಿ ಐಸಿಟಿಸಿಯಲ್ಲಿ ಮಾಡಿಸಿ ಕೊಂಡು, ಸೋಂಕಿದ್ದಲ್ಲಿ ಎಆರ್‌ಟಿ, ಎಆರ್‌ವಿ ಚಿಕಿತ್ಸೆಯನ್ನು ಪ್ರಾರಂಭಿಸು ವುದರಿಂದ ಎಚ್‌ಐವಿ ಸೋಂಕು ಹರಡುವುದನ್ನು ನಿಯಂತ್ರಿಸ ಬಹುದು ಎಂದರು.

ಇವುಗಳಿಂದ ಹರಡುವುದಿಲ್ಲ: ಸೊಳ್ಳೆ ಕೀಟಗಳು ಕಡಿಯುವುದರಿಂದ, ಸಾರ್ವಜನಿಕ ಶೌಚಾಲಯ ಬಳಸುವುದರಿಂದ, ಸೋಂಕಿತರು ಕೆಮ್ಮಿದಾಗ, ಸೀನಿದಾಗ, ಸೋಂಕಿತರ ಜೊತೆ ಯಲ್ಲಿ ಊಟ ಮಾಡುವುದರಿಂದ, ಸೋಂಕಿತರ ಬಟ್ಟೆಉಪಯೋಗಿಸುವುದರಿಂದ, ಸೋಂಕಿತ ರೊಂದಿಗೆ ಮಾತನಾಡುವುದರಿಂದ, ಸೋಂಕಿತರೊಂದಿಗೆ ಒಂದೇ ಹಾಸಿಗೆಯಲ್ಲಿ ಮಲಗುವುದರಿಂದ, ಸೋಂಕಿತರೊಂದಿಗೆ ಕೈ ಕುಲುಕುವು ದರಿಂದ ಎಚ್‌ಐವಿ ಹರುಡುವುದಿಲ್ಲ.

ಪರೀಕ್ಷೆ ಎಲ್ಲಿ ಮಾಡಿಸುವುದು: ಎಚ್‌ಐವಿಪರೀಕ್ಷೆಯನ್ನು ವ್ಯಕ್ತಿಯು ಇಷ್ಟಪಟ್ಟಲ್ಲಿ ಸಮಗ್ರ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸಾ ಕೇಂದ್ರಗಳಲ್ಲಿ(ಐಸಿಟಿಸಿ) ಪರೀಕ್ಷಿಸಿಕೊಳ್ಳಬಹುದು. ಜಿಲ್ಲೆಯಲ್ಲಿನ ಎಲ್ಲಾ 24/7 ಪ್ರಾಥ ಮಿಕ ಆರೋಗ್ಯ ಕೇಂದ್ರಗಳಲ್ಲಿ ಐಸಿಟಿಸಿ ಪರೀಕ್ಷಾ ಸೌಲಭ್ಯಗಳನ್ನು ಉಚಿತವಾಗಿ ಪಡೆಯಬಹುದು. ಏಡ್ಸ್‌ ನಿಯಂತ್ರಣಾಧಿಕಾರಿ ದೇವರಾಜು, ಐಸಿಟಿಸಿ ಕೌನ್ಸಿಲರ್‌ ರವಿಚಂದ್ರ, ಉಮಾಶಂಕರ್‌, ಹರಿಪ್ರಸಾದ್‌ ಸೇರಿದಂತೆ ಆಶಾ ಕಾರ್ಯಕರ್ತರು ಇದ್ದರು. ಕಾರ್ಯಕ್ರಮಕ್ಕೂ ಮುನ್ನಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ಕಾರ್ಯಕ್ರಮ ನಡೆಸಿ ಅರಿವು ಮೂಡಿಸಿದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.