ಸಿಬಿಎಸ್ ಇ 10ನೇ ತರಗತಿ ರಿಸಲ್ಟ್; ತುಮಕೂರಿನ ಯಶಸ್ ಡಿ 500/498 ಅಂಕ
Team Udayavani, May 6, 2019, 4:45 PM IST
ಬೆಂಗಳೂರು: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್ ಇ)ಯ 10ನೇ ತರಗತಿ ಫಲಿತಾಂಶ ಸೋಮವಾರ ಪ್ರಕಟಿಸಿದೆ. ಪರೀಕ್ಷೆಯಲ್ಲಿ ತುಮಕೂರಿನ ವಿದ್ಯಾ ವಾರಿದಿ ಅಂತಾರಾಷ್ಟ್ರೀಯ ಶಾಲೆಯ ಯಶಸ್ ಡಿ ಟಾಪರ್ ಆಗಿದ್ದಾಳೆ. ಸಿಬಿಎಸ್ ಇ 10ನೇ ತರಗತಿ ಫಲಿತಾಂಶದಲ್ಲಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ.
ಸಿಬಿಎಸ್ ಇ 10ನೇ ತರಗತಿಯ ಪರೀಕ್ಷೆಯಲ್ಲಿ ಯಶಸ್ 500 ಅಂಕಗಳಲ್ಲಿ 498 ಅಂಕ ಪಡೆದು ರಾಜ್ಯಕ್ಕೆ ಮಾತ್ರವಲ್ಲ, ಚೆನ್ನೈ ವಲಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದಾಳೆ. ಅಲ್ಲದೇ ಧಾರವಾಡದ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ನ ಗಿರಿಜಾ ಎಂ ಹೆಗಡೆ 500 ಅಂಕಕ್ಕೆ 497 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾಳೆ.
ಬೆಂಗಳೂರಿನ ಐಶ್ವರ್ಯ ಹರಿಹರನ್ ಅಯ್ಯರ್ ಹಾಗೂ ನಾಲಾದಾಳಾ ದಿಶಾ ಚೌದರಿ 497 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಟಾಪರ್ಸ್ ಆಗಿದ್ದಾರೆ. ಸಿಬಿಎಸ್ ಇ ಮೂಲಗಳ ಪ್ರಕಾರ, 2018ರ ಫಲಿತಾಂಶಕ್ಕಿಂತ ಈ ಬಾರಿ ಶೇ.4.40ರಷ್ಟು ಏರಿಕೆ ಕಂಡಿದೆ.
2018ರಲ್ಲಿ ಶೇ.86.70ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. 2019ರಲ್ಲಿ ಶೇ.91.10ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫೆಬ್ರುವರಿ 15ರಿಂದ ಏಪ್ರಿಲ್ 4ರವರೆಗೆ ದೇಶಾದ್ಯಂತ ನಡೆದ ಸಿಬಿಎಸ್ ಇ ಪರೀಕ್ಷೆಯಲ್ಲಿ ಬರೋಬ್ಬರಿ 17.74 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. 17.61 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ