ಕಾರು ಖರೀದಿಗೆ ಬಂದಾತನ ಬಟ್ಟೆ ನೋಡಿ ಅವಮಾನ; ಒಂದೇ ಗಂಟೆಯಲ್ಲಿ 10 ಲಕ್ಷ ತಂದ ಗ್ರಾಹಕ


Team Udayavani, Jan 23, 2022, 12:40 PM IST

ಕಾರು ಖರೀದಿಗೆ ಬಂದಾತನ ಬಟ್ಟೆ ನೋಡಿ ಅವಮಾನ; ಒಂದೇ ಗಂಟೆಯಲ್ಲಿ 10 ಲಕ್ಷ ತಂದ ಗ್ರಾಹಕ

ತುಮಕೂರು: ಕಾರು ಖರೀದಿ ಮಾಡಲೆಂದು ಕಾರು ನೋಡಲು ಬಂದ ಗ್ರಾಹಕನಿಗೆ ಕಾರು ಶೋ ರೂಮ್‌ ಸಿಬ್ಬಂದಿ ನಿನ್ನ ಕೈಯಲ್ಲಿ ಹತ್ತು ಲಕ್ಷ ಕೊಟ್ಟುಕಾರು ಖರೀದಿ ಮಾಡಲು ಸಾಧ್ಯನಾ ಎಂದು ಅವಮಾನಿಸಿದ್ದು, ಇದರಿಂದ ಬೇಸತ್ತ ಗ್ರಾಹಕ ಹಣ ತಂದು ಕಾರು ನೀಡುವಂತೆ ಪಟ್ಟು ಹಿಡಿದಿದ್ದ ಘಟನೆ ಶನಿವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ಚರ್ಚೆಗೆ ಗ್ರಾಸವಾಗಿದೆ.

ತಾಲೂಕಿನ ಹೆಬ್ಬೂರು ಹೋಬಳಿಯ ರಾಮನ ಪಾಳ್ಯದ ಕೆಂಪೇಗೌಡ ಎನ್ನುವ ಯುವಕನೊಬ್ಬ ನಗರದ ಶಾಸಗಿ ಕಾರ್‌ ಶೋರೂಮ್‌ಗೆ ಕಾರು ತೆಗೆದುಕೊಳ್ಳಲು ಬಂದಿದ್ದು, ಯುವಕನ ವೇಷಭೂಷನ ನೋಡಿ ಶೋರೂಂನಲ್ಲಿ ಕೆಲಸ ಮಾಡುವ ಸೇಲ್ಸ್ ಏಜೆಂಟ್‌ ಕೆಂಪೇಗೌಡನಿಗೆ ಹತ್ತು ರೂಪಾಯಿ ದುಡ್ಡು ಕೊಡುವ ಯೋಗ್ಯತೆ ಇಲ್ಲ ಕಾರು ತೆಗೆದುಕೊಳ್ಳಲು ಬಂದಿದೆಯೆಂದು ಅವಮಾನಿದ್ದಾನೆ.

ಅದನ್ನೇ ಚಾಲೆಂಜ್‌ ಆಗಿ ಸ್ವೀಕರಿಸಿದ ಕೆಂಪೇಗೌಡ ಹಾಗೂ ಆತನ ಸ್ನೇಹಿತರು ಒಂದು ಗಂಟೆಯಲ್ಲಿ ದುಡ್ಡು ತರುವೆ ಕಾರನ್ನು ನೀಡುವೆಯಾ ಎಂದು ಕಡ್ಡಿ ಮುರಿದ ಹಾಗೆ ಕೇಳಿದ್ದು, ಇದಕ್ಕೆ ಒಪ್ಪಿದ ಶೋರೂಮ್‌ ಕೆಲಸಗಾರ ಮೊದಲು ದುಡ್ಡು ತನ್ನಿ ಕಾರು ಕೊಡುವೆ ಎಂದಿದ್ದಾರೆ.

ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ತಂದು ಕಾರು ನೀಡುವಂತೆ ಪಟ್ಟು ಹಿಡಿದಿದ್ದು, ಶೋ ರೂಮ್‌ ಕೆಲಸಗಾರರು ಇಲ್ಲಸಲ್ಲದ ಸಬೂಬು ಹೇಳಿ ಮುಂದಿನ ಎರಡು ದಿನದಲ್ಲಿ ಕಾರು ನೀಡುತ್ತೇವೆ ಎಂದಿದ್ದಾರೆ. ನಮ್ಮನ್ನು ಅವಮಾನಿಸುವ ಮುಂಚೆ ಇದರ ಅರಿವು ತಮಗೆ ಇರಬೇಕಾಗಿತ್ತು. ನಾನು ಒಂದು ಗಂಟೆಯಲ್ಲಿ 10 ಲಕ್ಷ ರೂ. ತಂದಿದ್ದೇನೆ. ನನಗೆ ಈಗ ಕಾರು ಕೊಡಿ ಎಂದು ಗ್ರಾಹಕ ಕೆಂಪೇಗೌಡ ಹಾಗೂ ಸ್ನೇಹಿತರು ಶೋರೂಮ್‌ನಲ್ಲಿ ವಾಗ್ವಾದ ನಡೆಸಿದ್ದಾರೆ.

ಒಮ್ಮತದ ನಿರ್ಧಾರಕ್ಕೆ ಬರದ ಕಾರಣ ಕೊನೆಗೆ ಗ್ರಾಹಕ ಹಾಗೂ ಶೋರೂಮ್‌ನವರು ತುಮಕೂರಿನ ತಿಲಕ್‌ ಪಾರ್ಕ್‌ ಪೊಲೀಸ್‌ ಠಾಣೆ ಮೆಟ್ಟಿಲು ಏರುವಂತಾಯಿತು.

ಕೊನೆಗೆ ಸಿಬ್ಬಂದಿಯಿಂದ ಗ್ರಾಹಕನಿಗೆ ತಪ್ಪಾಯಿತು ಎಂದು ಮುಚ್ಚಳಿಕೆ ಬರೆಸುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ವ್ಯಾಪಕ ಚರ್ಚೆಗೆ ಗ್ರಾಸವಾಯಿತು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.