ಬೋರನಕಣಿವೆ ದುರಸ್ತಿ ಕಾರ್ಯ ಆರಂಭ

ಜಲಾಶಯದ ಒಳಗೋಡೆಯ ಗಾರೆ ಸಂಪೂರ್ಣ ಹಾಳು ; ನೀರಿನಲ್ಲಿ ಕರಗುತ್ತಿದೆ ಇಟ್ಟಿಗೆ

Team Udayavani, Sep 23, 2021, 5:30 PM IST

ಬೋರನಕಣಿವೆ ದುರಸ್ತಿ ಕಾರ್ಯ ಆರಂಭ

ಹುಳಿಯಾರು: ಕೆಆರ್‌ಎಸ್‌ ಜಲಾಶಯ ಕ್ಕಿಂತಲೂ ಮೊದಲೇ ನಿರ್ಮಾಣಗೊಂಡ 125 ವರ್ಷಗಳ ಇತಿಹಾಸವುಳ್ಳ ಹುಳಿಯಾರು ಹೋಬಳಿಯ ಬೋರನಕಣಿವೆ ಜಲಾಶಯದ ಒಳಗೋಡೆಗಳು ಶಿಥಿವಾಗಿದ್ದು, ಸಣ್ಣ ನೀರಾವರಿ ಇಲಾಖೆಯಿಂದ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

1892ರಲ್ಲಿ ಮೈಸೂರು ಮಹಾರಾಜರು ಕಲ್ಲು, ಮಣ್ಣಿನ ಇಟ್ಟಿಗೆ ಮತ್ತು ಗಾರೆಯಿಂದ ಈ ಜಲಾಶಯವನ್ನು ಕಟ್ಟಿಸಿದ್ದರು. ಜಲಾಶಯ ಕಟ್ಟಿ ನೂರಾರು ವರ್ಷವಾಗಿರುವುದರಿಂದ ಸಹಜವಾಗಿ ಜಲಾಶಯದ ಒಳ ಗೋಡೆಯ ಗಾರೆ ಸಂಪೂರ್ಣ ಹಾಳಾಗಿತ್ತು. ಅಲ್ಲದೆ, ಗೋಡೆಯ ಇಟ್ಟಿಗೆಯೂ ಸಹ ನೂರಾರು ವರ್ಷಗಳಿಂದ ನೀರಿನಲ್ಲಿ ನೆನೆದು ಕರಗುತ್ತಿತ್ತು. ಹೀಗೆ ನಿರ್ಲಕ್ಷ್ಯದಿಂದ ಇಡೀ ಜಲಾಶಯವೇ ಶಿಥಿಲವಾಗುವ ಆತಂಕ ಎದುರಾಗಿತ್ತು.

ಕೆಳಮಟ್ಟದಲ್ಲಿದೆ ನೀರು: ಅಲ್ಲದೆ ಜಲಾಶಯದ ಗೋಡೆಯಲ್ಲಿ ಅರಳಿಗಿಡ ಸೇರಿದಂತೆ ವಿವಿಧ ಗಿಡಗಳು ಬೆಳೆದಿದ್ದು, ಇವುಗಳ ಬೇರುಗಳು ಜಲಾಶಯ ಕೊರೆದು ಜಲಾಶಯಕ್ಕೆ ಭಾರಿ ಹಾನಿ ಮಾಡುವ ಸಂಭವವಿತ್ತು. ಕಳೆದ ಎರಡು- ಮೂರು ವರ್ಷಗಳಿಂದ ಬೋರನ ಕಣಿವೆ ಜಲಾಶಯ ಪ್ರದೇಶದಲ್ಲಿ ಉತ್ತಮ ಮಳೆಯಾಗದ ಪರಿಣಾಮ, ಈಗ ಜಲಾಶಯದಲ್ಲಿ ಡೆಡ್‌ ಸ್ಟೋರೇಜ್‌ ಮಟ್ಟಕ್ಕಿಂತಲೂ ಕೆಳಮಟ್ಟದಲ್ಲಿ ನೀರಿದ್ದು, ಶಿಥಿಲಗೊಂಡ ಗೋಡೆಗಳನ್ನು ಅನಾಯಾಸ ವಾಗಿ ದುರಸ್ತಿ ಮಾಡಬಹುದಾಗಿತ್ತು.

ಇದನ್ನೂ ಓದಿ:ನಾಗಾಲೋಟ: ಸಾರ್ವಕಾಲಿಕ ದಾಖಲೆ – 60 ಸಾವಿರ ಸನಿಹಕ್ಕೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಜಲಾಶಯದಲ್ಲಿ ನೀರು ಸಂಗ್ರಹ: ಈ ಜಲಾಶಯಕ್ಕೆ ಶೀಘ್ರದಲ್ಲೇ ಹೇಮೆ ಮತ್ತು ಭದ್ರೆಯ ನೀರು ಹರಿಯುವುದರಲ್ಲದೆ ಹುಳಿಯಾರು, ಗಾಣಧಾಳು, ಹೊಯ್ಸಲಕಟ್ಟೆ, ಕೆಂಕೆರೆ ಗ್ರಾಪಂ ವ್ಯಾಪ್ತಿಗೆ ಕುಡಿಯುವ ನೀರು ಪೂರೈಸಲು ಜಲಾಶಯದಲ್ಲಿ ನೀರು ಸಂಗ್ರಹಿಸಿಟ್ಟುಕೊಳ್ಳಬೇಕಿದೆ. ಹೀಗಾಗಿ ಈ ಅವಕಾಶವನ್ನು ಬಿಟ್ಟರೆ, ಇನ್ನೆಂದೂ ದುರಸ್ತಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಸಾರ್ವಜನಿಕರು ದುರಸ್ತಿಗೆ ಒತ್ತಡ ಹಾಕಿದ್ದರು. ಈಗ ಸಣ್ಣ ನೀರಾವರಿ ಇಲಾಖೆಯಿಂದ ಜಲಾಶಯದ ದುರಸ್ತಿ ಕಾರ್ಯ ಆರಂಭವಾಗಿದ್ದು, ಯಂತ್ರೋಪಕರಣಗಳು ಜಲಾಶಯದ ಬಳಿ ತೆರಳಲು 3 ಕಿ.ಮೀ ದೂರದಿಂದ ಹೊಸದಾಗಿ ಮಣ್ಣು ಹೊಡೆದು ರಸ್ತೆ ಮಾಡಲಾಗುತ್ತಿದೆ. ಅಲ್ಲದೆ, ಶಿಥಿಲಗೊಂಡ ಗೋಡೆಗಳ ಬಳಿ ಯಂತ್ರಗಳು ನಿಲ್ಲಲು ಅಲ್ಲಿನ ನೀರು ಹಾಗೂ ಹೂಳು ತೆರವು ಮಾಡಿ, ಬಂಡ್‌ ಹಾಕಲಾಗುತ್ತಿದೆ. ಎರಡು- ಮೂರು ಜೆಸಿಬಿ, ಏಳೆಂಟು ಟಿಪ್ಪರ್‌ಗಳು, ಅನೇಕ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳಲಾಗಿದ್ದು, ಬಿರುಸಿನಿಂದ ಕಾಮಗಾರಿ ನಡೆಯುತ್ತಿದೆ.

10 ದಿನದಲ್ಲಿ ದುರಸ್ತಿ ಪೂರ್ಣ
ಬೋರನಕಣಿವೆ ಗೋಡೆಗಳ ದುರಸ್ತಿ ಕಾರ್ಯವನ್ನು ಸಣ್ಣ ನೀರಾವರಿ ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿದೆ. ನದಿ ನೀರು ಹರಿಯುವ ಮುನ್ನ ದುರಸ್ತಿ ಮಾಡಲೇ ಬೇಕಿರುವುದರಿಂದ ತುರ್ತು ಕಾಮಗಾರಿ ಎಂದು ಪರಿಗಣಿಸಿ, ಟೆಂಡರ್‌ ಕರೆಯದೆ ಕಾಮಗಾರಿ ಮಾಡಿಸಲಾಗುತ್ತಿದೆ. ಜಲಾಶಯದ ಕೆಳಗೆ ಮೂರು- ನಾಲ್ಕು ಅಡಿಯಿಂದಲೂ ವಾಟರ್‌  ಪ್ಲಾಸ್ಟ್ರಿಂಗ್‌ ಮಾಡಲಾಗುತ್ತಿದೆ. ಗೋಡೆಗಳ ಮೇಲೆ ಬೆಳೆದಿರುವ ಗಿಡಗಳನ್ನೂ ಸಹ ತೆರವು ಮಾಡಲಾಗುವುದು. 10 ದಿನಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆಯ ಜೆಇ ಪ್ರಭಾಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.