ಬೋರ್ಡ್ ಮುಖಾಂತರವೇ ಪೊಲೀಸ್ ಅಧಿಕಾರಿಗಳ ವರ್ಗ
Team Udayavani, Nov 1, 2022, 9:15 PM IST
ತುಮಕೂರು: ಗೃಹ ಇಲಾಖೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆಂದೇ ಪ್ರತ್ಯೇಕವಾದ ಬೋರ್ಡ್ ಇದೆ. ಈ ಬೋರ್ಡ್ ಮೂಲಕವೇ ವರ್ಗಾವಣೆ ನಡೆಯಲಿದೆ. ನನ್ನ ಸಹಿಯಿಂದ ಯಾವ ಅಧಿಕಾರಿಗಳ ವರ್ಗಾವಣೆಯೂ ಆಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಪೊಲೀಸ್ ಅಧಿಕಾರಿಗಳು ಸಹ ವರ್ಗಾವಣೆಗೆ ಹಣ ಕೊಡಬಾರದು ಎಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಹಾಗಾಗಿ ಬೋರ್ಡ್ ಮುಖಾಂತರವೇ ವರ್ಗಾವಣೆ ನಡೆಯಲಿವೆ ಎಂದರು.
ಇನ್ಸ್ಪೆಕ್ಟರ್ ನಂದೀಶ್ ಸಾವಿನ ಕುರಿತು ತನಿಖೆ ನಡೆಯುತ್ತಿದೆ. ಆದರೆ, ಇವರು ವರ್ಗಾವಣೆಗಾಗಿ ಯಾರಿಗೆ ಹಣ ಕೊಟ್ಟಿದ್ದಾರೆ, ಯಾರು ಪಡೆದಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಈ ಬಗ್ಗೆ ಸಚಿವ ಎಂಟಿಬಿ ನಾಗರಾಜು ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ಸಹ ನನಗೆ ಗೊತ್ತಿಲ್ಲ ಎಂದರು.
ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳದ ಬಗ್ಗೆ ಚಿಂತನೆ ನಡೆದಿದೆ. ಜತೆಗೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸಹ ಇನ್ನು ಒಂದು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ