ಸಮ್ಮೇಳನ ರದ್ದುಪಡಿಸಿ: ನೆರೆ ಸಂತ್ರಸ್ತರಿಗೆ ಹಣ ನೀಡಿ


Team Udayavani, Sep 1, 2018, 5:39 PM IST

tmk-1.jpg

ತುಮಕೂರು: ಮುಂಬರುವ ಕನ್ನಡ ಸಾಹಿತ್ಯ ಸಮ್ಮೇಳನ ರದ್ದುಪಡಿಸಿ ನೆರೆ ಸಂತ್ರಸ್ತರ ನಿಧಿಗೆ ಹಣ ವರ್ಗಾಯಿಸುವಂತೆ ತಾ. ಕಸಾಪ ಮಾಜಿ ಅಧ್ಯಕ್ಷ ಆರ್‌.ವಿ.ಪುಟ್ಟಕಾಮಣ್ಣ ಒತ್ತಾಯಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೀಸಿ ರಾಕೇಶ್‌ ಕುಮಾರ್‌ಗೆ ಮನವಿ ಸಲ್ಲಿಸಿ ಮಾತನಾಡಿ, ರಾಜ್ಯವು ಬರಗಾಲ ಮತ್ತು ಜಲಪ್ರಳಯದಂತಹ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಜನರು ಸಂಕಷ್ಟದಲ್ಲಿ ಸಿಲುಕಿ ರುವುದರಿಂದ 2018-19 ಸಾಲಿಗೆ ಉದ್ದೇಶಿಸಿರುವ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಕಸಾಪದ ಎಲ್ಲಾ ಸಮ್ಮೇಳವನ್ನು ರದ್ದು ಪಡಿಸಿ ನೆರೆ ಸಂತ್ರಸ್ತರ ನಿಧಿಗೆ ಹಣವನ್ನು ನೀಡಬೇಕು ಎಂದರು. 

ನೆರವಾಗಬೇಕು: ಕೊಡಗು, ಕರಾವಳಿ ಪ್ರದೇಶಗಳಲ್ಲಿ ಜನರು ವಾಸದ ಮನೆ ಜತೆಗೆ ಜೀವನೋಪಾಯಕ್ಕೆ ಇದ್ದ ತೋಟ, ತುಡಿಕೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅನೇಕ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಅವರಿಗೆ ನೆರವಾಗುವುದು ಕನ್ನಡ ತಾಯಿಗೆ ಸೇವೆ ಸಲ್ಲಿಸಿದಂತೆ, ಈ ಹೊತ್ತಿನಲ್ಲಿ ಕಸಾಪ ಸಮ್ಮೇಳನಗಳನ್ನು ನಡೆಸುವುದು ಸರ್ವತಾ ಸಾಧುವಲ್ಲ, ಅವರಿಗೆ ನೆರವಾಗುವುದು ಸಮ್ಮೇಳನಕ್ಕಿಂತ ಮಿಗಿಲಾದುದ್ದು ಎಂದು ತಿಳಿಸಿದರು.

ಶತಮಾನದಿಂದ ಕಸಾಪ ತನ್ನ ಅಸ್ಮಿತೆಯನ್ನು ಕಾಪಾಡಿಕೊಂಡು ಬಂದಿದೆ. ಮಹಾರಾಜರು ಒಳ ಗೊಂಡಂತೆ ಅನೇಕ ಚಿಂತಕರು, ವಿದ್ವಾಂಸರು, ಸಾಹಿತಿಗಳು, ಲೇಖಕರು ಇದೂವರೆಗೂ ಕಸಾಪ ಅಧ್ಯಕ್ಷರಾಗಿ ಕಸಾಪ ನಿಬಂಧನೆಗಳಿಗೆ ಅನುಗುಣವಾಗಿ ಕನ್ನಡ ಸಾಹಿತ್ಯ ಸೇವೆ ಮಾಡುತ್ತಾ ಬಂದಿದೆ.
 
ಗೌರವಯುತ ಜವಾಬ್ದಾರಿಯನ್ನು ಅಧಿಕಾರವೆಂದು ತಿಳಿದು 3 ವರ್ಷಕ್ಕೆ ಇದ್ದ ಅವಧಿಯನ್ನು 5 ವರ್ಷಕ್ಕೆ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಕಾರಿ ಸಮಿತಿಯನ್ನೇ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು.
 
ರಾಜ್ಯ ಸಹಕಾರಿ ಸಂಘಗಳ ನೋಂದಣಿ ಸಂಸ್ಥೆ ಪರಿಷತ್ತಿನ ಅಧ್ಯಕ್ಷರ ಅವಧಿ ಹೆಚ್ಚಿಸಬೇಕೆಂಬ ಪ್ರಸ್ತಾವನೆಯನ್ನು ಏಕಾಏಕಿ ತಿರಸ್ಕರಿಸಿ ಚುನಾವಣೆ ನಡೆಸುವಂತೆ ಆದೇಶ ಹೊರಡಿಸಿದೆ. ಆದೇಶಕ್ಕೆ ಬೆಲೆಕೊಡದೆ ಪರಿಷತ್ತಿನ ರಾಜ್ಯಾಧ್ಯಕ್ಷರು ಹೈಕೋರ್ಟ್ಗೆ ಮೇಲ್ಮನವಿಸಲ್ಲಿಸಲು ಚಿಂತನೆ ನಡೆಸಿರುವುದು ನಾಚಿಕೆಗೇಡಿನ ವಿಷಯವಾಗಿದೆ. ಸ್ವಾರ್ಥಕ್ಕಾಗಿ ಪರಿಷತ್ತನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಅಧ್ಯಕ್ಷರ ಈ ಧೋರಣೆ ಖಂಡನೀಯ ಎಂದು ಹೇಳಿದರು.

ಮೂರು ಲಕ್ಷದ ಹನ್ನೆರಡು ಸಾವಿರ ಕಸಾಪ ಸದಸ್ಯರನ್ನು ಮತ್ತು ಆರು ಕೋಟಿ ಕನ್ನಡಿಗರನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ಮಾಡಿರುವುದು ಸರಿಯಲ್ಲ. ಇಷ್ಟಕ್ಕೂ ಡಾ.ಮನುಬಳಿಗಾರ್‌ ಅವರನ್ನು ಕಸಾಪ ಸದಸ್ಯರು ಆಯ್ಕೆ ಮಾಡಿರುವುದು 3 ವರ್ಷದ ಅವಧಿಗೆ ಮಾತ್ರ. ಅಧ್ಯಕ್ಷರ ಅವಧಿ ಮಾರ್ಚ್‌ 2019ಕ್ಕೆ ಕೊನೆಗೊಳ್ಳುವುದರಿಂದ ಪರಿಷತ್ತಿನ ನಿಯಮಾನುಸಾರ 3 ತಿಂಗಳು ಮುಂಚಿತವಾಗಿ ಡಿಸೆಂಬರ್‌ 2018ಕ್ಕೆ ಆಡಳಿತಾಧಿಕಾರಿ ನೇಮಿಸಿ ಕಸಾಪ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿ ಮಾರ್ಚ್‌ 2019ಕ್ಕೆ ಚುನಾವಣೆ ನಡೆಸಿ ರಾಜ್ಯ ಮತ್ತು ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಬೇಕೆಂದು ಆಗ್ರಹಿಸಿದರು. 

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.