ಕಾಡು ಪ್ರಾಣಿಗಳ ದಾಳಿ ಹೆಚ್ಚಳ; ಜನರಲ್ಲಿ ಆತಂಕ


Team Udayavani, Oct 19, 2019, 6:11 PM IST

tk-tdy-2

ತುಮಕೂರು: ಮಿತಿ ಮೀರಿದ ಗಣಿಗಾರಿಕೆಯಿಂದ ಕಾಡು ನಾಶವಾಗುತ್ತಿರುವುದರಿಂದ ಕಾಡು ಪ್ರಾಣಿಗಳು ಆಹಾರ ಅರಸಿ ಗ್ರಾಮಗಳಿಗೆ ಬರುವುದು ಸಾಮಾನ್ಯವಾಗಿದೆ ಎಂಬುದಕ್ಕೆ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಬನ್ನಿಕುಪ್ಪೆ ಸಮೀಪ ನಡೆದ ಘಟನೆ ಸಾಕ್ಷಿ.

ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಬನ್ನಿಕುಪ್ಪೆ ಸಮೀಪದ ಅರಣ್ಯಕ್ಕೆ ಹೊಂದಿಕೊಂಡಿರುವ ಜಮೀನಿನಲ್ಲಿ ಲಕ್ಷ್ಮಮ್ಮ (60) ಜಾನುವಾರು ಮೇಯಿಸಲು ಹೋಗಿದ್ದಾಗ ದಾಳಿ ಮಾಡಿ ಕೊಂದಿದ್ದು, ಮನುಷ್ಯನ ರಕ್ತದ ರುಚಿ ನೋಡಿರುವ ಚಿರತೆ ಮತ್ತೆ ಜನರ ಮೇಲೆ ದಾಳಿ ಮಾಡುತ್ತದೆ ಎನ್ನುವ ಆತಂಕ ಜನರಲ್ಲಿ ಮೂಡಿದೆ.

ಕಾಡು ನಾಶದಿಂದ ಕಾಡಿನಲ್ಲಿರುವ ಪ್ರಾಣಿಗಳು ಆಹಾರ ಹುಡುಕಿಕೊಂಡು ಗ್ರಾಮಗಳತ್ತ ಬರುತ್ತಿದ್ದು, ಹೊಲ ತೋಟಗಳಲ್ಲಿ ಕೆಲಸ ಮಾಡಲು ರೈತರು ಭಯಭೀತರಾಗುವ ಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಚಿರತೆ, ಕುರಿ, ನಾಯಿಗಳ ಮೇಲೆ ದಾಳಿ ಮಾಡಿ ರಕ್ತ ಹೀರುತಿತ್ತು. ಘಟನೆಯಿಂದ ಈ ಭಾಗದ ರೈತರು ತೀವ್ರ ಆತಂಕಗೊಂಡಿದ್ದು, ನರಭಕ್ಷಕ ಚಿರತೆ ಹಿಡಿಯಲು ಅರಣ್ಯ ಸಿಬ್ಬಂದಿ ಟೊಂಕ ಕಟ್ಟಿ ನಿಂತಿದ್ದಾರೆ.

ದಾಳಿ ಮಾಡಿದ್ದ ಜಾಗಕ್ಕೆ ಮತ್ತೆ ಚಿರತೆ ಬರುವ ಅಂದಾಜಿನಲ್ಲಿ ಎರಡು ಬೋನು ಇಟ್ಟು ಅರಣ್ಯ ಇಲಾಖೆ ಅಧಿಕಾರಿಗಳು ಕಾಯುತ್ತಿದ್ದಾರೆ. ಚಿರತೆ ಹಿಡಿಯಲು ಅನುಮತಿಯನ್ನೂ ಪಡೆದಿದ್ದಾರೆ. ಅರಣ್ಯ ಇಲಾಖೆಯವರೂ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಸಂಜೆ ನಂತರ ಜಮೀನುಗಳಿಗೆ ಹೋಗಬಾರದು ಎಂದು ಸೂಚನೆ ನೀಡಿದ್ದಾರೆ. ನರಭಕ್ಷಕ ಚಿರತೆ ಹಿಡಿಯಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಆಗಿಂದಾಗ್ಗೆ ಕಾಡಾನೆಗಳು ಬಂದು ಆತಂಕ ಸೃಷ್ಟಿಸುತಿತ್ತು. ಆದರೆ ಈಗ ಗ್ರಾಮೀಣ ಪ್ರದೇಶದಲ್ಲಿ ಚಿರತೆಗಳ ಕಾಟ ಹೆಚ್ಚುತ್ತಿದೆ.

ಈ ಹಿಂದೆ ತಿಪಟೂರು ತಾಲೂಕಿನಲ್ಲಿ ಮಗುವಿನ ಮೇಲೆ ಚಿರತೆ ದಾಳಿ ಮಾಡಿತ್ತು. ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್‌, ತಿಪಟೂರು ತಾಲೂಕು ಸೇರಿ ಇತರೆ ಭಾಗಗಳಲ್ಲಿ ಚಿರತೆ ಕಾಟ ದಿಂದ ಜನರು ನೊಂದಿದ್ದರು. ಕೊರಟಗೆರೆ ತಾಲೂಕಿನಲ್ಲಿ ಇತ್ತೀಚೆಗೆ 2 ದಿನಗಳಲ್ಲಿ 3 ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು ಬೇರೆಕಡೆ ಸ್ಥಳಾಂತರಿಸಿದ್ದರು.

ಆರು ವರ್ಷಗಳಲ್ಲಿ ಮೂರು ಬಾರಿ ಚಿರತೆ ನಗರಕ್ಕೆ ಬಂದು ಜನರಲ್ಲಿ ಭಯ ಉಂಟುಮಾಡಿದೆ. ನಗರದ ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ನುಗ್ಗಿದ್ದ ಚಿರತೆಗಳು ಅಲ್ಲಿನ ವಿದ್ಯಾರ್ಥಿಗಳು ಮತ್ತು ನಗರದ ನಾಗರಿಕರನ್ನು ಬೆಚ್ಚಿ ಬೀಳುವಂತೆ ಮಾಡಿದ್ದವು. ಆ ನಂತರ ಹನುಮಂತಪುರದಲ್ಲಿ ಚಿರತೆ ಕಂಡು ಬಂದಿತ್ತು. 2018ರ ಜ.20ರಂದು ತುಮಕೂರಿನ ಜಯನಗರದ ಮನೆಗೆ ಚಿರತೆ ನುಗ್ಗಿ ಅವಾಂತರ ಸೃಷ್ಟಿಸಿತ್ತು. ರಂಗನಾಥ್‌ ಮನೆಗೆ ದಿಢೀರನೆ ನುಗ್ಗಿದ ಪರಿಣಾಮ ಆತಂಕಗೊಂಡ ಅತ್ತೆ, ಸೊಸೆ ಮನೆಯ ಬಾತ್‌ ರೂಂನಲ್ಲಿ ಸೇರಿಕೊಂಡು ಪ್ರಾಣ ಉಳಿಸಿ ಕೊಂಡಿದ್ದರು. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾತ್‌ ರೂಂ ಕಿಟಕಿ ಹೊಡೆದು ಅತ್ತೆ ಸೊಸೆಯನ್ನು ರಕ್ಷಿಸಿದ್ದರು. ಸತತ ಕಾರ್ಯಚರಣೆ ನಡೆಸಿ ಚಿರತೆಗೆ ಅರಿ‌ಳಿಕೆ ಮದ್ದು ನೀಡಿ ಮನೆಯೊಳಗೆ ಅಡಗಿ ಕುಳಿತಿದ್ದ ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.

 

-ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.