ಬಾಲಕಿ ಕಾಲಿನ ಮೇಲೆ ಹರಿದ ಬಸ್
ಸ್ಥಳೀಯರಿಂದ ಪ್ರತಿಭಟನೆ | ಕಲ್ಲು ತೂರಾಟ
Team Udayavani, Jun 17, 2019, 4:21 PM IST
ತುಮಕೂರಿನ ಬೆಳಗುಂಬ ಬಳಿ ನಡೆದ ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ನಾಗರಿಕರು ಬಸ್ ಗಾಜು ಒಡೆದು ಪ್ರತಿಭಟಿಸಿದರು.
ತುಮಕೂರು: ಬೆಳಗುಂಬದಲ್ಲಿ ಖಾಸಗಿ ಬಸ್ ಚಾಲಕನ ಅಜಾಗರೂಕತೆ ಚಾಲನೆಯಿಂದ ಬಾಲಕಿ ಎರಡು ಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು, ಇದರಿಂದ ಆಕ್ರೋಶ ಗೊಂಡ ಸ್ಥಳೀಯರು ಬಸ್ನ ಗಾಜು ಪುಡಿ ಮಾಡಿದ್ದಾರೆ.
5 ವರ್ಷದ ಬಾಲಕಿ ನೇತ್ರಾವತಿ ರಸ್ತೆ ದಾಟುವಾಗ ಊರ್ಡಿಗೆರೆ ಕಡೆಯಿಂದ ತುಮಕೂರಿನ ಕಡೆಗೆ ವೇಗವಾಗಿ ಬಂದ ಶ್ರೀ ವಿನಾಯಕ ಹೆಸರಿನ ಬಸ್ ಆಕೆಯ ಎರಡೂ ಕಾಲಿನ ಮೇಲೆ ಬಸ್ ಹರಿದಿದೆ. ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಗುವಿನ ಕಾಲುಗಳಿಗೆ ತೀವ್ರ ಸ್ವರೂಪದ ಗಾಯ ಗಳಾಗಿದ್ದು, ಬಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.ಬಾಲಕಿಯ ತಂದೆ ಅರುಣ್ ಗಾರೆ ಕೆಲಸ ಮಾಡುತ್ತಿದ್ದು, ತಾಯಿ ಭಾಗ್ಯಮ್ಮ ಮನೆ ಕೆಲಸ ನಿರ್ವಹಿಸುತ್ತಾರೆ.
ಬಸ್ಸಿಗೆ ಕಲ್ಲು: ಬಾಲಕಿಯ ಎರಡು ಕಾಲುಗಳ ಮೇಲೆ ವಿನಾಯಕ ಬಸ್ ಹರಿದಿರುವುದರಿಂದ ಈ ದುರಂತಕ್ಕೆ ಬಸ್ ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಉದ್ರಿಕ್ತರ ಗುಂಪು ಬಸ್ಗೆ ಕಲ್ಲು ಹೊಡೆದಿದ್ದು, ಗಾಜುಗಳು ಪುಡಿಪುಡಿಯಾಗಿದೆ. ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಉದ್ರಿಕ್ತ ಗುಂಪನ್ನು ಚದುರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ