ಭೂ ಕಂದಾಯ ಕಾಯ್ದೆ ತಿದ್ದುಪಡಿ ಕೈಬಿಡಿ: ಟಿಬಿಜೆ


Team Udayavani, Sep 25, 2020, 3:41 PM IST

ಭೂ ಕಂದಾಯ ಕಾಯ್ದೆ ತಿದ್ದುಪಡಿ ಕೈಬಿಡಿ: ಟಿಬಿಜೆ

ಶಿರಾ: ನಗರ ಪರಿಮಿತಿ 18ಕಿ.ಮೀ. ಒಳಗೆ ಬಿ ಖರಾಬು ಜಮೀನು ಸಕ್ರಮಗೊಳಿಸಿ ಮಾರಾಟ ಮಾಡಲು ಕರ್ನಾಟಕ ಭೂಕಂದಾಯ ಕಾಯ್ದೆ 1966ರ ಕಲಂ 64(2) ಮತ್ತು 69ಕ್ಕೆ ತಿದ್ದುಪಡಿ ಮಾಡುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯ 18 ಕಿ.ಮೀ. ವ್ಯಾಪ್ತಿಯೊಳಗೆ ಸುಮಾರು 21,000 ಎಕರೆಯಷ್ಟು ಬಿ ಖರಾಬು ಜಮೀನನ್ನು ಸಕ್ರಮಗೊಳಿಸಲು ಭೂಕಂದಾಯ ಕಾಯ್ದೆ ತಿದ್ದುಪಡಿ ಮಾಡುವ ಬಗ್ಗೆ ಉಪಯೋಗಕ್ಕೆ ಬಾರದಿರುವ ಬಡಾವಣೆಯಲ್ಲಿರುವ ನಿವೇಶನದಾರರಿಂದ ಒತ್ತುವರಿಯಾಗಿರುವ ಆಸ್ತಿಗಳನ್ನು ಮಾರುಕಟ್ಟೆ ಬೆಲೆಯ ನಾಲ್ಕುಪಟ್ಟು ಶುಲ್ಕ ವಿಧಿಸಿ ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ಆದಾಯ ತರುವ ನಿಟ್ಟಿನಲ್ಲಿ ಹಾಲಿ ಇರುವ ಭೂಕಂದಾಯ ಕಾಯ್ದೆ 1966ರ ಕಲಂ (64(2) ಮತ್ತು 69 ಕ್ಕೆ ತಿದ್ದುಪಡಿ ಮಾಡಿ ಮಾರ್ಪಡಿಸಲು ಹೊರಟಿರುವುದು ಅವೈಜ್ಞಾನಿಕವಾಗಿದೆ ಎಂದಿದ್ದಾರೆ.

ಕರ್ನಾಟಕ ಸರ್ಕಾರದ ಭೂಕಂದಾಯ ನಿಯಮಗಳಲ್ಲಿ ಬಿ ಖರಾಬು ಜಮೀನು ಮಂಜೂರಾತಿಗೆ ಅವಕಾಶ ನೀಡಿರುವುದಿಲ್ಲ. ಚಾಲ್ತಿಯಲ್ಲಿರುವ ಕಾನೂನಿನ ಮೂಲ ಉದ್ದೇಶ ಬಿ ಖರಾಬು ಜಮೀನು ಬೇರೆ ಉದ್ದೇಶಕ್ಕೆ ಪರಭಾರೆ ಮಾರಾಟ ಮಾಡಬಾರದೆಂಬುದೇ ಆಗಿದೆ. ಬಿ ಖರಾಬು ಜಮೀನು ಖಾಸಗಿ ವ್ಯಕ್ತಿಯ ಜಮೀನಿನಲ್ಲಿ, ಬಡಾವಣೆಗಳಲ್ಲಿ ಹಾದು ಹೋಗಿರುವ ಹಳ್ಳ, ಸಣ್ಣ ಹಳ್ಳ, ಜರಿ, ಕಾಲುದಾರಿ ಬಂಡಿದಾರಿಗಳನ್ನು ಅಳತೆ ಪ್ರಕಾರ ನಮೂದಿಸಲಾಗಿದ್ದು, ಕೃಷಿಯೇತರ ಉದ್ದೇಶಕ್ಕಾಗಲೀ, ಖಾಸಗಿ ವ್ಯಕ್ತಿಯಾಗಲೀ ಬಳಕೆ ಮಾಡುವಂತಿಲ್ಲ ಮತ್ತು ಹಸ್ತಾಂತರ ಮಾಡುವಂತೆಯೂ ಇಲ್ಲ. ನಗರ ಪ್ರದೇಶಗಳಲ್ಲಿರುವ ಬಡಾವಣೆಗಳಲ್ಲಿ ನಿವೇಶನಗಳ ಮಧ್ಯೆ ಇರುವ ಬಿ ಖರಾಬುನ್ನು ಮಂಜೂರು ಮಾಡಲು ಅಥವಾ ಮಾರಾಟ ಮಾಡುವುದು, ಅಂದರೆ ಸಾರ್ವಜನಿಕ ರಸ್ತೆ, ಓಣಿ ಸೇತುವೆ, ಹಳ್ಳಕೊಳ್ಳಗಳು, ನದಿಗಳು ಸರೋವÃಗಳು ಕೆರೆ, ಕಟ್ಟೆ ಇತ್ಯಾದಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದಂತೆಯೇ ಆಗುತ್ತದೆ. ಭೂ ದಾಖಲೆಗಳ ವರ್ಗೀಕರಣದ ಮೂಲ ಉದ್ದೇಶವನ್ನೇ ಬುಡಮೇಲು ಮಾಡಿದಂತೆ ಆಗುತ್ತದೆ ಎಂದು ತಿಳಿಸಿದ್ದಾರೆ. ಸರ್ಕಾರ ಭೂಕಂದಾಯಕಾಯ್ದೆ ತಿದ್ದುಪಡಿಯನ್ನು ಕೈಬಿಟ್ಟು ಸರ್ಕಾರದ ಆಸ್ತಿಗಳನ್ನು ರಕ್ಷಣೆ ಮಾಡಲು ಹಾಗೂ ಒತ್ತುವರಿಗಳನ್ನು ತೆರವುಗೊಳಿಸಲು ಇನ್ನೂ ಹೆಚ್ಚಿನ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.