ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ತ್ಯಜಿಸಿ


Team Udayavani, Nov 29, 2020, 4:38 PM IST

ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ತ್ಯಜಿಸಿ

ತುಮಕೂರು: ಪ್ಲಾಸ್ಟಿಕ್‌ ಬಳಕೆ ಆರೋಗ್ಯಕ್ಕೆ ಹಾನಿಕರ. ಇದನ್ನು ಪ್ರತಿಯೊಬ್ಬರೂ ಅರಿತು ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ತ್ಯಜಿಸಬೇಕು ಎಂದು ಮಹಾನಗರ ಪಾಲಿಕೆ ಮೇಯರ್‌ ಫ‌ರೀದಾ ಬೇಗಂಕರೆ ನೀಡಿದರು.

ಮಹಾನಗರ ಪಾಲಿಕೆ ಕಚೇರಿ ಸಭಾಂ ಗಣದಲ್ಲಿ ಸಂಕಲ್ಪ ಫೌಂಡೇಶನ್‌ ಮತ್ತು ಮಹಾ ನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿ ಕೊಂಡಿದ್ದ ಹೋಟೆಲ್‌ ಆಹಾರ ವಿತರಣೆಯಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆಯ ಬಗ್ಗೆ ಅರಿವುಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ಲಾಸ್ಟಿಕ್‌ ಆರೋಗ್ಯಕ್ಕೆ ಹಾನಿಕಾರಕ: ಪ್ಲಾಸ್ಟಿಕ್‌ ಬಳಕೆಯಿಂದ ಆರೋಗ್ಯಕ್ಕೆ ಹಾನಿಕರ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಹೋಟೆಲ್‌ನವರು, ಅಂಗಡಿಗಳ ವರ್ತ ಕರು ತಮ್ಮ ದಿನನಿತ್ಯ ವ್ಯಾಪಾರ ವಹಿವಾ ಟಿನಲ್ಲಿ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದರು.

ಪ್ಲಾಸ್ಟಿಕ್‌ ಬಳಸಬೇಡಿ: ನಿಷೇಧಿತ ಪ್ಲಾಸ್ಟಿಕ್‌ ಬಳಕೆ ವಿರುದ್ಧ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ದಂಡ ಹಾಕಲಾಗುತ್ತಿದ್ದರೂ ದಂಡಕಟ್ಟಿದ ತದ ನಂತರ ಮತ್ತೆ ಪ್ಲಾಸ್ಟಿಕ್‌ ಬಳಕೆಮಾಡುತ್ತಿರುವ ಬಗ್ಗೆ ದೂರು ಬರುತ್ತಿವೆ. ಇದಕ್ಕೆ ಅವಕಾಶ ನೀಡದೆ ಹೋಟೆಲ್‌ನವರು, ವರ್ತಕರು ಸ್ವಯಂ ಪ್ರೇರಿತರಾಗಿಯೇ ನಿಷೇಧಿತ ಪ್ಲಾಸ್ಟಿಕ್‌ ಬಳಕೆಯನ್ನುಕೈಬಿಡಬೇಕು ಎಂದು ಸಲಹೆ ಮಾಡಿದರು.

ಪ್ಲಾಸ್ಟಿಕ್‌ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪ್ರತಿಯೊಬ್ಬರೂ ಅರಿವು ಮೂಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ನಗರಪಾಲಿಕೆ ಜತೆ ಕೈ ಜೋಡಿಸಿ: ಪ್ಲಾಸ್ಟಿಕ್‌ ಬಳಕೆಯಿಂದಾಗುವ ದುಷ್ಪರಿಣಾಮಗಳು ಜಾಸ್ತಿಯೇ ಇದೆ. ಹಾಗಾಗಿ ಹೋಟೆಲ್‌ ಮಾಲೀಕರು ಮಹಾನಗರ ಪಾಲಿಕೆ ಜೊತೆ ಕೈಜೋಡಿಸಿ ಪ್ಲಾಸ್ಟಿಕ್‌ ಮುಕ್ತ ತುಮಕೂರು ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಮನವಿ ಮಾಡಿದರು. ನಾಗರಿಕರು ಸಹ ತಾವಾಗಿಯೇ ಈ ಬಗ್ಗೆ ಅರಿತು ಪ್ಲಾಸ್ಟಿಕ್‌ ತ್ಯಜಿಸಿದರೆ ಮಾತ್ರ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ನಿಷೇಧಿಸಬಹುದಾಗಿದೆ ಎಂದರು.

ಸ್ವಯಂ ಪ್ರೇರಿತರಾಗಿ ಪ್ಲಾಸ್ಟಿಕ್‌ ನಿಷೇಧಿಸಿ: ಪಾಲಿಕೆ ಆಯುಕ್ತ ರೇಣುಕಾ ಮಾತನಾಡಿ, ಹೋಟೆಲ್‌ ಅಸೋಸಿಯೇಷನ್‌ ಮೂಲಕವೂ ಪ್ಲಾಸ್ಟಿಕ್‌ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ. ಪಾಲಿಕೆ ಅಧಿಕಾರಿಗಳು ದಾಳಿ ಮಾಡಿ ದಂಡ ಹಾಕುವ ಹಂತಕ್ಕೆ ಪರಿಸ್ಥಿತಿಯನ್ನು ಹೋಟೆಲ್‌ ಗಳವರು, ವರ್ತಕರು ತಂದುಕೊಳ್ಳಬಾರದು. ಸ್ವಯಂ ಪ್ರೇರಿತರಾಗಿಯೇ ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಮುಂದಾಗಬೇಕು ಎಂದರು.

ಪ್ಲಾಸ್ಟಿಕ್‌ನಿಂದ ಕ್ಯಾನ್ಸರ್‌: ಕೆಲ ಹೋಟೆಲ್‌ ಗಳಲ್ಲಿ ಪ್ಲಾಸ್ಟಿಕ್‌ಬಳಕೆ ಮಾಡುತ್ತಿರುವುದರಿಂದ ಮನುಷ್ಯರಿಗೆ ಕ್ಯಾನ್ಸರ್‌ ರೋಗ ಬರಲು ಕಾರಣವಾಗುತ್ತಿದೆ. ಕೆಲ ಫ‌ುಟ್‌ಪಾತ್‌ ಹೋಟೆಲ್‌ಗ‌ಳಲ್ಲಿ ಹೆಚ್ಚು ಹೆಚ್ಚು ಪ್ಲಾಸ್ಟಿಕ್‌ ಬಳಕೆ ಮಾಡಲಾಗುತ್ತಿದೆ. ಮನುಷ್ಯನ ಆರೋಗ್ಯ ದೃಷ್ಟಿಯಿಂದ ಹಾಗೂ ಸ್ವತ್ಛಪರಿಸರ ನಿರ್ಮಾಣಕ್ಕಾಗಿ ಪ್ಲಾಸ್ಟಿಕ್‌ ಬಳಕೆ ತ್ಯಜಿಸಬೇಕು ಎಂದು ಹೇಳಿದರು.

ಪ್ಲಾಸ್ಟಿಕ್‌ನಿಂದ ಮನುಷ್ಯನ ಆರೋಗ್ಯವನ್ನೇ ಹಾಳಾಗುತ್ತಿದೆ. ಬಿ.ಪಿ., ಶುಗರ್‌ ಇನ್ನಿತರೆಕಾಯಿಲೆಗಳಿಗೆ ಈ ಪ್ಲಾಸ್ಟಿಕ್‌ ಬಳಕೆ ಕಾರಣವಾಗುತ್ತಿದೆ. ಹೋಟೆಲ್‌ ಅಸೋಸಿಯೇಷನ್‌ನವರು ಕಡ್ಡಾಯವಾಗಿ ಪ್ಲಾಸ್ಟಿಕ್‌ ನಿಷೇಧವನ್ನು ಪಾಲಿಸಬೇಕು. ಜತೆಗೆ ಇತರೆ ಹೋಟೆಲ್‌ಗ‌ಳವರಿಗೂ ಈ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ಪಾಲಿಕೆ ಉಪಮೇಯರ್‌ ಶಶಿಕಲಾ ಗಂಗಹನುಮಯ್ಯ,ಜಿ.ಎಸ್‌.ಮಂಜುನಾಥ್‌, ಡಾ. ನವೀನ್‌, ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗೇಶ್‌ಕುಮಾರ್‌ ಇದ್ದರು.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.