ಆಟೋಗೆ ಬಸ್ ಡಿಕ್ಕಿ: ನಾಲ್ವರ ದುರ್ಮರಣ
Team Udayavani, Jul 5, 2019, 5:10 AM IST
ತುಮಕೂರು: ನಗರದ ಹೊರವಲಯದ ಮಲ್ಲಸಂದ್ರ ಬಳಿ ಗುರುವಾರ ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಹಾಗೂ ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ವೃದ್ಧ ದಂಪತಿ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತಪಟ್ಟವರನ್ನು ಗುಬ್ಬಿ ತಾಲೂಕಿನ ಪತ್ರೆಮತ್ತಿಘಟ್ಟ ಗ್ರಾಮದ ನಿವೃತ್ತ ಶಿಕ್ಷಕ ಎ.ಬಸವರಾಜಪ್ಪ (84), ಇವರ ಪತ್ನಿ ರೇಣುಕಾಂಬ (74), ಆಟೋ ಚಾಲಕ ಬಸವರಾಜು (37) ಹಾಗೂ ಸಂಜಯ್ (19) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಗುಬ್ಬಿ ಪಟ್ಟಣದಿಂದ ಪ್ರಯಾಣಿಕರನ್ನು ಹೊತ್ತು ಆಟೋರಿಕ್ಷಾ ತುಮಕೂರು ಕಡೆಗೆ ಬರುತ್ತಿತ್ತು. ತುಮಕೂರು ಕಡೆಯಿಂದ ಅತಿ ವೇಗವಾಗಿ ತಿಪಟೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್, ಮಲ್ಲಸಂದ್ರದ ಹಾಲಿನ ಡೇರಿ ಮುಂಭಾಗದಲ್ಲಿ ಡಿಕ್ಕಿ ಹೊಡೆಯಿತು. ಡಿಕ್ಕಿ ಹೊಡೆದ ರಭಸಕ್ಕೆ ಆಟೋರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ