ಬಿಜೆಪಿ ರಾಜ್ಯದಲ್ಲಿ ಸುನಾಮಿ ರೀತಿ ಮತ್ತೆ ಅಧಿಕಾರಕ್ಕೆ : ಸಿಎಂ ಬೊಮ್ಮಾಯಿ

ಜನ ಸಂಕಲ್ಪ ಯಾತ್ರೆ ; ಈ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಕಮಲ ಅರಳುತ್ತದೆ

Team Udayavani, Dec 7, 2022, 7:20 PM IST

1dsadsdsa

ಕೊರಟಗೆರೆ: 2023 ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗುಜರಾತ್ ರಾಜ್ಯದಂತೆ ಸುನಾಮಿ ರೀತಿ ಮತ್ತೆ 132 ಸ್ಥಾನಗಳನ್ನು ಗಳಿಸಿ ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬುಧವಾರ ನಡೆದ ಬಿಜೆಪಿ ”ಜನ ಸಂಕಲ್ಪ” ಯಾತ್ರೆಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ಜನರು ಗಮನಿಸಿದ್ದಾರೆ. ಧರ್ಮಗಳ ಮತ್ತು ಜಾತಿಗಳ ಮಧ್ಯ ವಿಷಬೀಜ ಬಿತ್ತಿ ಸಮಾಜವನ್ನು ಒಡೆದು ಅದರಲ್ಲಿ ಅಧಿಕಾರವನ್ನು ಅನುಭವಿಸುವ ಕೆಟ್ಟ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ.ಮುಸ್ಲಿಮರ ಒಲೈಕೆಯ ನಾಟಕವಾಡುವ ಕಾಂಗ್ರೆಸ್ ನಾಯಕರುಗಳು ಅವರ 5 ಸಾವಿರ ಕೋಟಿ ವಕ್ಫ್ ಬೋರ್ಡ್ ಆಸ್ತಿಯನ್ನು ಕಬಳಿಸಿದ್ದಾರೆ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಕಣ್ಣು ಒರೆಸಿಕೊಂಡು ಮೋಸಮಾಡಿಕೊಂಡು ಬರುತ್ತಿದ್ದಾರೆ.ನಾವುಗಳು ಎಸ್ಸಿ ಎಸ್ಟಿ ಸಮುದಾಯಕ್ಕೆ ಅವರ ಮೀಸಲಾತಿಯನ್ನು ಶೇ.17 ಮತ್ತು ಶೇ.7 ರಷ್ಟು ಹೆಚ್ಚಿಸಿದ್ದೇವೆ. ಅದರೆ ಸಿದ್ದರಾಮಯ್ಯನವರಿಗೆ ಈ ಬದ್ದತೆ ಇರಲ್ಲಿಲ್ಲ.ಬಯಲು ಸೀಮೆಯ ಈ ಭಾಗಕ್ಕೆ ಎತ್ತಿನಹೊಳೆ ನೀರಾವರಿ ಯೋಜನೆಯನ್ನು ಪ್ರಾರಂಭಿಸಿದ್ದು ಬಿಜೆಪಿ ಸರ್ಕಾರ ಅದನ್ನು ಪೂರ್ಣಗೋಳಿಸುವುದು ನಾವೆ, ಈ ಯೋಜನೆಯ ಕಾಮಗಾರಿಗಾಗಿ ನನ್ನ ಅವದಿಯಲ್ಲಿ 3 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ್ದೇನೆ.ರಾಜ್ಯದಲ್ಲಿ 100 ಕ್ಕೂ ಹೆಚ್ಚು ಅಂಬೇಡ್ಕರ್ ವಸತಿ ಶಾಲೆ, ಕನಕ ವಸತಿ ಶಾಲೆಗಳನ್ನು ನಿರ್ಮಿಸಿದ್ದೇವೆ, ಈ ಕಾರಣಕ್ಕಾಗಿ ಬಿಜೆಪಿಗೆ ಮತ ನೀಡಿ ರಾಜ್ಯದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಕರೆ ನೀಡಿದರು.

ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತನ್ನಿ, ನಂತರ ಆ ಅವಧಿಯಲ್ಲಿ ಈ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ಯಲಾಗುವುದು. ಈ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ರವರ ಸೋಲಿಗೆ ನೀವು ತಲೆ ಕೆಡಿಸಿಕೊಳ್ಳಬೇಡಿ, ಅವರನ್ನು ಕಾಂಗ್ರೆಸ್ ಪಕ್ಷದವರೇ ಸೋಲಿಸುತ್ತಾರೆ.ನಮ್ಮ ಅಭ್ಯರ್ಥಿ ಗೆಲುವಿಗೆ ನೀವುಗಳು ಶ್ರಮಪಟ್ಟರೆ ಸಾಕು ಈ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಕಮಲ ಅರಳುತ್ತದೆ ಎಂದರು.

ಸಚಿವ ಗೋವಿಂದಕಾರಜೋಳ ಮಾತನಾಡಿ, ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದಷ್ಟು ಬೇರೆ ಯಾರು ಮಾಡಿಲ್ಲ. ಅವರನ್ನು ಲೋಕಸಬಾ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿ ಮಾಡಲಿಲ್ಲ, ಕುಯಿಕ್ತಿಯಿಂದ ಸೋಲಿಸಿದರು, ಅವರ ಜೀವಿತಾವಧಿಯಲ್ಲಿ ಸಂವಿಧಾನ ಬದಲಾಯಿಸಿದರು. ಅವರು ಮರಣ ಹೊಂದಿದಾಗ ಅವರ ಶವಸಂಸ್ಕಾರಕ್ಕೆ ದೆಹಲಿಯಲ್ಲಿ ಸ್ಥಳ ನೀಡಲ್ಲಿಲ್ಲ, ಆದರೆ ಈಗ ಅಂಬೇಡ್ಕರ್ ಬಗ್ಗೆ ನಾಟಕದ ಮಾತುಗಳನ್ನು ಆಡುತ್ತಿದ್ದಾರೆ ಎಂದರು.

ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ತಿಂಗಳಿಗೆ 80 ಸಾವಿರ ಬಡವರಿಗೆ ಉಚಿತ ಅಕ್ಕಿಯನ್ನು ನೀಡುತ್ತಿದೆ. ರಾಜ್ಯ ಸರ್ಕಾರವು ಸಹ ನೀಡುತ್ತಿರುವ ಅಕ್ಕಿಯಲ್ಲಿ ಕೇಂದ್ರ ಸರ್ಕಾರದ ಬಹುಪಾಲು ಹಣವಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಕಿಯ ಚೀಲವನ್ನು ಸಹ ನೀಡಲಿಲ್ಲ ಕೇಂದ್ರ ಸರ್ಕಾರದ ಹಣದ ಅಕ್ಕಿಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಬಡವರ ಅಭಿವೃಧ್ದಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.

ಬಿಜೆಪಿಯಲ್ಲಿ ಅಶಿಸ್ತಿನ ವರ್ಥನೆ

ಬಿಜೆಪಿ ಪಕ್ಷ ಶಿಸ್ತು ಬದ್ದ ಎಂದು ಬೀಗುತ್ತಿರುತ್ತದೆ, ಆದರೆ ಮುಖ್ಯಮಂತ್ರಿ ಮತ್ತು ಸಚಿವರುಗಳ ಭಾಷಣದ ಮಧ್ಯ ಟಿಕೆಟ್ ಆಕಾಕ್ಷಿಗಳಾದ ಅನಿಲ್ ಕುಮಾರ್ ಮತ್ತು ಡಾ.ಲಕ್ಷ್ಮೀಕಾಂತ್ ರವರ ಬೆಂಬಲಿಗರು ಅವರ ಪರ ಪದೆ ಪದೆ ಕೂಗಾಡಿ ಕಾರ್ಯಕ್ರಮದಲ್ಲಿ ಕಿರಿ ಕಿರಿ ಮಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕ ರಾಜೇಶ್‌ಗೌಡ, ಸಂಸದ ಜಿ.ಎಸ್.ಬಸವರಾಜು, ಮಾಜಿ ಸಂಸದ ಮುದ್ದಹನುಮೇಗೌಡ, ವಿಧಾನ ಪರಿಷತ್ ಸದಸ್ಯರು ಗಳಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ, ಜಿಲ್ಲಾ ಅಧ್ಯಕ್ಷರುಗಳಾದ ಬಿ.ಕೆ.ಮಂಜುನಾಥ್, ರವಿಕುಮಾರ್, ಮಂಡಲ ಅಧ್ಯಕ್ಷ ಪವನ್‌ಕುಮಾರ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.