ಆತಂಕ ಮೂಡಿಸಿದ ಸೋಂಕಿತನ ಹಿಸ್ಟರಿ

ಗುಜರಾತ್‌ ಮೂಲದ ಧರ್ಮಪ್ರಚಾರಕನಿಂದ ಜಿಲ್ಲೆಗೆ ಮತ್ತೆ ಬಂದ ಕೋವಿಡ್

Team Udayavani, Apr 27, 2020, 5:35 PM IST

ಆತಂಕ ಮೂಡಿಸಿದ ಸೋಂಕಿತನ ಹಿಸ್ಟರಿ

ತುಮಕೂರು: ಇಡೀ ಜಗತ್ತನ್ನೇ ಭೀತಿಗೊಳಿಸಿ ನಮ್ಮ ದೇಶದಲ್ಲಿಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ವೈರಸ್‌ ರಾಜ್ಯದಲ್ಲಿ ಕದಂಬ ಬಾಹು ಹೆಚ್ಚಿಸಿ ಕೊಳ್ಳುತ್ತಿರುವ ಈ ಮಹಾ ಮಾರಿಯಿಂದ ಕಲ್ಪತರು ನಾಡು ಮುಕ್ತಿ ಹೊಂದಿತು ಎಂದು ನಿರಾಳರಾಗಿದ್ದ ಜನರಿಗೆ ಮತ್ತೆ ಆತಂಕ ಸೃಷ್ಟಿಸುವಂತೆ ಕೋವಿಡ್‌-19ರ ಸೋಂಕಿತ ಪಿ-447 ವ್ಯಕ್ತಿ ನಗರದ ಮರಳೂರು ದಿಣ್ಣೆ ಮತ್ತು ಮಂಡಿಪೇಟೆಯಲ್ಲಿ ಹಲವು ಬಾರಿ ಸುತ್ತಾಡಿರುವುದು ನಗರದ ನಾಗರಿಕರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ದೆಹಲಿಗೆ ಹೋಗಿಬಂದಿದ್ದ ಶಿರಾ ವೃದ್ಧನಿಗೆ ಕೋವಿಡ್ ಕಾಣಿಸಿಕೊಂಡು ಆತ ಮೃತಪಟ್ಟ, ಆನಂತರ ಅವರ 13 ವರ್ಷದ ಮಗನಿಗೆ ಸೋಂಕು ಕಾಣಿಸಿ ಕೊಂಡಿತು, ಆತ ಗುಣಮುಖನಾಗಿ ಬಂದು 25 ದಿನಗಳವರೆಗೂ ಯಾವುದೇ ಸೋಂಕು ಜಿಲ್ಲೆಯಲ್ಲಿ ಕಂಡು ಬರದ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಕೋವಿಡ್  ತೊಲಗಿತು ಎಂದು ನಿರಾಳರಾಗಿದ್ದರು. ಆದರೆ ಗುಜರಾತ್‌ ಮೂಲದ ಧರ್ಮ ಪ್ರಚಾರಕ ನಗರದ ಪಿ.ಎಚ್‌.ಕಾಲೋನಿ ಮಸೀದಿಯಲ್ಲಿ ತಂಗಿದ್ದ ಆತನಿಗೆ ಸೋಂಕು ತಗಲಿರು ವುದೇ ಈಗ ನಗರದ ಜನರನ್ನು ಬೆಚ್ಚಿ ಬೀಳಿ ಸುತ್ತಿದೆ. ಈ ಧರ್ಮಪ್ರಚಾರಕ ಪಿ-447ರ ಸೋಂಕಿತ ನಗರದ ವಿವಿಧ ಕಡೆ ಪ್ರವಾಸ ಮಾಡಿದ್ದಾರೆ. ಪ್ರಮುಖವಾಗಿ ಮರಳೂರು ದಿಣ್ಣೆ ಮತ್ತು ಮಂಡಿಪೇಟೆಗೆ ಹೆಚ್ಚು ಸಂಚಾರ ಮಾಡಿರುವುದೇ ಜನರಲ್ಲಿ ಭೀತಿ ಹೆಚ್ಚಲು ಕಾರಣವಾಗಿದೆ ಎಂದರು.

ಈ ಎರಡು ಪ್ರದೇಶಗಳಿಗೆ ಆಶಾ ಮತ್ತು ಆರೋಗ್ಯ ಸಿಬ್ಬಂದಿ ಪ್ರತಿನಿತ್ಯ ಮನೆಮನೆಗೆ ತೆರಳಿ ಜ್ವರ, ಕೆಮ್ಮು ಮತ್ತು ಶೀತ ಸೇರಿದಂತೆ ರೋಗ ಲಕ್ಷಣಗಳಿರುವ ಬಗ್ಗೆ ಸಮೀಕ್ಷೆ ನಡೆಸ
ಲಿದ್ದಾರೆ. ಸಂಪೂರ್ಣ ಸೀಲ್‌ಡೌನ್‌ ಆಗಿರುವ ಪಿ.ಎಚ್‌.ಕಾಲೋನಿಯನ್ನು ಕಂಟೈನ್‌ಮೆಂಟ್‌ ಝೋನ್‌ ಆಗಿ ಪರಿವರ್ತಿಸಲಾಗಿದೆ. ಈ ಪ್ರದೇಶ ದಲ್ಲಿ 452 ಮನೆಗಳಿವೆ. 1900ಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಇನ್ನು ಈತ ಪ್ರವಾಸ ಮಾಡಿರುವ ಮಂಡಿ ಪೇಟೆ ಮತ್ತು ಮರಳೂರು ದಿಣ್ಣೆ ಹೆಚ್ಚು ಜನ ನಿಬಿಡ ಪ್ರದೇಶವಾಗಿದೆ ಇದನ್ನು ಬಫ‌ರ್‌ ಜೋನ್‌ ಎಂದು ಪರಿಗಣಿಸಲಾಗಿದ್ದು ಇಲ್ಲಿದ್ದ
ಕೆಲವರನ್ನು ತಪಾಸಣೆಗೆ ಒಳಪಡಿಸಲಾಗಿದೆ ಇದು ಜನರಲ್ಲಿ ಹೆಚ್ಚು ಆತಂಕ ಮೂಡಲು ಕಾರಣವಾಗಿದೆ.

ಜಿಲ್ಲೆಯಲ್ಲಿಗ ಹೋಂ ಕ್ವಾರೆಂಟೈನ್‌ನಲ್ಲಿ 370, ಐಸೋಲೇಷನ್‌ನಲ್ಲಿ 480, ಆಸ್ಪತ್ರೆಯ ಐಸೋಲೇಷನ್‌ನಲ್ಲಿ 90 ಮಂದಿ ಇದ್ದಾರೆ. ಇದುವರೆಗೆ 1437 ಜನರ ಗಂಟಲುಸ್ರಾವ ಮಾದರಿ ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 1170 ಮಾದರಿಗಳು ನೆಗೆಟಿವ್‌ ಎಂದು ದೃಢಪಟ್ಟಿದೆ. ಇನ್ನೂ 252 ತಪಾಸಣೆಯ ವರದಿ ಬಾಕಿ ಇದ್ದು ಯಾರಲ್ಲಿ ಕೋವಿಡ್ ವಕ್ಕರಿಸಿದೆ
ಎನ್ನುವ ಭೀತಿ ಜಿಲ್ಲೆಯ ಜನರನ್ನು ಕಾಡುತ್ತಿದೆ.

ಕೋವಿಡ್ ಸೋಂಕಿತ ಪಿ-447 ಇದ್ದ ಪಿ.ಎಚ್‌. ಕಾಲೋನಿಯನ್ನು ಕಂಟೈನ್‌ಮೆಂಟ್‌ ಜೋನ್‌ ಆಗಿ ಪರಿವರ್ತಿಸಿದ್ದು, ಈ ಪ್ರದೇಶದಲ್ಲಿ 452 ಮನೆಗಳಿವೆ. 1900ಕ್ಕೂ ಹೆಚ್ಚು ಜನರು ವಾಸವಿದ್ದು ಜನರು ಹೆಚ್ಚು ಸಹಕಾರ ನೀಡಬೇಕು. ನಿಮಗೆ ಅಗತ್ಯವಿರುವ ವಸ್ತುಗಳನ್ನು ಹೊರಗಡೆಯಿಂದ ಪೂರೈಸಲಾಗುತ್ತದೆ. ಈ ವಸ್ತುಗಳನ್ನು ಕಂಟೈನ್‌ಮೆಂಟ್‌ ವಲಯದಲ್ಲಿಯೇ ಇರುವ 15 ಮಂದಿ ಸ್ವಯಂ ಸೇವಕರ ಮೂಲಕ ಹಂಚಿಕೆ ಮಾಡಲಾಗುತ್ತದೆ.
●ಡಾ.ಕೆ.ರಾಕೇಶ್‌ಕುಮಾರ್‌, ಡೀಸಿ

●ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.