ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ
Team Udayavani, Dec 8, 2021, 11:28 AM IST
ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನನ್ನು ಬರ್ಬರ ಕೊಲೆ ಮಾಡಿದ ಘಟನೆ ಜಿಲ್ಲೆಯ ಪಾವಗಡ ಹೊರವಲಯದ ಬಿ.ಕೆಹಳ್ಳಿ ಕ್ರಾಸ್ ಬಳಿ ಮಂಗಳವಾರ ಸಂಜೆ ನಡೆದಿದೆ.
46 ವರ್ಷದ ಪ್ರಸನ್ನ ಕುಮಾರ್ ಕೊಲೆಯಾದ ವ್ಯಕ್ತಿ. ಇವರು ಪಾವಗಡದಿಂದ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ಇದನ್ನೂ ಓದಿ:ಪಾಕಿಸ್ತಾನ: ನಾಲ್ವರು ಯುವತಿಯರನ್ನು ನಗ್ನಗೊಳಿಸಿ ಮೆರವಣಿಗೆ, ಹಲ್ಲೆ; ಐವರ ಬಂಧನ
ಕೊಲೆಗೆ ನಿಖರ ಕಾರಣ ತಿಳಿದಿಲ್ಲ. ತಾಲೂಕು ಬಿಜೆಪಿಯಲ್ಲಿ ರೈತ ಯುವಮೋರ್ಚ ಕಾರ್ಯಕಾರಿಣಿ ಸದಸ್ಯನಾಗಿದ್ದ ಪ್ರಸನ್ನಕುಮಾರ್ ವಿಧಾನಪರಿಷತ್ ಚುನಾವಣೆ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿದ್ದರು.
ಸ್ಥಳಕ್ಕೆ ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಭೇಟಿ ನೀಡಿದ್ದಾರೆ.