ವೈಫ‌ಲ್ಯ ಮರೆಮಾಚಲು ಬಿಜೆಪಿ ಹೊಸ ಕಾನೂನು ಜಾರಿ


Team Udayavani, Dec 18, 2019, 3:00 AM IST

vypalya

ತುಮಕೂರು: ಸರ್ಕಾರ ತನ್ನ ವೈಫ‌ಲ್ಯಗಳನ್ನು ಮುಚ್ಚಿಕೊಳ್ಳಲು ದೇಶದಲ್ಲಿ ಅಶಾಂತಿ ಉಂಟು ಮಾಡುವ ಹೊಸ ಕಾನೂನುಗಳನ್ನು ಜಾರಿ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ವಕ್ತಾರ ಮುರಳೀಧರ ಹಾಲಪ್ಪ ಆರೋಪಿಸಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದು 5 ವರ್ಷ 6 ತಿಂಗಳು ಕಳೆದಿವೆ. ದೇಶದ ಅಭಿವೃದ್ಧಿ ಹೆಸರಲ್ಲಿ ನೋಟು ಅಮಾನ್ಯಿàಕರಣ, ಜಿಎಸ್‌ಟಿ ಜಾರಿ, ಜಿಡಿಪಿ ದರ ಕುಸಿಯುವಂತೆ ಮಾಡಿದರು, ಈಗ ಪೌರತ್ವ ಕಾಯ್ದೆ ಜಾರಿ ಮಾಡುತ್ತಿದೆ. ಹೀಗೆ ತಮ್ಮ ವೈಫ‌ಲ್ಯಗಳನ್ನು ಮುಚ್ಚಿಹಾಕಲು ಹೊಸ ಕಾನೂನು ತರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯವರು ಹೇಳಿದರೆ ತಪ್ಪಾಗುವುದಿಲ್ಲ: ದೆಹಲಿ ರೇಪ್‌ ಕ್ಯಾಪಿಟಲ್‌ ಎಂದು ರಾಹುಲ್‌ ಗಾಂಧಿ ನೀಡಿದ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದ ಬಿಜೆಪಿಗೆ, ಮೋದಿ ಹೇಳಿದರೆ ಅದರಲ್ಲಿ ತಪ್ಪಿಲ್ಲ. ಈಗಾಗಲೇ ದೆಹಲಿ ರೇಪ್‌ ಕ್ಯಾಪಿಟಲ್‌ ಎಂದಾಗಿದೆ. ಒಂದು ವರ್ಷದಲ್ಲಿ ಉತ್ತರ ಪ್ರದೇಶದಲ್ಲಿ 37 ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಜಾì ಮೇಲಿನ ಆರೋಪ ಸಾಬೀತಾಗಿದೆ. ಪ್ರಧಾನಿ ಮೋದಿ ಕೂಡ ದೆಹಲಿ ರೇಪ್‌ ಕ್ಯಾಪಿಟಲ್‌ ಎಂದು ಹೇಳಿದ್ದರು. ಅದಕ್ಕೆ ಯಾರೂ ಚಕಾರ ಎತ್ತಿಲ್ಲ. ದೆಹಲಿ ರೇಪ್‌ ಕ್ಯಾಪಿಟಲ್‌ ಎಂಬುದಕ್ಕೆ ಉನ್ನಾವ್‌, ಕತುವಾ ಘಟನೆಗಳು ಉತ್ತಮ ಉದಾಹರಣೆ ಆಗಿದೆ ಎಂದರು.

ಪೌರತ್ವ ಕಾಯ್ದೆಗೆ ವಿರೋಧ: ಪೌರತ್ವ ಕಾಯ್ದೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಜೊತೆಗೆ ಹಲವು ರಾಜ್ಯಗಳಲ್ಲಿ 144 ಸೆಕ್ಷನ್‌ ಜಾರಿ ಮಾಡಿದ್ದಾರೆ. ಅಲ್ಲಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌ ಕಡೆ ಪ್ರವಾಸಕ್ಕೆ ಯಾರು ಬರಬಾರದು ಎಂದು ಅಲ್ಲಿನ ಸರ್ಕಾರಗಳು ಆದೇಶ ಹೊರಡಿಸಿವೆ. ಆದರೆ ಪ್ರಧಾನಿ ಮೋದಿಯವರು ಮಾತ್ರ ದೆಹಲಿಯಲ್ಲಿ ಕುಳಿತುಕೊಂಡು ನಿಮ್ಮೊಂದಿಗೆ ನಾನಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ರವಾನಿಸುತ್ತಾರೆ. ಈ ಘಟನೆಗಳ ಪರಿಣಾಮದಿಂದ ಚೀನಾದಲ್ಲಿ ನಡೆಯಬೇಕಿದ್ದ ಶೃಂಗಸಭೆ ರದ್ದಾಯಿತು. ಕೇಂದ್ರ ಗೃಹ ಸಚಿವ ಅಮಿಶಾರ ಮೇಘಾಲಯ, ಮಣಿಪುರದ ಪ್ರವಾಸ ರದ್ದಾಯಿತು. ಇದಕ್ಕೆ ಕಾರಣವೇನೆಂದು ಪ್ರಶ್ನಿಸಿದರು.

ತಪ್ಪು ಮುಚ್ಚಿಕೊಳ್ಳಲು ಕಾಂಗ್ರೆಸ್‌ ಮೇಲೆ ಗೂಬೆ: ಬಿಜೆಪಿ ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷದವರ ಮೇಲೆ ಬಿಜೆಪಿ ಪಕ್ಷದವರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಆಗುವ ಪ್ರತಿಯೊಂದು ಅನಾಚಾರಗಳಿಗೆ ಕಾಂಗ್ರೆಸ್‌ ಪಕ್ಷವೇ ಕಾರಣ ಎಂಬಂತೆ ಬಿಂಬಿಸಲಾಗುತ್ತಿದೆ. ಅಲ್ಲದೆ ನಮ್ಮ ರಾಜ್ಯದ ಸಮಸ್ಯೆಗಳ ಬಗ್ಗೆ ಈವರೆಗೆ 12 ಪತ್ರಗಳನ್ನು ಸಲ್ಲಿಸಿದರೂ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ದೂರಿದರು.

ಬಿಜೆಪಿಯದ್ದು ವೋಟ್‌ ಬ್ಯಾಂಕ್‌ ರಾಜಕಾರಣ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌.ರಾಮಕೃಷ್ಣ ಮಾತನಾಡಿ, ಸರ್ವರಿಗೂ ಸಮಪಾಲು, ಸಮಬಾಳು ಎಂಬ ಅಂಬೇಡ್ಕರ್‌ ಆಶಯವನ್ನು ಬಿಜೆಪಿ ಮರೆತಿದೆ. ಕೇವಲ ವೋಟ್‌ಬ್ಯಾಂಕಿಗಾಗಿ ರಾಜಕಾರಣ ಮಾಡುತ್ತಿದ್ದು, ಇಂದು ಡೀಸೆಲ್‌, ಪೆಟ್ರೋಲ್‌ ದರ ಏರಿಕೆಯಾಗಿದೆ. ಜಿಎಸ್‌ಟಿ ಬಗೆಗಿನ ಗೊಂದಲಗಳು ಇಂದಿಗೂ ಪರಿಹಾರವಾಗಿಲ್ಲ. ಕೇಂದ್ರ ಸರ್ಕಾರದ ಧೋರಣೆಯಿಂದ ಪ್ರತಿಯೊಬ್ಬರಿಗೂ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಜಿಎಸ್‌ಟಿಯನ್ನು ಸರಳೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದಿಂದ ಎಲ್ಲಾ ಟೋಲ್‌ಗ‌ಳಲ್ಲಿ ಫಾಸ್ಟ್‌ ಟ್ಯಾಗ್‌ ಮಾಡಿಸಲು ಆದೇಶ ನೀಡಲಾಗಿದೆ. ಇದರಿಂದ ಟೋಲ್‌ ಮೂಲಕ ಹೋಗುವ ಎಲ್ಲಾ ವಾಹನಗಳ ಬ್ಯಾಂಕ್‌ ಖಾತೆಯಿಂದ ಟೋಲ್‌ ಹಣ ಕಡಿತಗೊಳ್ಳುತ್ತದೆ. ರಸ್ತೆಯಲ್ಲಿ ಚಲಿಸುವ ಎಲ್ಲಾ ವಾಹನದಾರರು ಶ್ರೀಮಂತರಾಗಿರುವುದಿಲ್ಲ, ಬಡವರು ಓಡಾಡುತ್ತಾರೆ. ಇದರಿಂದ ಅವರಿಗೆ ತೀವ್ರವಾಗಿ ಸಮಸ್ಯೆ ಎದುರಾಗುತ್ತದೆ. ತುಮಕೂರಿನ ಕ್ಯಾತ್ಸಂದ್ರ-ನೆಲಮಂಗಲ ಟೋಲ್‌ ಮಧ್ಯೆ ಸರ್ವೀಸ್‌ ರಸ್ತೆಯೇ ಇಲ್ಲ. ಮೊದಲು ಸರ್ವೀಸ್‌ ರಸ್ತೆ ಮಾಡಿದ ನಂತರ ಫಾಸ್ಟ್‌ ಟ್ಯಾಗ್‌ ಜಾರಿಗೆ ತರಬೇಕು. ಈ ಸಂಬಂಧ ಮುಖಂಡರ ನಡುವೆ ಚರ್ಚೆ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್‌ ಮುಖಂಡ ರೆಡ್ಡಿ ಚಿನ್ನಯಲ್ಲಪ್ಪ ಮಾತನಾಡಿ, ರೇಪ್‌ ಇನ್‌ ಡೆಲ್ಲಿ ಎಂದು ಮೋದಿ ಹೇಳಿದಾಗ ಯಾರು ಈ ಬಗ್ಗೆ ಮಾತನಾಡಿಯೇ ಇಲ್ಲ. ಆದರೆ ಈಗ ರಾಹುಲ್‌ಗಾಂಧಿ ದೆಹಲಿ ರೇಪ್‌ ಕ್ಯಾಪಿಟಲ್‌ ಎಂದು ಹೇಳುತ್ತಿದ್ದಂತೆಯೇ ಸ್ಮತಿ ಇರಾನಿಯವರು 35 ಜನ ಸಂಸದರನ್ನು ಒಗ್ಗೂಡಿಸಿಕೊಂಡು ರಾಹುಲ್‌ಗಾಂಧಿ ಮೇಲೆ ಎರಗುತ್ತಾರೆ. ಅಂದು ಮೋದಿ ಹೇಳಿದ್ದು ಸರಿ ಎಂದಾದರೆ ಇಂದು ರಾಹುಲ್‌ ಗಾಂಧಿ ಹೇಳಿದ್ದು ಸರಿಯೇ ಎಂದು ರಾಗಾ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದ ವೇಳೆಯಲ್ಲಿ ತುರ್ತು ಪರಿಸ್ಥಿತಿ ಬಂದಾಗ ಘೋಷಣೆ ಮಾಡಿದ್ದರು.

ಆದರೆ ಇದೀಗ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಉತ್ತರ ಕೊಡಲು ಯಾರು ಮುಂದೆ ಬರುತ್ತಿಲ್ಲ ಎಂದು ಆರೋಪಿಸಿದರು. ಜಿಪಂ ಸದಸ್ಯ ನಾರಾಯಣಮೂರ್ತಿ, ಕಾಂಗ್ರೆಸ್‌ ಮುಖಂಡರಾದ ಕೊಂಡವಾಡಿ ಚಂದ್ರಶೇಖರ್‌, ವಾಲೆ ಚಂದ್ರಯ್ಯ, ಪುರುಷೋತ್ತಮ್‌, ಪುಟ್ಟರಾಜು, ಮರಿಚನ್ನಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್‌ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿ ಸರ್ಕಾರ ಸಂವಿಧಾನ ಬದಲಾವಣೆಗೆ ವ್ಯವಸ್ಥಿತವಾಗಿ ಪಿತೂರಿ ಮಾಡುತ್ತಿದೆ. ಬೇರೆ ಬೇರೆ ಸಮುದಾಯದ ಮೇಲೆ ಮನು ಸಂಸ್ಕೃತಿಯನ್ನು ಏರುತ್ತಿದೆ. ಧರ್ಮ ಎಂಬ ಅಮಲಿನಲ್ಲಿ ಒಂದು ಧರ್ಮದ ಮೇಲೆ ಮತ್ತೂಂದು ಧರ್ಮವನ್ನು ಎತ್ತಿಕಟ್ಟುತ್ತಿದ್ದಾರೆ. ಸಿಲ್ಲಿ ಲಲ್ಲಿ ಧಾರವಾಹಿಯಲ್ಲಿ ಲಲಿತಾ ಎಂಬ ಪಾತ್ರಧಾರಿ ನನ್ನನ್ನು ನಂಬಿ ನಂಬಿ ಎಂದು ಹೇಳಿದಂತೆ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ನಮ್ಮನ್ನು ನಂಬಿ ನಂಬಿ ಎಂದು ದೇಶದ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿ, ಕಾಂಗ್ರೆಸ್‌ ಪಕ್ಷದವರು ನಿರ್ಲಿಪ್ತರಾಗಿದ್ದು, ಕಾಂಗ್ರೆಸ್‌ ಪಕ್ಷವನ್ನು ಬಿಜೆಪಿ ಮತ್ತು ಜೆಡಿಎಸ್‌ ನವರು ಸೋಲಿಸಲು ಸಾಧ್ಯವಿಲ್ಲ. ಕಾಂಗ್ರೆಸ್‌ ಪಕ್ಷವನ್ನು ಕಾಂಗ್ರೆಸ್‌ನವರೇ ಸೋಲಿಸುತ್ತಿದ್ದಾರೆ.
-ಕೆಂಚಮಾರಯ್ಯ, ಜಿಪಂ ಸದಸ್ಯ

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.