ನೀರು ಸರಬರಾಜಿಗೆ ಅಧಿಕಾರಿಗಳು ವಿಫಲ

ಪೆದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ಹೆಚ್ಚಾಗಿದೆ ನೀರಿನ ಸಮಸ್ಯೆ

Team Udayavani, May 19, 2019, 4:17 PM IST

tumkur-tdy-2..

ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಪಂ ಮುಂಭಾಗ ಸಾರ್ವಜನಿಕರು ಖಾಲಿ ಕೊಡದೊಂಡಿಗೆ ಪ್ರತಿಭಟನೆ ಮಾಡಿದರು.

ಗುಬ್ಬಿ: ತಾಲೂಕಿನ ಪೆದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಹೆಚ್ಚಾಗಿದೆ. ಇದಕ್ಕೆ ಆಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಬೇಸಿಗೆ ಯಲ್ಲಿ ನೀರಿನ ಸಮಸ್ಯೆ ಬರುವ ಬಗ್ಗೆ ತಿಳಿದಿದ್ದರೂ ಚುನಾವಣೆಯನ್ನೇ ಮುಂದಿಟ್ಟು ಮೂಲ ಸೌಲಭ್ಯ ಕಲ್ಪಿಸಲು ವಿಫಲರಾಗಿದ್ದಾರೆ ಎಂದು ಮುಖಂಡ ಹರಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಪೆದ್ದನಹಳ್ಳಿ ಗ್ರಾಪಂ ಮುಂಭಾಗ ನೂರಾರು ಗ್ರಾಮಸ್ಥರು ಖಾಲಿ ಕೊಡಗಳನ್ನು ಪ್ರದರ್ಶನ ನಡೆಸಿ, ಪ್ರತಿಭಟನೆ ಮಾಡಿದರು. ಈ ವೇಳೆಯಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ಮೊದಲ ಗ್ರಾಪಂ ಇದಾಗಿದೆ. ಈ ಬಗ್ಗೆ ತಿಳಿದೂ ಕೂಡ ಪಿಡಿಒ ಮತ್ತು ಚುನಾಯಿತ ಜನಪ್ರತಿ ನಿಧಿಗಳು ನಿರ್ಲಕ್ಷ್ಯವಹಿಸಿದ್ದರ ಪರಿಣಾಮ ಇಂದು ಮನೆ ಬಳಕೆಗೆ ನೀರು ಇಲ್ಲವಾಗಿದೆ ಎಂದು ಆರೋಪಿಸಿದರು.

ಗ್ರಾಪಂ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರ ಟ್ಯಾಂಕರ್‌ ಮೂಲಕ ನೀರು ಕಲ್ಪಿಸಲು ತಿಳಿಸಿದ್ದರೂ ನೀತಿ ಸಂಹಿತೆ ಹೆಸರಿನಲ್ಲಿ ಜನ ಜಾನುವಾರುಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ. ನೀರು ಒದಗಿಸದ ಗ್ರಾಪಂ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಮೇಳೆಕಲ್ಲಹಳ್ಳಿ, ಮಂಚಿ ಹಳ್ಳಿ, ಕುಣಾಘಟ್ಟ, ದೇವರಹಟ್ಟಿ, ಕೆ.ಮತ್ತಿಘಟ್ಟ ಕಾಲೋನಿ ಸೇರಿದಂತೆ ಹಲವು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಮನೆಗೆಲಸ ಮತ್ತು ನಿತ್ಯ ಕರ್ಮಗಳಿಗೂ ನೀರಿನ ಅಭಾವ ಉಂಟಾ ಗಿದ್ದು, ನೀರಿಗೆ ಗ್ರಾಮದ ಹೊರವಲಯದ ತೋಟಗಳನ್ನು ಅವಲಂಭಿಸಲಾಗಿದೆ. ಈ ಜತೆಗೆ ದನಕರುಗಳು ನೀರು ಕುಡಿಯಲು ನಿರ್ಮಿಸ ಲಾದ ತೊಟ್ಟಿಗಳಲ್ಲಿ ನೀರು ಶೇಖರಣೆಯಾಗದೇ ಜಾನುವಾರುಗಳು ಪರದಾಡುತ್ತಿವೆ. ದನಕರು ಗಳಿಗೆ ನೀರು ಒದಗಿಸಲು ಸಾಧ್ಯವಾಗದೇ ಜಾನುವಾರುಗಳನ್ನು ಮಾರಾಟ ಮಾಡುವ ನಿರ್ಧಾರಕ್ಕೆ ರೈತರು ಬಂದಿದ್ದಾರೆ ಎಂದು ದೂರಿದರು.

ಯೋಗ್ಯವಿಲ್ಲದ ನೀರು ಸರಬರಾಜು: ಕಡಬ ಕೆರೆ ಮೂಲಕ ನೀರು ಕಲ್ಪಿಸುವ ಭರವಸೆ ನೀಡಿ, ಪೈಪ್‌ಲೈನ್‌ ಮೂಲಕ ನೀರು ತಂದರೂ ಈ ನೀರು ಬಳಸಲಾಗುತ್ತಿಲ್ಲ. ಕುಡಿಯಲು ಯೋಗ್ಯ ವಿಲ್ಲದೆ ಕೆರೆ ನೀರು ಸ್ನಾನ ಮಾಡಿದರೆ ಮೈಯಲ್ಲಿ ಕಡಿತ ಉಂಟಾಗುತ್ತಿದೆ. ಚರ್ಮ ರೋಗಕ್ಕೆ ಕಾರಣವಾದ ಈ ನೀರು ಸಂಪೂರ್ಣ ಕಲುಷಿತ ವಾಗಿದೆ. ಕುಡಿಯಲು ಸಹ ಬಳಸುವಂತಿಲ್ಲ. ಬೋರ್‌ವೆಲ್ ಕೊರೆಸುವ ಮಾತು ದೂರ ವಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಟ್ಯಾಂಕರ್‌ ಮೂಲಕ ನೀರು ನೀಡಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ತಾಲೂಕು ಆಡಳಿತದ ಗಮನಕ್ಕೆ ತಂದು ನೀರು ಒದಗಿಸ ಬೇಕಾದ ಪಿಡಿಒ ತಾಲೂಕು ಕಚೇರಿಗೆ ನೀರಿನ ಮನವಿ ಮಾಡಿಲ್ಲ ಎಂದು ಕಿಡಿಕಾರಿದ ಗ್ರಾಮಸ್ಥರು, ಸ್ಥಳಕ್ಕೆ ಜಿಪಂ ಸಿಇಒ ಬರುವಂತೆ ಆಗ್ರಹಿಸಿ ಜತೆಗೆ ಮೇವು ಬ್ಯಾಂಕ್‌ ತೆರವು, ಶುದ್ಧ ಕುಡಿಯುವ ನೀರಿನ ಘಟಕ ಆರಂಭ ಮಾಡುವಂತೆ ಒತ್ತಾಯಿಸಿದರು.

ನೀರು ಕಲ್ಪಿಸುವ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂ ಇಒ ನರಸಿಂಹಯ್ಯ ಮತ್ತು ಗ್ರಾಮೀಣಾ ನೀರು ಸರಬರಾಜು ಇಲಾಖೆ ಎಇಇ ರಮೇಶ್‌ ಪ್ರತಿಭಟನಾ ನಿರತರೊಂದಿಗೆ ಚರ್ಚಿಸಿದರು. ಕೊಳವೆ ಬಾವಿ ಕೊರೆಸಲು ಕಾಲಾವಕಾಶ ಬೇಕಿದೆ. 15 ದಿನದೊಳಗೆ ಬೋರ್‌ ಕೊರೆಸುತ್ತೇವೆ. ಅಲ್ಲಿಯವರೆಗೆ ಪ್ರತಿನಿತ್ಯ 8 ಟ್ಯಾಂಕರ್‌ ನೀರು ಒದಗಿಸುವ ಭರವಸೆಯನ್ನು ನೀಡಿದ ಬಳಿಕ ಪ್ರತಿಭಟನೆ ಸ್ಥಗಿತಗೊಂಡ ಗ್ರಾಮ ಸ್ಥರು, ಮೇ 27ರೊಳಗೆ ಕೊಳವೆಬಾವಿ ಕೊರೆಸ ಬೇಕು. ಇಲ್ಲವಾದಲ್ಲಿ ರಸ್ತೆಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಗ್ರಾಪಂ ಮಾಜಿ ಸದಸ್ಯ ರಂಗಸ್ವಾಮಿ, ಲಕ್ಷ್ಮಮ್ಮ, ಹುಚ್ಚಪ್ಪ, ರಂಗಪ್ಪ, ನಂದೀಶ್‌, ಅನಿಲ್ಕುಮಾರ್‌, ರಾಜಣ್ಣ, ತ್ರೀನೇಶ್‌, ಜಯಣ್ಣ ಹಾಜರಿದ್ದರು.

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.