ಸಿರಿವಂತರು, ಪ್ರಭಾವಿಗಳ ಮನೆಗಳಿಗೆ ನಿರಂತರ ನೀರು

ಬಡವರು ವಾಸಿಸುವ ಪ್ರದೇಶಕ್ಕೆ ವಾರಕ್ಕೊಮ್ಮೆ ನೀರು ಸರಬರಾಜು • ಮಳೆ ಬರದಿದ್ದರೆ ಪರಿಸ್ಥಿತಿ ಊಹಿಸಲು ಅಸಾಧ್ಯ

Team Udayavani, May 8, 2019, 4:25 PM IST

tumkur-tdy-1..

ತುಮಕೂರಿನಲ್ಲಿ ಕುಡಿಯುವ ನೀರಿಗಾಗಿ ಜನ ಪರಿತಾಪಿಸುತ್ತಿರುವುದು.

ತುಮಕೂರು: ಸಿರಿವಂತರು, ಪ್ರಭಾವಿಗಳ ಮನೆಗಳಿಗೆ ನಿರಂತರ ನೀರು ಸರಬರಾಜಾಗುತ್ತಿದೆ. ಆದರೆ, ಬಡವರ ಗೋಳು ಕೇಳ್ಳೋದಾದ್ರು ಯಾರು? ನಗರದ 35 ವಾರ್ಡ್‌ಗಳಲ್ಲೂ ಬೇಸಿಗೆಯ ಸುಡು ಬಿಸಿಲ ನಡುವೆ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.

ಬಡವರು ವಾಸಿಸುವ ಪ್ರದೇಶಗಳಿಗೆ ವಾರಕ್ಕೊಮ್ಮೆ ನೀರು ಸರಬರಾಜಾಗುತ್ತಿದೆ, ನೀರಿಗಾಗಿ ಜನ ಪರಿತಪಿ ಸುತ್ತಿದ್ದರೆ. ಈಗಾಗಲೇ ಕೆಲವು ವಾರ್ಡ್‌ಗಳಲ್ಲಿ ವಾರಕ್ಕೊಮ್ಮೆ ನೀರು, ಪ್ರತಿದಿನ ಟ್ಯಾಂಕರ್‌ಗಳಲ್ಲಿ ಕುಡಿಯವ ನೀರು ಸರಬರಾಜಾಗುತ್ತಿದೆ. ಬೇಸಿಗೆಯಲ್ಲಿ ಈ ಪರಿಸ್ಥಿತಿ ಎದುರಾಗಿದೆ. ಮಳೆ ಬರದಿದ್ದರೆ ನಗರದ ಪರಿಸ್ಥಿತಿ ಹೇಗಿರುತ್ತದೆ ಎಂದು ಊಹಿಸಲು ಅಸಾಧ್ಯವಾಗಿದೆ.

ಎಲ್ಲಾ ಕ್ಷೇತ್ರದಲ್ಲೂ ಬೆಳವಣಿಗೆಯ ಹಾದಿಯಲ್ಲಿ ರುವ ನಗರದಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲಿದೆ. ನಗರದ ಯಾವುದೇ ವಾರ್ಡ್‌ಗಳಿಗೆ ಹೋದರೂ ನೀರಿಗಾಗಿ ಜನ ಈಗಾಗಲೇ ಬಿಂದಿಗೆ ಹಿಡಿದು ಬೀದಿ ಬೀದಿ ಸುತ್ತುವುದು ಸಾಮಾನ್ಯವಾಗಿದೆ. ಈ ರೀತಿಯ ಪರಿಸ್ಥಿತಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ಬಡವರು ಹಾಗೂ ಸಾಮಾನ್ಯ ಜನರು ವಾಸಿಸುವ ಪ್ರದೇಶಗಳಲ್ಲಿ ಕಂಡು ಬರುತ್ತಿದೆ.

ಹಲವು ಬಡಾವಣೆಗಳಲ್ಲಿ ನೀರಿಗಾಗಿ ಪರದಾಟ: ನಗರದ ಸರಸ್ಪತಿ ಪುರಂ, ಮರಳೇನಹಳ್ಳಿ, ಗೊಲ್ಲರಹಟ್ಟಿ, ರಂಗಾಪುರ, ಎಂ.ಡಿ.ಪಾಳ್ಯ, ಎ.ಕೆ.ಕಾಲೋನಿ, ಹೌಸಿಂಗ್‌ ಬೋರ್ಡ್‌, ಶ್ರೀರಾಮ ನಗರ, ದಿಬ್ಬೂರು, ಜೈಪುರ ಬಡಾವಣೆ, ಪಿ.ಎಚ್. ಕಾಲೋನಿ, ಸುಬ್ರಹ್ಮಣ್ಯ ಪಾರ್ಕ್‌ ಮುಂಭಾಗದ ಲೇಬರ್‌ ಕಾಲೋನಿ ಅಡ್ಡ ರಸ್ತೆಗಳು, ಕ್ರಿಶ್ಚಿಯನ್‌ ಸ್ಟ್ರೀಟ್, ಕುರಿಪಾಳ್ಯ, ಟಿಪ್ಪುನಗರ ಅಡ್ಡ ರಸ್ತೆಗಳು, ಬನಶಂಕರಿ, ಶಾರದಾನಗರ, ಬಿದರ ಮೆಳೆ ತೋಟ, ಬಟವಾಡಿ, ಉಪ್ಪಾರಹಳ್ಳಿ, ಎಸ್‌ಐಟಿ ಬಡಾವಣೆ, ಮರಳೂರು ದಿಣ್ಣೆ, ಶ್ರೀನಗರ, ಬಂಡೇ ಪಾಳ್ಯ, ಸಾಬರ ಪಾಳ್ಯ, ದೇವರಾಯಪಟ್ಟಣ, ಸರಸ್ವತಿ ಪುರಂ 2ನೇ ಹಂತ ಸೇರಿದಂತೆ ಇನ್ನೂ ಹಲವಾರು ಬಡಾವಣೆಗಳಲ್ಲಿ ಕುಡಿಯುವ ನೀರಿಗಾಗಿ ಜನ ಪರಿತಪ್ಪಿಸುತ್ತಿದ್ದಾರೆ.

ನೀರಿನ ಪ್ರಮಾಣ ಕಡಿಮೆಯಾಗುವ ಸಾಧ್ಯತೆ: ಬಿಸಿಲ ಝಳ ತೀವ್ರವಾಗು ತ್ತಿರುವುದು ಒಂದೆಡೆಯಾದರೆ ನೀರಿಲ್ಲದೆ, ಜನರು ಪರಿತಪ್ಪಿಸುತ್ತಿರು ವುದು ಮತ್ತೂಂದೆ ಡೆಯಾಗಿದೆ. ವಾರಕ್ಕೊಮ್ಮೆ ನೀರು ಈಗ ಲಭ್ಯ ವಾಗುತ್ತಿದೆ. ಇನ್ನು ಒಂದು ತಿಂಗಳು ಕಳೆದರೆ ಇರುವ ನೀರಿನ ಪ್ರಮಾಣವೂ ಕಡಿಮೆಯಾಗಿ ನಗರದಲ್ಲಿ ನೀರಿನ ಬವಣೆ ಉಂಟಾ ಗಲಿದೆ. ಈಗ ಬುಗುಡನ ಹಳ್ಳಿಯಲ್ಲಿ ಶೇಖರಣೆ ಮಾಡಿರುವ ಹೇಮಾವತಿ ಕುಡಿಯುವ ನೀರು ದಿನದಿಂದ ದಿನಕ್ಕೆ ಕಡಿಮೆಯಾಗು ತ್ತಿದೆ. ಕೆರೆಯಲ್ಲಿ ನೀರು ಕಡಿಮೆಯಾಗುತ್ತಿರುವಂತೆಯೇ ನಗರದ ಬಹುತೇಕ ಬಡಾವಣೆಗಳಲ್ಲಿ ನಗರಕ್ಕೆ ನೀರುಣಿಸುತ್ತಿ ರುವ ಬೋರ್‌ವೆಲ್ಗಳಲ್ಲೂ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಕೆಲವು ಬೋರ್‌ವೆಲ್ಗಳು ನಿಂತು ಹೋಗುತ್ತಿವೆ.

ಹಳ್ಳಿಗಳ ಪರಿಸ್ಥಿತಿಯಂತೂ ಹೇಳ ತೀರದು: ನಗರದ ಹೊರವಲಯಗಳಲ್ಲಿ ಪಾಲಿಕೆ ವ್ಯಾಪ್ತಿಗೆ ಸೇರಿರುವ ಹಳ್ಳಿಗಳ ಸ್ಥಿತಿಯಂತೂ ಹೇಳ ತೀರದಾಗಿದೆ, ಹಣ ವಂತರಿಗೆ, ನೀರಿನ ಸಮಸ್ಯೆ ಕಾಣುತ್ತಿಲ್ಲ. ಕಾರಣ ಅವರಿಗೆ ರೈಸಿಂಗ್‌ ಮೈನ್‌ ಮೂಲಕ ನಿರಂತರ ನೀರು ಬರುವಂತೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಬಡವರು ನೀರಿಗಾಗಿ ಪರಿತಪ್ಪಿಸುತ್ತಿದ್ದಾರೆ. ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಗರ ನಿವಾಸಿಗಳ ನೀರಿನ ಬವಣೆಯ ಕೂಗು ಕೇಳದಾಗಿದೆ. ನಗರವು 3.75, 000 ಜನಸಂಖ್ಯೆ ಹೊಂದಿದ್ದು, ಪ್ರತಿದಿನ ತಲಾವಾರು ಕನಿಷ್ಠ ಲಭ್ಯತೆ 78 ಲೀ., ಆಗಿದೆ. ತಲಾವಾರು ನೀರು ಪೂರೈಕೆ ಮಾಡಬೇಕಾಗಿರುವ ನೀರಿನ ಪ್ರಮಾಣ 135 ಲೀ., ಈಗ ಅಗತ್ಯವಿರುವ ನೀರಿನ ಒಟ್ಟು ಪ್ರಮಾಣ 57 ಎಂಎಲ್ಡಿ, ಈಗ ಲಭ್ಯವಿರುತ್ತಿರುವ ನೀರಿನ ಪ್ರಮಾಣ 36ರಿಂದ 38 ಮಾತ್ರ ಇನ್ನೂ 19 ಎಂಎಲ್ಡಿ ನೀರಿನ ಕೊರತೆ ಇದೆ.

4-5 ದಿನಕ್ಕೊಮ್ಮೆ ನೀರು ಸರಬರಾಜು: ಹೇಮಾವತಿ ನೀರು ಸಂಗ್ರಹಿಸಿರುವ ಬುಗುಡನಹಳ್ಳಿಯಲ್ಲಿ 68 ಎಂಸಿಎಫ್ಟಿ ನೀರು ಸಂಗ್ರಹವಿದೆ. ಮೈದಾಳದಿಂದ 50 ಎಂಎಲ್ಡಿ, ಕೊಳವೆಬಾವಿಗಳಿಂದ 3.00 ಎಂಎಲ್ಡಿ ಸೇರಿದಂತೆ ಬುಗುಡನಹಳ್ಳಿ ನೀರು ಸೇರಿ ಈಗ ಒಟ್ಟು 36ರಿಂದ 38 ಎಂಎಲ್ಡಿ ನೀರು ಮಾತ್ರ ಲಭ್ಯವಿದೆ ಆದ್ದರಿಂದ ನಾಲ್ಕು, ಐದು ದಿನಕ್ಕೆ ಒಮ್ಮೆ ನೀರು ಸರಬರಾಜಾಗುತ್ತಿದೆ. ನಗರ ವಾಸಿಗಳಿಗೆ ಸರಬ ರಾಜು ಮಾಡಲು ಕೊರತೆ ಇರುವ ನೀರಿನ ಪ್ರಮಾಣ 19.38 ಎಂಎಲ್ಡಿ ಆಗಿದ್ದು, ನಗರದ ಎಲ್ಲಾ ಕಡೆ ಮೇಲ್ಮಟ್ಟದಲ್ಲಿ 17 ಜಲಸಂಗ್ರಹಗಳಿದ್ದು, ನಗರದಲ್ಲಿ 472 ಕೊಳವೆ ಬಾವಿಗಳಿವೆ. 100ಕ್ಕೆ ಪಂಪುಗಳಿವೆ. ಅದರಲ್ಲಿ 54 ಚಾಲ್ತಿಯಲ್ಲಿದ್ದು, 46 ದುರಸ್ಥಿಯಲ್ಲಿವೆ.

ಈಗಿನ ನೀರಿನ ಸಮಸ್ಯೆ ತೀವ್ರವಾಗುತ್ತಿರುವ ಹಿನ್ನೆಲೆ ಯಲ್ಲಿ ನಗರದ 22, 23, 29, 32, 33, 34, 35 ವಾರ್ಡ್‌ ಗಳಿಗೆ ನಾಲ್ಕು ದಿನಕ್ಕೆ ಕೆಲವು ಕಡೆ ಐದು ದಿನಕ್ಕೆ ನೀರು ನೀಡಲಾಗುತ್ತಿದೆ. ನಗರದ ಎಲ್ಲಾ ಕಡೆಯೂ ಐದು ದಿನಕ್ಕೆ ನೀರು ಒದಗಿಸಲು ಪಾಲಿಕೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

14 ಸಾವಿರಕ್ಕೂ ರೈಸಿಂಗ್‌ ಮೇನ್‌ಗಳು: ನಗರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ರೈಸಿಂಗ್‌ ಕೊಳಾಯಿ ಸಂಪರ್ಕವನ್ನು ಈವರೆಗೂ ಇವರು ಕಡಿತ ಮಾಡುವ ಕೆಲಸವನ್ನು ಕೈಗೆತ್ತಿಕೊಳ್ಳದೇ ಇರುವುದು ವಿಪರ್ಯಾಸ ವಾಗಿದೆ. ಖಾಸಗಿ ಹೋಟೆಲ್, ಕಲ್ಯಾಣ ಮಂಟಪಗಳು, ಆಸ್ಪತ್ರೆಗಳು, ವಾಣಿಜ್ಯೋದ್ಯಮ ಮಳಿಗೆಗಳಿಗೆ ನಲ್ಲಿ ಸಂಪರ್ಕವನ್ನು ಕೆಲವು ಕಡೆ ಅಕ್ರಮವಾಗಿ ನೀಡಿದ್ದಾರೆ. ಈ ಬಗ್ಗೆ ಈವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ.

ನೀರಿನ ಸಮಸ್ಯೆ ನಿವಾರಣೆಗೆ ಅದ್ಯತೆ: ನಗರದಲ್ಲಿ ಉದ್ಭವವಾಗಿರುವ ಕುಡಿಯುವ ನೀರಿನ ಸಮಸ್ಯೆ ಯನ್ನು ನಿವಾರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ಪಾಲಿಕೆ ಆಯುಕ್ತರಾದ ಭೂಪಾಲನ್‌ ಮುಂದಾಗಿ ದ್ದಾರೆ. ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಬರದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿ ದ್ದಾರೆ. ಜೊತೆಗೆ ಅಧಿಕಾರಿಗಳೊಂದಿಗೆ ಮಾತನಾಡಿ ಮುಂದೆ ಕುಡಿಯುವ ನೀರಿಗೆ ಸಮಸ್ಯೆಯಾದರೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆನ್ನುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿಗಳು ಗಮನ ಹರಿಸುವರೇ: ಮುಂದಿನ ದಿನದಲ್ಲಿ ನಗರದಲ್ಲಿ ಕುಡಿಯುವ ನೀರಿನ ತಾತ್ವಾರ ತೀವ್ರಗೊಳ್ಳಲಿದೆ. ಅಂಕಿ ಅಂಶದ ಪ್ರಕಾರ ಈಗ ಇರುವ ಕುಡಿಯುವ ನೀರು ಇನ್ನು ಒಂದು ತಿಂಗಳು ಮಾತ್ರ ಬರಲಿದ್ದು, ಮುಂದಿನ ದಿನದಲ್ಲಿ ನಗರದಲ್ಲಿ ನೀರಿನ ಸಮಸ್ಯೆ ತೀವ್ರಗೊಳ್ಳಲಿದೆ ಎನ್ನುವ ಮಾತುಗಳು ಆಡಳಿತ ವರ್ಗದಿಂದಲೇ ಕೇಳಿಬರುತ್ತಿವೆ. ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಿ ಮುಂದಿನ ದಿನದಲ್ಲಿ ಎದುರಾಗುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌ ಗಮನ ಹರಿಸುವುದು ಅಗತ್ಯವಾಗಿದೆ.

● ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.