ಗುಲಾಬಿ ನೀಡಿ ಹೆಲ್ಮೆಟ್ ಧರಿಸಲು ಜಾಗೃತಿ
Team Udayavani, Feb 21, 2021, 4:20 PM IST
ಹುಳಿಯಾರು: ಹುಳಿಯಾರಿನಲ್ಲಿ ಅಪರಾಧ ಮಾಸಾಚರಣೆ ಅಂಗವಾಗಿ ಪೊಲೀಸ್ ಠಾಣೆ ಎದುರಿನ ನ್ಯಾಷನಲ್ ಹೈವೆಯಲ್ಲಿ ವಾಹನ ಸವಾರರಿಗೆ ಪೊಲೀಸರು ಗುಲಾಬಿ ಹೂ ನೀಡಿಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಹುಳಿಯಾರು ಪಿಎಸ್ಐ ಕೆ.ಟಿ. ರಮೇಶ್ ಮಾತನಾಡಿ, ಹೆಲ್ಮೆಟ್ ಇಲ್ಲದೆ ಬೈಕ್ ಸಂಚಾರ ಮಾಡುವುದರಿಂದ ಅಪಘಾತ, ಸಾವು-ನೋವು ಹೆಚ್ಚಾಗುತ್ತಿದ್ದು, ಅವುಗಳನ್ನು ತಡೆಗಟ್ಟುವ ದಿಸೆಯಲ್ಲಿಸಾರ್ವಜನಿಕರಿಗೆ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಮೊದಲಿಗೆ ಗುಲಾಬಿ ನೀಡಿ ಹೆಲ್ಮೆಟ್ ಧರಿಸಿಸಂಚರಿಸುವಂತೆ ಬುದ್ಧಿ ಮಾತು ಹೇಳಲಾಗುವುದು. ನಂತರ ತಪಾಸಣಾ ಸ್ಥಳದಲ್ಲೇ ಹೆಲ್ಮೆಟ್ ಖರೀದಿಸಲು ಅವಕಾಶ ಕೊಡಲಾಗುವುದು. ಕೊನೆಗೆ ಕಡ್ಡಾಯವಾಗಿ 500 ರೂ. ದಂಡ ವಸೂಲಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಅಪಘಾತ ಸಂಭವಿಸಿದ ವೇಳೆ ಒಂದೊಂದು ಸಮಯದಲ್ಲಿ ಸ್ಥಳದಲ್ಲಿಪೊಲೀಸ್ ಅಧಿಕಾರಿಗಳು ಲಭ್ಯವಿರುವುದಿಲ್ಲ. ಅದೇ ಕಾರಣಕ್ಕಾಗಿ ಸಾರ್ವಜನಿಕರಿಗೆ ನ್ಯಾಯ ದೊರಕಿಸಲು112 ಸಂಖ್ಯೆಗೆ ಕರೆ ಮಾಡಿದರೆ ಸಾಕು.ಕೆಲವೇ ಕ್ಷಣದಲ್ಲಿ ತಾವಿದ್ದ ಸ್ಥಳಕ್ಕೆ 112 ವಾಹನ ಜೊತೆ ಸಿಬ್ಬಂದಿ ತಮ್ಮನ್ನು ರಕ್ಷಿಸಲು ಬರಲಿದ್ದಾರೆ ಎಂದರು.
ಇದಲ್ಲದೇ ತೊಂದರೆಯಲ್ಲಿರುವ ಸಾರ್ವಜನಿಕರಿಗೆ ತುರ್ತುಪರಿಸ್ಥಿತಿಯಲ್ಲಿರುವಾಗ ತಕ್ಷಣ ಸ್ಪಂದಿಸುವಸಲುವಾಗಿ ರಾಜ್ಯ ಸರ್ಕಾರ ಒಂದೇ ದೇಶ ಒಂದೇ ರಸ್ತೆ ಕರೆ ಸಂಖ್ಯೆ 112 ಈಸೇವೆಯನ್ನು ಜಾರಿಗೆ ತಂದಿದ್ದಾರೆ.ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು. ಹಂದನಕೆರೆ ಪಿಎಸ್ಐ ಶಿವಪ್ಪ, ಚಿಕ್ಕನಾಯಕಹಳ್ಳಿ ಪಿಎಸ್ಐ ಹರೀಶ್, ಹುಳಿಯಾರು ಎಎಸ್ಐ ಆನಂದಪ್ಪ ಮತ್ತು ನಂಜೇಗೌಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು