ವೈಜ್ಞಾನಿಕ ಕಸ ವಿಲೇವಾರಿಗೆ ಜಾಗೃತಿ


Team Udayavani, Aug 28, 2019, 1:36 PM IST

tk-tdy-1

ತುಮಕೂರಿನ ಸ್ಮಾರ್ಟ್‌ ಸಿಟಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಟಿ.ಭೂಬಾಲನ್‌ ಮತನಾಡಿದರು.

ತುಮಕೂರು: ಹಸಿ ಕಸ-ಒಣ ಕಸ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬಗ್ಗೆ ನಗರ ವ್ಯಾಪ್ತಿಯಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ಟಿ. ಭೂಬಾಲನ್‌ ತಿಳಿಸಿದರು.

ನಗರದ ಸ್ಮಾರ್ಟ್‌ ಸಿಟಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಸ್ವಚ್ಛ, ಸುಂದರ ಹಸಿರು ತುಮಕೂರು ನಗರವನ್ನಾಗಿಸಲು ಸ್ಮಾರ್ಟ್‌ ಸಿಟಿ ಲಿಮಿಟೆಡ್‌, ಮಹಾನಗರ ಪಾಲಿಕೆ ಹಾಗೂ ಭಗೀರಥ ಸಂಸ್ಥೆ ಸಹಕಾರದಡಿ ಶಾಲಾ-ಕಾಲೇಜುಗಳಲ್ಲಿ ಚರ್ಚೆ, ಪ್ರಬಂಧ ಸ್ಪರ್ಧೆ, ಜಾಗೃತಿ ಜಾಥಾ, ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿ ವಾರ್ಡ್‌ನಲ್ಲಿ ಬೀದಿ ನಾಟಕ, ಸ್ಥಳೀಯ ಮಖಂಡರು ಹಾಗೂ ಸ್ವಸಹಾಯ ಗುಂಪಿನ ಸದಸ್ಯರೊಂದಿಗೆ ಗುಂಪು ಚರ್ಚೆ ಕಾರ್ಯಕ್ರಮ ಹಮ್ಮಿಕೊಂಡು ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ತರಬೇತಿ: ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ನಗರದ ಎಲ್ಲ ಮನೆ-ಮನೆಗೆ ಭೇಟಿ ನೀಡಿ ಕರಪತ್ರ, ಫ್ಲೆ ೖಯರ್‌, ಬ್ಯಾನರ್‌, ಸ್ಟಿಕರ್‌, ಪೋಸ್ಟರ್‌ ವಿತರಿಸುವ ಮೂಲ ಜಾಗೃತಿ ಮೂಡಿಸಲಾಗುತ್ತಿದೆ. ಸ್ಮಾರ್ಟ್‌ ಸಿಟಿ ವತಿ ಯಿಂದ ಘನ ತ್ಯಾಜ್ಯ ನಿರ್ವಹಣೆ ಕುರಿತು ಪಾಲಿಕೆ ಸದಸ್ಯರು, ಆರೋಗ್ಯ ನಿರೀಕ್ಷಕರು, ಪೌರ ಕಾರ್ಮಿ ಕರಿಗೆ ಜವಾಬ್ದಾರಿಗಳ ಬಗ್ಗೆ ತರಬೇತಿ ನೀಡಲಾಗಿದೆ ಎಂದ‌ು ಹೇಳಿದರು.

ಪರಿವರ್ತನಾ ಘಟಕ ನಿರ್ಮಾಣ: ಪಾಲಿಕೆ ವತಿ ಯಿಂದ ಮನೆಯಲ್ಲಿಯೇ ಉತ್ಪತ್ತಿಯಾಗುವ ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸುವ ವಿಧಾನದ ತರಬೇತಿ ನೀಡಿ 500 ಮನೆಗಳಲ್ಲಿ ಪರಿವರ್ತನಾ ಘಟಕ ನಿರ್ಮಿಸಿಕೊಡಲಾಗಿದೆ. ಈ ಘಟಕಕ್ಕೆ ಪೂರಕ ಸಾಮಗ್ರಿ ಒದಗಿಸಿದ್ದು, ಈಗಾಗಲೇ ನಾಗರಿಕರು ಘಟಕದಲ್ಲಿ ಹಸಿ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಅಲ್ಲದೇ ಪಾಲಿಕೆ ಸಿಬ್ಬಂದಿ ಹಾಗೂ ಅಧಿಕಾರಿಗಳ ಮನೆಗಳಲ್ಲಿ ಕಡ್ಡಾಯವಾಗಿ ಆಗಸ್ಟ್‌ ತಿಂಗಳೊಳಗೆ ಈ ಗೊಬ್ಬರ ಪರಿವರ್ತನಾ ಘಟಕ ಅಳವಡಿಸಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಸಮರ್ಪಕ ತಾಜ್ಯ ನಿರ್ವಹಣೆಗೆ ಸೂಚನೆ: ನಗರದಲ್ಲಿರುವ ಮದ್ಯದಂಗಡಿ, ಮಾಂಸದಂಗಡಿ, ಕಲ್ಯಾಣ ಮಂಟಪ, ಶಾಲಾ-ಕಾಲೇಜುಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಅವರ ಹಂತದಲ್ಲಿಯೇ ವಿಲೇವಾರಿ ಮಾಡಲು ತರಬೇತಿ ನೀಡಿ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು ಸೂಚಿಸ ಲಾಗಿದೆ. ಮಾಂಸ ದಂಗಡಿಗಳು ಎಲ್ಲೆಂದರಲ್ಲಿ ಬಿಸಾಡುವ ತ್ಯಾಜ್ಯದಿಂದ ನಗರದ ನೈರ್ಮಲ್ಯ ಹಾಳಾಗು ವುದಲ್ಲದೇ, ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗು ತ್ತಿರುವುದರಿಂದ ಎಲ್ಲ ಮಾಂಸ ದಂಗಡಿಗಳಿಗೂ ಸಮರ್ಪಕವಾಗಿ ತಾಜ್ಯ ನಿರ್ವಹಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ಭೂಬಾಲನ್‌ ಹೇಳಿದರು.

ಸ್ವಚ್ಛ ತುಮಕೂರು ಹಾಗೂ ಹಸಿರು ನಗರವನ್ನಾಗಿ ನಿರ್ಮಿಸಲು ಸಾರ್ವಜನಿಕರಿಗೆ ಉತ್ತೇಜನ ನೀಡುವ ಸಲುವಾಗಿ ಸೈಕ್ಲೋಥಾನ್‌, ವಾಕಥಾನ್‌, ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ನಗರದ ನಾಗರಿಕರೆಲ್ಲರೂ ಸ್ಮಾರ್ಟ್‌ ಸಿಟಿ ಹಾಗೂ ಪಾಲಿಕೆಯೊಂದಿಗೆ ಕೈಜೋಡಿಸಿ ಸಹಕರಿಸ ಬೇಕು ಎಂದು ಮನವಿ ಮಾಡಿದರು. ಸ್ಮಾರ್ಟ್‌ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12-pavagada

Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

1-qweqewq

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

9-pavagada

Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.