ಬೋವಿ ಸಮುದಾಯದಿಂದ ಬಿಜೆಪಿ ಬೆಂಬಲ’


Team Udayavani, Apr 14, 2019, 4:36 PM IST

bowi

ತುಮಕೂರು: ಎಲ್ಲ ರಂಗದಲ್ಲಿಯೂ ಬೋವಿ ಸಮುದಾಯ ಅಭಿವೃದ್ಧಿ ಹೊಂದಲು ಬಿಜೆಪಿ ಸಹಕಾರ ನೀಡುತ್ತಿರುವುದರಿಂದ ಬಿಜೆಪಿಯನ್ನು ಬೋವಿ ಸಮುದಾಯ ಎಲ್ಲ ಚುನಾವಣೆಗಳಲ್ಲಿಯೂ ಬೆಂಬಲಿಸುತ್ತಾ ಬಂದಿದ್ದು, ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸು ವಂತೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಬೋವಿ ಸಮುದಾಯದ ಸಮಾವೇಶದಲ್ಲಿ ಮಾತನಾಡಿ, ಬೋವಿ ಸಮುದಾಯದಿಂದಲೇ ಬಿ.ಎಸ್‌.ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿ ಆಡಳಿತ ನಡೆಸಿದರು. ಸರ್ಕಾರದ ವತಿಯಿಂದ ಸಿದ್ದರಾಮೇಶ್ವರ ಜಯಂತಿ, ಬೋವಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಮೂಲಕ ಯಡಿಯೂರಪ್ಪ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದರು. ಬೋವಿ ಸಮುದಾಯಕ್ಕೆ ಸೇರಿದವೆಂಕಟರಮಣಪ್ಪ ಅವರನ್ನು ಮೊದಲು ಸಚಿವರನ್ನಾಗಿ ಮಾಡಿದ್ದೇ ಬಿ.ಎಸ್‌.ಯಡಿಯೂರಪ್ಪ ಎನ್ನುವುದನ್ನು ನೆನಪಿಸಿಕೊಳ್ಳಬೇಕು ಎಂದರು.

ಸಮುದಾಯ ಒಡೆಯುವ ಕೆಲಸ: ದೇಶದಲ್ಲಿ ನಮ್ಮ ಸಮುದಾಯವನ್ನು ಒಗ್ಗೂಡಿಸುವ ಕೆಲಸವನ್ನು ಮಾಡಬೇಕಿದೆ. ಪಾಕಿಸ್ತಾನದಲ್ಲಿಯೂ ನಮ್ಮ
ಸಮುದಾಯದವರಿದ್ದು, ಸಂಕಷ್ಟದಲ್ಲಿರುವ ಅವರನ್ನು ರಕ್ಷಿಸಿ, ಭಾರತಕ್ಕೆ ಕರೆತರುವ ಕೆಲಸ ಮಾಡಲು ನರೇಂದ್ರ ಮೋದಿ ಅವರಿಂದ ಮಾತ ಸಾಧ್ಯ. ರಾಷ್ಟ್ರಮಟ್ಟದಲ್ಲಿ ಸಮುದಾಯವನ್ನು ಒಟ್ಟಾಗಿಸುವ ಮೂಲಕ ಸಮುದಾಯವನ್ನು ಅಭಿವೃದ್ಧಿ ಪಡಿಸಲು ಕೆಲಸ ಮಾಡಬೇಕಿದೆ. ಆದರೆ ನಮ್ಮಲ್ಲಿಯೇ ಇರುವ ಕೆಲವರು ಸಮುದಾಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.

ಸರಿಯಾಗಿ ಬುದ್ಧಿ ಕಲಿಸಿಲ್ಲ: ಕುಮಾರಸ್ವಾಮಿ ಸೈನಿಕರನ್ನು ಅವಮಾನಿಸಿದ್ದಾರೆ. ದೇಶವನ್ನು ರಕ್ಷಿಸುತ್ತಿರುವವರ ಬಗ್ಗೆ ಅವಹೇಳನ ಮಾಡುತ್ತಾರೆ. ನಾಳ ನಮ್ಮ ಸಮುದಾಯವನ್ನು ಹೀಗೆ ಅವಹೇಳನ ಮಾಡಬಹುದು. ದೇವೇಗೌಡರು ಕುಮಾರ ಸ್ವಾಮಿಗೆ ಸರಿಯಾಗಿ ಬುದ್ಧಿ ಕಲಿಸಿಲ್ಲ. ಸರಿಯಾಗಿ ಬುದ್ಧಿ ಕಲಿಸಿದ್ದರೆ ಹೀಗೆಲ್ಲ ಮಾತನಾಡುತ್ತಿರಲಿಲ್ಲ. ಹೇಮಾವತಿ ನೀರು ಅರಸೀಕೆರೆವರೆಗೆ ಬಂದು ನಂತರ ಚನ್ನರಾಯಪಟ್ಟಣಕ್ಕೆ ಹೋಗುತ್ತದೆ. ನಾಗಮಂಗಲಕ್ಕೂ ನೀರಿಲ್ಲ, ಅವರ ತೋಟ ಗದ್ದೆಗಳಿರುವ ಕಡೆಗೆ ಮಾತ್ರ ಹೇಮಾವತಿ ನೀರು ಹರಿಸುತ್ತಿದ್ದಾರೆ ಎಂದು ದೂರಿದರು.

ಜಯಶೀಲರನ್ನಾಗಿ ಮಾಡಿ: ಬಿಜೆಪಿ ಅಭ್ಯರ್ಥಿ ಜಿ.ಎಸ್‌. ಬಸವರಾಜು ಮಾತನಾಡಿ, ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಬದ್ಧವಾಗಿದ್ದು, ಬೋವಿ ಸಮುದಾಯದ ಸಮಸ್ಯೆ ಗಳಿಗೆ ಪರಿಹಾರ ದೊರಕಿಸಿಕೊಡುತ್ತೇನೆ. ಈ
ಬಾರಿಯೂ ಬೋವಿ ಸಮುದಾಯ ನನ್ನನ್ನು ಬೆಂಬಲಿಸುವ ಮೂಲಕ ಜಯಶೀಲರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು. ಆಂಧ್ರದ ವೆಂಕಟರಮಣಪ್ಪ ಅವರನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದು ನಾನೇ. ನಾನೇ ಬೆಳೆಸಿದ ಊರುಕೆರೆ ಉಮೇಶ್‌ ಇಬ್ಬರು ಒಂದಾಗಿ ನನ್ನ ವಿರುದ್ಧವೇ ಸಮಾವೇಶ ಮಾಡುತ್ತಾರೆ. ಆಂಧ್ರದವರಾದ ವೆಂಕಟರಮಣಪ್ಪ ಅವರು ಇಲ್ಲಿ ಬಂದು ಕೆಲಸ ಮಾಡುತ್ತಾರಾ? ನಿಮ್ಮೆಲ್ಲರ ಯೋಗಕ್ಷೇಮವನ್ನು ವಿಚಾರಿಸುತ್ತಾರಾ? ಸ್ಥಳೀಯ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.

ಜನರಿಂದ ತಕ್ಕ ಪಾಠ: ಮಾಜಿ ಶಾಸಕ ಸುರೇಶ್‌ ಗೌಡ ಮಾತನಾಡಿ, ದೇವೇಗೌಡರ ಕುಟುಂಬ ರಾಜಕಾರಣಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಮಕ್ಕಳು, ಮೊಮ್ಮೊಕ್ಕಳನ್ನು ಚುನಾವಣೆಗೆ ನಿಲ್ಲಿಸು ತ್ತಿರುವ ಜೆಡಿಎಸ್‌ನ ಕುಟುಂಬ ರಾಜಕಾರಣಕ್ಕೆ ಮತದಾರರೇ ಉತ್ತರ ನೀಡಲಿದ್ದಾರೆ. ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮೋದಿ ಅವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಮತ ನೀಡುವಂತೆ ತಿಳಿಸಿದರು.

ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿಗಣೇಶ್‌, ನಗರ ಪಾಲಿಕೆ ಸದಸ್ಯ
ಮಂಜುನಾಥ್‌, ಮುಖಂಡ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಓಂಕಾರ್‌,
ಪುರುಷೋತ್ತಮ್‌, ರವಿ ಮಾಕಳಿ ಸೇರಿದಂತೆ ಇತರರು ಇದ್ದರು

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.