ವಿಡಿಯೋ ಕಾನ್ಫರೆನ್ಸ್ ಸಭೆ ರದ್ದುಗೊಳಿಸಿ
Team Udayavani, Sep 19, 2020, 6:56 PM IST
ತುಮಕೂರು: ಉಪವಿಭಾಗ ಮಟ್ಟದ ಪ.ಜಾತಿ, ಪರಿಶಿಷ್ಟವರ್ಗದ ದಲಿತ ಹಿತರಕ್ಷಣಾ ಸಮಿತಿ ಸಭೆಯನ್ನು ವಿಡಿ ಯೋ ಕಾನ್ಫರೆನ್ಸ್ ಮೂಲಕ ಕರೆದಿರುವುದನ್ನು ರದ್ದುಪಡಿಸಿ ಪೊಲೀಸ್ ಚಿಲುಮೆ ಅಥವಾ ಬಾಲ ಭವನದಲ್ಲಿ ಕರೆಯುವಂತೆ ನಿರ್ದೇಶನ ನೀಡಬೇಕು ಎಂದುಆಗ್ರಹಿಸಿ ಜಿಲ್ಲಾ ದಲಿತ ಸಂಘಟನೆಗಳ ಮುಖಂಡರ ಒಕ್ಕೂಟ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಒಕ್ಕೂಟದ ಮುಖಂಡರು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲು ನಿರ್ಧರಿಸಿರುವ ಸಭೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದರು. ತುಮಕೂರು ಉಪವಿಭಾಗ ಮಟ್ಟದ ಎಸ್ಸಿ, ಎಸ್ಟಿಹಿತರಕ್ಷಣಾ ಸಮಿತಿ ಸಭೆಯನ್ನು ಸೆ.21 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ 11 ಗಂಟೆಗೆ ವಿಡಿಯೋಕಾನ್ಫರೆನ್ಸ್ ಸಭಾಂಗಣದಲ್ಲಿ ಸಭೆಯನ್ನು ಕರೆಯಲಾಗಿದೆ. ಆದರೆ ಸಾಕಷ್ಟು ದಲಿತ ಮುಖಂಡರಲ್ಲಿ ಸ್ಕ್ರೀನ್ಟಚ್ಮೊಬೈಲ್ ಇರುವುದಿಲ್ಲ. ಕೀ ಪ್ಯಾಯ್ಡ ಮೊಬೈಲ್ಗಳನ್ನು ಬಳಸುತ್ತಿದ್ದಾರೆ. ಜತೆಗೆ ಸಾಕಷ್ಟು ಮುಖಂಡರಿಗೆ ಮೊಬೈಲ್ನಲ್ಲಿ ಮಾತನಾಡುವುದಕ್ಕೂ ಬರುವುದಿಲ್ಲ. ಎಸ್ಸಿ, ಎಸ್ಟಿ ಜನಾಂಗದ ತುರ್ತು ಸಮಸ್ಯೆಗಳು ಸಾಕಷ್ಟಿವೆ. ಆದ್ದರಿಂದಈಹಿಂದೆ ಯಾವ ರೀತಿ ಸಭೆ ಕರೆಯುತ್ತಿದ್ದರೋ ಅದೇ ರೀತಿ ಸಭೆ ನಡೆಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ರಂಗನಾಥ್, ಕೋವಿಡ್ ಇರುವುದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುವುದಾಗಿ ಉಪವಿಭಾಗಾಧಿಕಾರಿಗಳು ಹೇಳುತ್ತಾರೆ. ಆದರೆ ಮುಖಾಮುಖೀ ಸಭೆ ನಡೆಸಿದರೂ ನಮ್ಮ ಸಮಸ್ಯೆಗಳು ಬಗೆಹರಿಯುವುದಿಲ್ಲ. ಇನ್ನು ವಿಡಿಯೋ ಕಾನ್ಫೆರೆನ್ಸ್ಮೂಲಕ ನಡೆಸುವ ಸಭೆಯಲ್ಲಿ ಎಷ್ಟರ ಮಟ್ಟಿಗೆ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಪ್ರಶ್ನಿಸಿದರು.
ದಸಂಸಜಿಲ್ಲಾಧ್ಯಕ್ಷಪಿ.ಎನ್.ರಾಮಯ್ಯಮಾತನಾಡಿ, ತುಮಕೂರು ವಿಭಾಗ ಮಟ್ಟದ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆಯನ್ನು ಸೆ. 21 ಕರೆದಿದ್ದಾರೆ. ವಿಡಿಯೋಕಾನ್ಫರೆನ್ಸ್ ಮೂಲಕಕರೆದಿರುವ ಸಭೆಯಲ್ಲಿ ರದ್ದುಪಡಿಸಿ ಕೋವಿಡ್-19 ನಿಯಮಾವಳಿ ಪ್ರಕಾರವೇ ಅಂತರ ಕಾಯ್ದುಕೊಂಡು ಸಮುದಾಯ ಭವನ ಅಥವಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಸಭೆ ನಡೆಸಬೇಕು. ಈ ಸಂಬಂಧ ಉಪವಿಭಾಗಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಒಕ್ಕೂಟದ ಮುಖಂಡರಾದ ಪೂಜ ಹನುಮಯ್ಯ, ರಾಜೇಶ್, ಜೆಸಿಬಿ ವೆಂಕಟೇಶ್, ಗಂಗಯ್ಯ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ