ಬಸ್ ಮತ್ತು ಓಮ್ನಿ ಡಿಕ್ಕಿ: ಬೆಂಕಿಗಾಹುತಿಯಾದ ವಾಹನಗಳು: ಮೂವರು ಸಜೀವ ದಹನ
Team Udayavani, Jan 4, 2020, 10:32 AM IST
ತುಮಕೂರು: ಬಸ್ ಮತ್ತು ಓಮ್ನಿ ವಾಹನದ ನಡುವೆ ಅಪಘಾತ ಸಂಭವಿಸಿ ಮೂವರು ಸಜೀವ ದಹನವಾಗಿರುವ ಘಟನೆ ಶನಿವಾರ ಬೆಳಗಿನ ಜಾವ ಎರಡು ಗಂಟೆಯ ಸಮಯದಲ್ಲಿ ಜಿಲ್ಲೆಯ ದೊಡ್ಡಗುಣಿ ಬಳಿ ಸಂಭವಿಸಿದೆ.
ಬೆಳಗಿನ ಜಾವ ಎರಡು ಗಂಟೆ ಸಮಯದಲ್ಲಿ ನರಸಮ್ಮ ಎಂಬುವರಿಗೆ ಆರೋಗ್ಯ ಸರಿಯಿಲ್ಲದ ಕಾರಣ ನಿಟ್ಟೂರು ಆರೋಗ್ಯ ಕೇಂದ್ರಕ್ಕೆ ವ್ಯಾನ್ ನಲ್ಲಿ ಕರೆದುಕೊಂಡು ಹೋಗುತ್ತಿರುವಾಗ ಗುಬ್ಬಿ ತಾಲೂಕು ನಿಟ್ಟೂರು ಹೋಬಳಿ ದೊಡ್ಡಗುಣಿ ರಾಷ್ಟ್ರೀಯ ಹೆದ್ದಾರಿ 206 ರ ದೊಡ್ಡಗುಣಿ ಕೆರೆ ಏರಿ ಮೇಲೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಓಮ್ನಿ ಮಧ್ಯೆ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ಗುಬ್ಬಿ ತಾಲೂಕು ನಿಟ್ಟೂರು ಹೋಬಳಿ ಎನ್ ಹೊಸಹಳ್ಳಿ ಗ್ರಾಮದ ವಸಂತ್ ಕುಮಾರ್ ( 23 ) ರಾಮಯ್ಯ (62 ) ನರಸಮ್ಮ (60 ) ಸಜೀವ ದಹನವಾಗಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.
ಅಪಘಾತದಲ್ಲಿ ರವಿಕುಮಾರ (23) ರಾಧಾಮಣಿ (30 ) ನರಸಿಂಹಮೂರ್ತಿ (40) ಗೌರಮ್ಮ (28 ) ತೀವ್ರ ಗಾಯಗೊಂಡಿದ್ಧು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಾಳು ಗೌರಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ.
ಅಪಘಾತದಲ್ಲಿ ಓಮ್ನಿಯೊಂದಿಗೆ ಬಸ್ ಕೂಡಾ ಹೊತ್ತಿ ಉರಿದಿದೆ. ಆದರೆ ಉರಿ ಹೆಚ್ಚಾಗುವ ಮುನ್ನವೇ ಪ್ರಯಾಣಿಕರನ್ನು ಬಸ್ ನಿಂದ ಇಳಿಸಿದ ಕಾರಣ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.
ಗುಬ್ಬಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!