ಮಾಹಿತಿ ಕೊರತೆಯಿಂದ ಜನಸಂಖ್ಯೆ ನಿಯಂತ್ರಣದಲ್ಲಿ ಹಿಂದೆ

ಕುಟುಂಬಕ್ಕೆ ಒಂದೇ ಮಗು ಸಾಕು • ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ್‌ಬಾಬು ಅಭಿಮತ

Team Udayavani, Jul 30, 2019, 4:52 PM IST

tk-tdy-02

ಮಧುಗಿರಿಯ ಸಾಮರ್ಥ್ಯಸೌಧದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಪಾವಗಡ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜನಜಾಗೃತಿ ಮೂಡಿಸಲಾಯಿತು.

ಮಧುಗಿರಿ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶ ಆರ್ಥಿಕವಾಗಿ ಹಿಂದುಳಿಯಲಿದ್ದು, ಕುಟುಂಬಕ್ಕೆ ಒಂದೇ ಮಗು ಸಾಕು ಎಂದು ತಾಲೂಕು ಆರೋಗ್ಯಾ ಧಿಕಾರಿ ಡಾ.ರಮೇಶ್‌ಬಾಬು ತಿಳಿಸಿದರು.

ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆ, ತಾಪಂ, ಪುರಸಭೆ, ಸಾರ್ವಜನಿಕ ಆಸ್ಪತ್ರೆ, ಶ್ರೀ ರಾಘವೇಂದ್ರ ನರ್ಸಿಂಗ್‌ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ನಡೆದ ವಿಶ್ವ ಜನ ಸಂಖ್ಯಾದಿನಾಚರಣೆಯಲ್ಲಿ ಮಾತನಾಡಿದರು.

ವಿವಿಧ ಕಾರ್ಯಕ್ರಮ: ಕುಟುಂಬ ಕಲ್ಯಾಣ ನಿಭಾಯಿ ಸುವ ಸಾಮರ್ಥ್ಯ ತಾಯಿಗೆ ಮಾತ್ರ ಇದೆ. 1989ರಿಂದ ವಿಶ್ವಸಂಸ್ಥೆಯಿಂದ ಈ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಸರ್ಕಾರವು ಹೆಚ್ಚು ಒತ್ತು ಕೊಟ್ಟ ಪರಿಣಾಮ ಶೇ.0.3 ಜನಸಂಖ್ಯೆ ಹೆಚ್ಚಳ ಕಡಿಮೆಯಾಗಿದೆ. 770 ಕೋಟಿ ವಿಶ್ವದ ಜನಸಂಖ್ಯೆಯಾದರೆ, ಭಾರತ-136, ಚೀನಾ-142 ಕೋಟಿಯಿದೆ. ಬಡತನ ಹಾಗೂ ಲಿಂಗ ಅಸಮಾನತೆಯಿಂದ ಜನಸಂಖ್ಯೆ ಹೆಚ್ಚಳವಾಗುತ್ತಿದ್ದು, ಸಮರ್ಪಕ ಜಾಗೃತಿ ಹಾಗೂ ಮಾಹಿತಿ ಕೊರತೆಯಿಂದ ನಿಯಂತ್ರಣಕ್ಕೆ ಬರುತ್ತಿಲ್ಲ. ಹಿಂದೆ ತುರ್ತುಪರಿಸ್ಥಿತಿಯಲ್ಲಿ ಇಂದಿರಾಗಾಂಧಿ ಪುರುಷರಿಗೆ ಸಂತಾನಶಕ್ತಿ ಹರಣ ಕಡ್ಡಾಯ ಶಸ್ತ್ರಚಿಕಿತ್ಸೆ ಜಾರಿಗೊಳಿಸಿದರೂ ಅನುಷ್ಠಾನ ವಾಗಲಿಲ್ಲ ಎಂದು ಹೇಳಿದರು.

ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಿನರಸಪ್ಪ ಮಾತನಾಡಿ, ಆಶಾ ಹಾಗೂ ಕಾರ್ಯಕರ್ತೆಯರ ಪಾತ್ರ ಜನಸಂಖ್ಯೆ ನಿಯಂತ್ರಣದಲ್ಲಿ ಮಹತ್ವ ದ್ದಾಗಿದೆ. ನೈರ್ಮಲ್ಯ ಹಾಗೂ ತಾಯಿಯ ಆರೋಗ್ಯದ ಬಗ್ಗೆ ಅಗತ್ಯ ಮಾಹಿತಿ ನೀಡಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಇವರ ಕಾರ್ಯ ಶ್ಲಾಘನೀಯ ಎಂದು ಹೇಳಿ ದರು. ತಾಪಂ ಇಒ ದೊಡ್ಡಸಿದ್ದಪ್ಪ ಮಾತನಾಡಿ, ಜನ ಸಂಖ್ಯೆಗೆ ಅನುಗುಣವಾಗಿ ದೇಶದ ಭೌಗೋಳಿಕ ಸಾಮರ್ಥ್ಯ ಹೆಚ್ಚುವುದಿಲ್ಲ. ಈ ಅಸಮ ತೋಲನ ಮನು ಕುಲಕ್ಕೆ ಮಾರಕವಾಗಲಿದೆ. ಆದ್ದರಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಕುಟುಂಬಕ್ಕೆ ಒಂದು ಮಗು, ಮನೆತುಂಬಾ ನಗು ಎಂಬ ಘೋಷ ವಾಕ್ಯದೊಂದಿಗೆ ಈ ಕುಟುಂಬ ಕಲ್ಯಾಣ ಯೋಜನೆ ಯಡಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಜನಸಂಖ್ಯೆ ನಿಯಂತ್ರಣದಲ್ಲಿ ಹಿಂದೆ: ಸಂಪನ್ಮೂಲ ವ್ಯಕ್ತಿಯಾದ ನಿವೃತ್ತ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕುಲಕರ್ಣಿ ಮಾತನಾಡಿ, ಆಶಾ ಹಾಗೂ ಅಂಗನವಾಡಿ ಸಿಬ್ಬಂದಿ ಬದಲಾವಣೆಯ ಹರಿಕಾರರು. 1921 ರಲ್ಲಿ ದೇಶದ ಜನಸಂಖ್ಯೆ 25 ಕೋಟಿಯಿದ್ದು, 10 ವರ್ಷಕ್ಕೆ 27 ಕೋಟಿ. ಆದರೆ 1971ರಲ್ಲಿ ಇದು 54 ಕೋಟಿಗೆ ಏರಿಕೆಯಾಗಿದ್ದು, 40 ವರ್ಷಕ್ಕೆ ದುಪ್ಪಟ್ಟಾಗಿದೆ. ಹಾಗೂ 2001ರಲ್ಲಿ 102 ಕೋಟಿಯಾಗಿದ್ದು, ಈಗ 134 ಕೋಟಿಗೆ ಏರಿಕೆಯಾಗಿದೆ. ಜನಸಂಖ್ಯೆ ನಿಯಂತ್ರಣ ದಲ್ಲಿ ದೇಶ ಹಿಂದುಳಿದಿದೆ.

ಇದರಿಂದ ದೇಶವೂ ಹಿಂದುಳಿಯಲಿದೆ. ಇದಕ್ಕಾಗಿ 20ಕ್ಕೂ ಮೊದಲು ಮದುವೆ ಬೇಡವೆಂದು, ಮದುವೆಯಾದ 2 ವರ್ಷದ ತನಕ ಮಕ್ಕಳು ಬೇಡವೆಂದು, ಮೊದಲನೇ ಮಗು ವಿಗೂ 2ನೇ ಮಗುವಿಗೂ 3 ವರ್ಷದ ಅಂತರವಿದ್ದರೆ ತಾಯಿಯ ಆರೋಗ್ಯ ಹೆಚ್ಚಾಗಲಿದೆ ಎಂದು ಜನರಲ್ಲಿ ಜಾಗೃತಿ ತರಬೇಕು. ಪ್ರಸ್ತುತ ಆಹಾರ, ನೀರು, ಉದ್ಯೋಗ ಹಾಗೂ ಬದುಕಲು ಭೂಮಿ ಎಲ್ಲವೂ ಕಡಿತವಾಗುತ್ತಿದ್ದು, ಅಪಾಯದ ಮುನ್ಸೂಚನೆಯಾಗಿದೆ ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪರುಶ ರಾಮಯ್ಯ, ಸಿಡಿಪಿಒ ಟಿ.ಆರ್‌.ಸ್ವಾಮಿ, ತಾಪಂ ನಿರ್ದೇಶಕ ಸುಬ್ಬರಾಜ ಅರಸ್‌, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಧರಣೇಶ್‌ಗೌಡ, ಆರೋಗ್ಯ ನಿರೀಕ್ಷಕ ಕೇಶವರೆಡ್ಡಿ, ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.