22ಕ್ಕೆ ರೈತ ವಿರೋಧಿ ಕಾಯ್ದೆ ಖಂಡಿಸಿ ಬೆಂಗಳೂರು ಚಲೋ


Team Udayavani, Mar 16, 2021, 1:58 PM IST

22ಕ್ಕೆ ರೈತ ವಿರೋಧಿ ಕಾಯ್ದೆ ಖಂಡಿಸಿ ಬೆಂಗಳೂರು ಚಲೋ

ಮಧುಗಿರಿ: ಕೇಂದ್ರ ಸರ್ಕಾರ ವಿವಾದಿತ ಕೃಷಿ, ಕಾರ್ಮಿಕ ಹಾಗೂ ಪ್ರಜಾಪ್ರಭುತ್ವ ದಮನಿಸುವಕಾರ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳುಮುಂದಾಗಿದ್ದು, ಇವುಗಳ ವಿರುದ್ಧ ಧ್ವನಿಎತ್ತಲು ಮಾ.22 ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತಸಂಘಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಹೇಳಿದರು.

ತಾಲೂಕಿನಲ್ಲಿ ಕಳೆದ 5 ದಿನಗಳಿಂದ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಜಾಗೃತಿ ಮೂಡಿಸಿಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಹಿಂದೆ ರಾಜರು ಕೇವಲ ಪಟ್ಟಭದ್ರ ಹಿತಾಸಕ್ತಿಜನರಿಗೆ ಭೂಮಿ ನೀಡಿದಂತೆ ಇಂದು ಈ ಮೋದಿಸರ್ಕಾರ ಅಂಬಾನಿ-ಅಧಾನಿಯ ಕಂಪನಿಗೆ ದೇಶದ ರೈತರ ಭೂಮಿಯನ್ನು ಮಾರಾಟ ಮಾಡಲು ಸಂಚು ರೂಪಿಸಿದೆ. ಲಾಕ್‌ಡೌನ್‌ ನೆಪದಲ್ಲಿ ಆರ್ಥಿಕ ಬಿಕ್ಕಟ್ಟುಉಲ್ಬಣಿಸಿದ್ದು, ಜನರ ಮೇಲೆ ಅಪಾರವಾದ ತೆರಿಗೆಭಾರವನ್ನು ಹೊರಿಸಿದ್ದಾರೆ ಎಂದು ಕಿಡಿಕಾರಿದರು.ಇತ್ತೀಚಿನ ಬಜೆಟ್‌ಗಳು ಜನಸಾಮಾನ್ಯರ ಹೊಟ್ಟೆಬಗೆದು ಶ್ರೀಮಂತ ಕಂಪನಿಗಳ ತಿಜೋರಿತುಂಬಿಸುತ್ತಿದೆ. ಇದರಿಂದ ಕೃಷಿಯನ್ನೇ ನಂಬಿರುವರೈತರು, ಕೃಷಿ ಕಾರ್ಮಿಕರು ಹಾಗೂ ವಾಣಿಜ್ಯಕಾರ್ಮಿಕರ ದುಡಿಮೆಯೆಲ್ಲ ಕಾರ್ಪೋರೇಟ್‌ ಕಂಪನಿಗಳ ಪಾಲಾಗುತ್ತಿದೆ. ಇದರಿಂದ ದೇಶವಾಸಿಗಳು ಗುಲಾಮರಾಗುತ್ತಿದ್ದು, ಪೆಟ್ರೋಲ್‌,ಡಿಸೇಲ್‌ ಬೆಲೆ ಹೆಚ್ಚಳದಿಂದ ದಿನಬಳಕೆಯ ವಸ್ತುಗಳುಆಕಾಶಕ್ಕೇರಿದ್ದು, ಸಾಮಾನ್ಯ ಜನತೆಗೆ 3 ಹೊತ್ತು ಊಟಕ್ಕೂ ಪರದಾಡುವಂತ ಪರಿಸ್ಥಿತಿ ಬಂದೊದಗಿದೆ.

ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಲ್ಲ ಸಂಘಟನೆಗಳ ಒಕ್ಕೂಟವಾದ “ಸಂಯುಕ್ತ ಹೋರಾಟ ಕರ್ನಾಟಕ” ದಿಂದ ಮಾ.22 ರಂದು ಪ್ರತಿಭಟನೆ ನಡೆಸಲಿದ್ದು, ಎಲ್ಲರೂ ಭಾಗವಹಿಸಿ ಹೋರಾಟದಲ್ಲಿ ಯಶಸ್ಸು ಕಾಣಲು ಒಗ್ಗಟ್ಟು ಪ್ರದರ್ಶಿಸುವಂತೆ ಮನವಿ ಮಾಡಿದ್ದಾರೆ. ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ಮಾತನಾಡಿ, ದೇಶದಲ್ಲಿನ ಮೋದಿಸರ್ಕಾರ ಹಾಗೂ ರಾಜ್ಯದ ಯಡಿಯೂರಪ್ಪನವರಸರ್ಕಾರವು ಕೃಷಿಕರ ಪಾಲಿಗೆ ಮರಣಶಾಸನವನ್ನುಬರೆಯುತ್ತಿದ್ದು ಅಪಾಯಕಾರಿ. ಭೂ ಮಸೂದೆ,ವಿದ್ಯುತ್‌ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳನ್ನುತಂದಿರುವುದು ದೇಶಕ್ಕೆ ಮಾರಕವಾಗಲಿದೆ ಎಂದು ತಿಳಿಸಿದರು.

ಯತಿರಾಜು ಅಖೀಲ ಭಾರತೀಯ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕಯತಿರಾಜು, ಜಿಲ್ಲಾ ಸಂಘಟನಾ ಕಾರ್ಯದರ್ಶಿದೊಡ್ಡಮಾಳಯ್ಯ, ಜಿಲ್ಲಾ ಮಹಿಳಾಧ್ಯಕ್ಷೆ ನಾಗರತ್ನಮ್ಮ, ತಾ. ಅಧ್ಯಕ್ಷ ಡಿ.ಆರ್‌.ರಾಜಶೇಖರ್‌, ತಾ.ಕಾರ್ಯದರ್ಶಿ ನಾಗರಾಜು, ತಾಲೂಕು ಮಹಿಳಾಅಧ್ಯಕ್ಷೆ ಭಾಗ್ಯಮ್ಮ, ಕನ್ನಡಪರ ಸಂಘಟನೆಗಳ ಒಕ್ಕೂದ ಅಧ್ಯಕ್ಷ ತಿಮ್ಮರಾಜು ಇದ್ದರು.

ತಾಲೂಕು ಸರ್ವೆ ಇಲಾಖೆ ಅಧಿಕಾರಿಗಳು ರೈತರ ಜಮೀನು ಸರ್ವೆಮಾಡಲು ಮನಸೋಇಚ್ಛೆ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಈ ಬಗ್ಗೆ ತಹಶೀ ಲ್ದಾರ್‌ ಕೂಡಲೇ ಸಭೆ ನಿಗದಿ ಮಾಡಿ. ರೈತ ರನ್ನೂ ಆಹ್ವಾನಿಸಿದರೆ ಇವರ ಬಂಡವಾಳ ವನ್ನು ದಾಖಲೆ ಸಮೇತ ಬಯಲು ಮಾಡುತ್ತೇವೆ. ಈ ಬಗ್ಗೆ ಉಪವಿಭಾಗಾ ಧಿಕಾರಿಗಳು ಸಹ ರೈತರ ನೆರವಿಗೆ ನಿಲ್ಲಬೇಕು. – ಜಿ.ಸಿ.ಶಂಕರಪ್ಪ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ರೈತಸಂಘ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.