ಬಡ್ಡಿ ಆಮೀಷವೊಡ್ಡಿ ವಂಚಿಸಿದವರ ಬಂಧಿಸಿ

ಈಝಿಮೈಂಡ್‌ ಸಂಸ್ಥೆಯಿಂದ 600 ಕೋಟಿ ರೂ. ದೋಖಾ • ಮಾಜಿ ಸಚಿವ ಸೊಗಡು ಶಿವಣ್ಣ ಆರೋಪ

Team Udayavani, Jun 23, 2019, 3:11 PM IST

tk-tdy-2..

ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಎಸ್‌.ಶಿವಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತುಮಕೂರು: ನಗರದ ಅಲ್ಪಸಂಖ್ಯಾತ ಕಡು ಬಡವರಿಗೆ 600 ಕೋಟಿ ರೂ.ಗೂ ಹೆಚ್ಚು ವಂಚಿಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಪೊಲೀಸರು ಬಂಧಿಸಬೇಕು. ನೆರವು ನೀಡಿದವರನ್ನು ಬಂಧಿಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸ ಬೇಕೆಂದು ಮಾಜಿ ಸಚಿವ ಸೊಗಡು ಎಸ್‌. ಶಿವಣ್ಣ ಆಗ್ರಹಿಸಿದರು. ಮಹ್ಮದ್‌ ಅಸ್ಲಾಂ ಎಂಬಾತ ಈಝಿಮೈಂಡ್‌ ಇಂಡಿಯಾ ಸಂಸ್ಥೆ ಹೆಸರಿನಲ್ಲಿ ಹೆಚ್ಚಿನ ಬಡ್ಡಿ ಆಮೀಷ ವೊಡ್ಡಿ 500ರಿಂದ 600 ಕೋಟಿ ರೂ. ಸಂಗ್ರಹಿಸಿ ಪರಾರಿಯಾಗಿದ್ದಾನೆ ಎಂದು ಶನಿವಾರ ಸುದ್ದಿ ಗೋಷ್ಠಿಯಲ್ಲಿ ಆರೋಪಿಸಿದರು.

ವಿವಿಧೆಡೆಗಳಿಂದ ಹಣ ಸಂಗ್ರಹ: ಜನರಲ್ ಪ್ಲಾನ್‌, ಎಜುಕೇಷನ್‌ ಮತ್ತು ಮದುವೆ ಎಂಬ ಮೂರು ಯೋಜನೆಗಳಡಿ ತುಮಕೂರು, ಮಧುರೈ, ಕೇರಳ ಸೇರಿ ವಿವಿಧೆಡೆಗಳಿಂದ ಹಣ ಸಂಗ್ರಹಿಸಿದ್ದಾನೆ. ಶಾದಿ ಮಹಲ್ ಆವರಣದ ಎಚ್.ಎಂ.ಎಸ್‌ ಕಾಂಪ್ಲೆಕ್ಸ್ನಲ್ಲಿ ಕಚೇರಿ ಹೊಂದಿದ್ದ. 2017ರಲ್ಲಿ ಸಂಸ್ಥೆ ಪ್ರಾರಂಭಿಸಿದ ಈತ ಅಲ್ಪಸಂಖ್ಯಾತರ ಮುಖಂಡರ ಮೂಲಕ ಹಣ ಹೂಡಿಕೆ ಮಾಡಿಸಿದ್ದ. ಸಂಸ್ಥೆ ಪ್ರಾರಂಭವಾದಾಗಿನಿಂದ 2018 ಜುಲೈವರೆಗೂ ಹೂಡಿಕೆದಾರರಿಗೆ ಬಡ್ಡಿ ನೀಡಿ ನಂತರ ಕಂಪನಿ ಮುಚ್ಚಿ ಪರಾರಿಯಾಗಿದ್ದಾನೆ. ಸುಮಾರು 1000ಕ್ಕೂ ಹೆಚ್ಚು ಜನರು ಹಣ ಹೂಡಿದ್ದರು ಎಂದು ತಿಳಿಸಿದರು.

ವಿಶ್ವಾಸ ಗಳಿಸಿದ್ದ!: ಜನರಲ್ ಪ್ಲಾನ್‌ ತಿಂಗಳ ಯೋಜನೆಯಲ್ಲಿ ಗ್ರಾಹಕ ಒಮ್ಮೆ 50 ಸಾವಿರ ರೂ. ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಮೂರು ಸಾವಿರ ಬಡ್ಡಿ ಮತ್ತು ಒಂದು ಲಕ್ಷ ಹೂಡಿಕೆ ಮಾಡಿದರೆ 5-6 ಸಾವಿರ, ಎರಡು ಲಕ್ಷಕ್ಕೆ 10-12 ಸಾವಿರ, ಐದು ಲಕ್ಷಕ್ಕೆ 25-30 ಸಾವಿರ ರೂ. ಬಡ್ಡಿ ನೀಡುವುದಾಗಿ ಒಡಂಬಡಿಕೆ ಮಾಡಿ 2017ರಿಂದ 2018ರ ಡಿಸೆಂಬರ್‌ವರೆಗೂ ಹೂಡಿಕೆಗೆ ತಕ್ಕಂತೆ ಹಣ ನೀಡಿ ವಿಶ್ವಾಸ ಗಳಿಸಿದ್ದ. ನಂತರ ಏಕಾಏಕಿ ಒಂದು ಲಕ್ಷ ರೂ. ಹೂಡಿಕೆ ಮಾಡಿದರೆ 4 ತಿಂಗಳು 10 ದಿನಕ್ಕೆ ಹತ್ತು ಲಕ್ಷ ರೂ. ನೀಡುವುದಾಗಿ ಹೇಳಿ ಗ್ರಾಹಕರಿಂದ ಹಣ ಸಂಗ್ರ ಹಿಸಿದ್ದ. ಈ ನಾಲ್ಕು ತಿಂಗಳ ಅಂತರದಲ್ಲಿ ಒಂದು ಲಕ್ಷದಿಂದ 50 ಲಕ್ಷದವರೆಗೂ ನೂರಾರು ಗ್ರಾಹಕರು ಹಣ ಹೂಡಿಕೆ ಮಾಡಿದ್ದು, ಮಾರ್ಚ್‌ನಲ್ಲಿ ಗ್ರಾಹಕರಿಗೆ ಹಣ ತಿರುಗಿಸದೆ ಹಣದೊಂದಿಗೆ ದುಬೈಗೆ ಪರಾರಿ ಯಾಗಿದ್ದಾನೆ ಎಂದು ದೂರಿದರು.

ಸಿಬಿಐ ತನಿಖೆಯಾಗಲಿ: ನೆರವಿಗೆ ಬಾರದ ಸರ್ಕಾರದ ವಿರುದ್ಧ ಪಕ್ಷಾತೀತ ಹೋರಾಡುತ್ತಿದ್ದೇನೆ. ತುಮಕೂರು ಪೊಲೀಸ್‌ ಇಲಾಖೆ ತನಿಖೆ ನಡೆಸಿದರೆ ಪರಿಹಾರ ಸಿಗುವುದಿಲ್ಲ. ಆದ್ದದರಿಂದ ಸಿಬಿಐ ತನಿಖೆಗೆ ನಡೆಯ ಬೇಕು ಎಂದು ಆಗ್ರಹಿಸಿದರು.

ಅಬ್ದುಲ್ ಹಲೀಂ ಇಕ್ಬಾಲ್, ಡಾ. ರಿಹಾನ್‌, ರಿಯಾಜ್‌ ಇವರುಗಳ ಜೊತೆಗೆ ಇದ್ದ ಮಹಮದ್‌ ಅಸ್ಲಾಂ ಆರ್‌ಐಆರ್‌ ಕಂಪನಿ ಬಿಟ್ಟು ಈಜಿಮೈಂಡ್‌ ಪ್ರಾರಂಭಿಸಿದ. ಈಗ ವಂಚಕ ಮಹಮದ್‌ ಅಸ್ಲಾಂ ಪರಾರಿಯಾಗಿರುವುದರಿಂದ ಪತ್ನಿ ಸೋಫಿಯಾ ಖಾನ ಮತ್ತು ಸಹೋದರ ಕಲೀಮುಲ್ಲಾನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಇದುವರೆಗೂ ಕಂಪನಿಯನ್ನು ಸೀಜ್‌ ಮಾಡಿಲ್ಲ. ಕೆಲ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಅಡ್ಡ ಬಂದಿದ್ದಾರೆಯೇ ಎಂಬ ಅನುಮಾನವಿದೆ ಎಂದು ದೂರಿದರು.

ಅಸ್ಲಾಂ ಪರಾರಿಯಾದ ಸುದ್ದಿ ಕೇಳಿ 14 ಲಕ್ಷ ಹೂಡಿಕೆ ಮಾಡಿದ್ದ ವ್ಯಕ್ತಿ ಮರಣ ಹೊಂದಿದ್ದು, ಒಬ್ಬ ಮಹಿಳೆ ಡಯಾಲಿಸಿಸ್‌ಗೆ ಕೂಡಿಟ್ಟಿದ್ದ ಹಣ ಕಳೆದು ಕೊಂಡಿರುತ್ತಾರೆ. ಹೀಗೆ 120ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಕೂಡಲೇ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಂಡು ಬಡವರಿಗೆ ನ್ಯಾಯ ಒದಗಿಸಬೇಕು ಎಂದರು. ಮುಸ್ಲಿಂ ಮುಖಂಡರಾದ ನಿಸಾರ್‌ ಅಹ್ಮದ್‌ ಮೌಲಿ, ಸೈಯದ್‌ ನಿಮ್ರಾನ್‌, ಇಲಿಯಾಸ್‌, ಮಹ್ಮದ್‌ ಹಸೀಮ್‌ ಮೊದಲಾದವರು ಇದ್ದರು.

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.