ಕೈ ಸದಸ್ಯನ ಗೈರಿನಿಂದ ಕಮಲಕ್ಕೆ ಒಲಿದ ಪಪಂ ಅಧ್ಯಕ ಸ್ಥಾನ


Team Udayavani, Oct 2, 2021, 6:12 PM IST

ಕೈ ಸದಸ್ಯನ ಗೈರಿನಿಂದ ಕಮಲಕ್ಕೆ ಒಲಿದ ಪಪಂ ಅಧ್ಯಕ ಸ್ಥಾನ

ಹುಳಿಯಾರು: ಹುಳಿಯಾರು ಪಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಫಲಿತಾಂಶ ಹೊರಬಿದಿದ್ದು, ಕಾಂಗ್ರೆಸ್‌ ಸದಸ್ಯ ರಾಜುಬಡಗಿ ಗೈರಾಗಿದ್ದರಿಂದ ಬಿಜೆಪಿಗೆ ಪಪಂ ಗಾದಿ ಒಲಿದಿದೆ.

ಹುಳಿಯಾರು ಪಪಂ ನೂತನ ಅಧ್ಯಕ್ಷರಾಗಿ ಕೆಎಂಎಲ್‌ ಕಿರಣ್‌ ಕುಮಾರ್‌ ಹಾಗೂ ಶ್ರುತಿ ಸನತ್‌ ಆಯ್ಕೆಯಾಗಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಒಂದು ಗಂಟೆಗಳ ಕಾಲ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ ಕೆಎಂಎಲ್‌ ಕಿರಣ್‌ ಕುಮಾರ್‌, ಕಾಂಗ್ರೆಸ್‌ನಿಂದ ದಸ್ತಗೀರ್‌ ಸಾಬ್‌ ಹಾಗೂ ಪಕ್ಷೇತರವಾಗಿ ಸೈಯದ್‌ ಜಹೀರ್‌ ಸಾಬ್‌ ಸೇರಿದಂತೆ ಒಟ್ಟು 3 ಮಂದಿ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ:-ಮತಾಂತರ ನಿಷೇಧ ಕಾಯ್ದೆಗಾಗಿ ಸೈದಾಪುರ ಬಂದ್‌

ಉಪಾಧ್ಯಕ್ಷ ಸ್ಥಾನ ಮಹಿಳೆಗೆ ಮೀಸಲಾಗಿದ್ದು, ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಶ್ರುತಿ ಸನತ್‌, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರೀತಿ ರಾಘವೇಂದ್ರ ಸೇರಿದಂತೆ ಒಟ್ಟು ಇಬ್ಬರು ತಮ್ಮ ನಾಮಪತ್ರ ಸಲ್ಲಿಸಿದರು.

ಒಟ್ಟು 16 ಮಂದಿ ಸಂಖ್ಯಾಬಲವುಳ್ಳ ಪಂಚಾಯಿತಿಯಲ್ಲಿ ಹಾಲಿ ಶಾಸಕರ ಹಾಗೂ ಸಂಸದರ ಮತವು ಸೇರಿ 18 ಮತಗಳು ಚಲಾವಣೆಯಾಗಬೇಕಿತ್ತು. ಈ ಪೈಕಿ ಕಾಂಗ್ರೆಸ್‌ ಅಭ್ಯರ್ಥಿ ಗಂಗಾಧರಯ್ಯ (ಬಡಗಿ ರಾಜು) ಅವರ ಗೈರಾಗಿ ಒಟ್ಟು 15 ಮಂದಿ ಸದಸ್ಯರು ಪಾಲ್ಗೊಂಡಿದ್ದರು.

ಬಿಜೆಪಿಯಿಂದ ಆಯ್ಕೆಯಾದ 6 ಮಂದಿ ಸದಸ್ಯರು, ಒಬ್ಬರು ಪಕ್ಷೇತರ ಸದಸ್ಯೆಯ ಬೆಂಬಲ ಹಾಗೂ ಶಾಸಕರು, ಸಂಸದರ ಮತ ಸೇರಿ ಒಟ್ಟು 9 ಮತಗಳು ಚಲಾವಣೆಗೊಂಡಿತು. ಹಾಗೆಯೇ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದಿಂದ ಕಾಂಗ್ರೆಸ್‌ನ 5 ಸದಸ್ಯರಲ್ಲಿ 4 ಸದಸ್ಯರು, ಜೆಡಿಎಸ್‌ನ 3 ಸದಸ್ಯರು ಮತ್ತು 1 ಪಕ್ಷೇತರ ಸದಸ್ಯನ ಬೆಂಬಲ ಸೇರಿ ಒಟ್ಟು 8 ಮತಗಳು ಚಲಾವಣೆಗೊಂಡವು. 17 ಮತಗಳ ಸಂಖ್ಯಾ ಬಲಕ್ಕೆ ಬಿಜೆಪಿ ಅಭ್ಯರ್ಥಿಗೆ 9 ಮತ, ಮೈತ್ರಿ ಕೂಟದ ಅಭ್ಯರ್ಥಿಗೆ 8 ಮತದ ಮೂಲಕ 1 ಮತದ ಅಂತರದಲ್ಲಿ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲಾಯಿತು. ಹೀಗಾಗಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆಎಂಎಲ್‌ ಕಿರಣ್‌ಕುಮಾರ್‌ ಅಧ್ಯಕ್ಷರಾಗಿ, ಶ್ರುತಿ ಸನತ್‌ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ತಹಶೀಲ್ದಾರ್‌ ತೇಜಸ್ವಿನಿ ಕಾರ್ಯನಿರ್ವಹಿಸಿದರು. ಸಚಿವ ಜೆ.ಸಿ.ಮಾಧುಸ್ವಾಮಿ, ಸಂಸದ ಜಿ.ಎಸ್‌.ಬಸವರಾಜು ಪಾಲ್ಗೊಂಡಿದ್ದರು.

ಗೈರಾದ ಬಡಗಿ ರಾಜು-

ಪಪಂ ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ವಿವಿಧ ರೀತಿಯ ಲೆಕ್ಕಾಚಾರ ನಡೆಯುತ್ತಿತ್ತು. ಕ್ಷೇತ್ರ ಅಭ್ಯರ್ಥಿಗಳ ಸೇರ್ಪಡೆ ಹಾಗೂ ಮೈತ್ರಿ ಲೆಕ್ಕಚಾರದೊಂದಿಗೆ ಗದ್ದಿಗೆ ಏರಲೇಬೇಕೆಂಬ ಹಣಾಹಣಿ ನಡೆದಿತ್ತು. ಪಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಣೆಯಾದ ನಂತರ ನಡೆದ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಸದಸ್ಯ ರಾಜು ಬಡಗಿ ನಾಟ್‌ರೀಚಬಲ್‌ ಆಗಿ ಯಾರ ಕೈಗೂ ಸಿಗದೆ, ಏನಾಗಿದೆ ಎಂಬ ಮಾಹಿತಿ ತಿಳಿಯದೆ, ಕಾಂಗ್ರೆಸ್‌ನಿಂದ ವಿಪ್‌ ಜಾರಿ ಮಾಡಿದ್ದರೂ, ಹಾಜರಾಗದೆ ಚುನಾವಣೆಯ ಚಿತ್ರಣವೇ ಬದಲಾಗಿ, ಬಿಜೆಪಿಗೆ ಗೆಲುವಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

ನಾನು ಸಚಿವ ಅನ್ನೋದೆ ನಿಮಗೆ ಇನ್ನೂ ಗೊತ್ತಿಲ್ಲ ಅನಿಸುತ್ತಿದೆ: ಜಿ. ಪರಮೇಶ್ವರ್‌

1-sadasd

Tumakuru ಕ್ಷೇತ್ರ ಅಭಿವೃದ್ಧಿ ಪಡಿಸುವುದೇ ನನ್ನ ಗುರಿ: ಕೇಂದ್ರ ಸಚಿವ ವಿ.ಸೋಮಣ್ಣ

5-

ಕೇಂದ್ರ ಮಂತ್ರಿಯಾಗಿ ಕ್ಷೇತ್ರಕ್ಕೆ ಬಂದ ಮೊದಲ ದಿನವೇ ಸೋಮಣ್ಣ ಡಿಸಿ, ಅಧಿಕಾರಿಗಳಿಗೆ ತರಾಟೆ

1-aaa

Kunigal; ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

2-tumkur

Tumkur: ಕಲುಷಿತ ನೀರು ಕುಡಿದು ಮತ್ತಿಬ್ಬರು ಸಾವು; ಮೃತರ ಸಂಖ್ಯೆ ಮೂರಕ್ಕೆ ಏರಿಕೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

1-asddsadasd

ATP Singles Ranking: ಸುಮಿತ್‌ ಜೀವನಶ್ರೇಷ್ಠ 71ನೇ ರ್‍ಯಾಂಕಿಂಗ್‌

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

football

Team India ಫುಟ್‌ಬಾಲ್‌ ಕೋಚ್‌ ಸ್ಟಿಮ್ಯಾಕ್‌ಗೆ ಗೇಟ್‌ಪಾಸ್‌

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.