ಜಲ ಸಂರಕ್ಷಣಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ತಂಡ

ಮಧುಗಿರಿ ತಾಲೂಕು ಚಿನಕವಜ್ರ ಗ್ರಾಮಕ್ಕೆ ಭೇಟಿ • ಮಾಹಿತಿ ನೀಡಿದ ಪಿಡಿಒ ಉತ್ತಮ್‌

Team Udayavani, Aug 9, 2019, 4:29 PM IST

tk-tdy-1

ತುಮಕೂರು ಜಿಲ್ಲೆಯಲ್ಲಿ ಕೈಗೊಂಡಿರುವ ನೀರು ಸಂರಕ್ಷಣಾ ಕಾಮಗಾರಿ ಕುರಿತು ಮಾಹಿತಿ ಪಡೆದ ಜಲಶಕ್ತಿ ಅಭಿಯಾನ ಕೇಂದ್ರ ತಂಡದ ಜಿಲ್ಲಾ ನೋಡಲ್ ಅಧಿಕಾರಿ ಆರ್‌.ಕೆ. ಚಂಡೋಲಿಯಾ ಮತ್ತು ತಂಡ.

ತುಮಕೂರು: ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ನೀರು ಉಕ್ಕುವ ತಲಪುರಗಿ ನೀರಿನ ಬಾವಿ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಜಲಶಕ್ತಿ ಅಭಿಯಾನ ಕೇಂದ್ರ ತಂಡದ ಜಿಲ್ಲಾ ನೋಡಲ್ ಅಧಿಕಾರಿ ಆರ್‌.ಕೆ. ಚಂಡೋಲಿಯಾ ಸಲಹೆ ನೀಡಿದರು.

ಮಧುಗಿರಿ ತಾಲೂಕು ಚಿನಕವಜ್ರ ಗ್ರಾಮಕ್ಕೆ ಭೇಟಿ ನೀಡಿ ಜಲ ಸಂರಕ್ಷಣಾ ಕಾಮಗಾರಿ ಪರಿಶೀಲಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉತ್ತಮ್‌ರಿಂದ ಮಾಹಿತಿ ಪಡೆದು ಮಾತನಾಡಿದರು. ಬೇಸಿಗೆ ಕಾಲದಲ್ಲಿಯೂ ನೀರು ಇಂಗದಿರುವ ನೀರು ಸಂರಕ್ಷಣಾ ಕಾಮಗಾರಿ ಕೈಗೊಂಡಲ್ಲಿ ನೀರಿನ ಬವಣೆ ತಲೆದೋರದು ಎಂದು ತಿಳಿಸಿದರು.

ಕೃಷಿ ಚಟುವಟಿಕೆಗೆ ನೀರು ಬಳಕೆ: ಮಳೆಗಾಲದಲ್ಲಿ ತಲಪುರಗಿಯ ಸುತ್ತಲೂ ಇರುವ ಬೆಟ್ಟಗಳ ಬುಡದಲ್ಲಿ ಮಳೆ ನೀರು ಇಂಗಿ ಭೂಮಿ ಮೂಲಕ ಬಸಿದು ಈ ತಲಪುರಗಿಯಲ್ಲಿ ಉಕ್ಕುತ್ತದೆ. ಹತ್ತಾರು ಅಡಿಗಳ ಆಳದಲ್ಲಿಯೇ ನೀರು ದೊರೆಯುವ ಈ ತಲಪುರಗಿ ನೀರನ್ನು ಸದ್ಯ ಸುತ್ತಮುತ್ತಲಿನ ರೈತರು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಮಳೆಗಾಲದಲ್ಲಿ ಈ ತಲಪುರಗಿ ತುಂಬಿ ಚೋಳೆನಹಳ್ಳಿ ಕೆರೆ-ಮಧುಗಿರಿ ಕೆರೆ-ಬಿಜವರ ಕೆರೆಗೆ ನೀರು ಹರಿದು ಹೋಗುತ್ತದೆ ಎಂದು ಉತ್ತಮ್‌ ಹೇಳಿದರು.

ಮುಂದಿನ ದಿನಗಳಲ್ಲಿ ತಲಪುರಗಿ ನೀರನ್ನು ಓವರ್‌ ಹೆಡ್‌ಟ್ಯಾಂಕ್‌ಗೆ ತುಂಬಿಸಿ ಚಿನಕವಜ್ರ ಗ್ರಾಮಕ್ಕೆ ಸರಬರಾಜು ಮಾಡುವ ಉದ್ದೇಶವಿದ್ದು, ನೀರಿನ ಸರಬರಾಜಿಗೆ ಅಗತ್ಯವಿರುವ ಕೊಳವೆ ಮಾರ್ಗ ಈಗಾಗಲೇ ಅಳವಡಿಸಲಾಗಿದೆ. ತಲಪುರಗಿ ಕಾಮಗಾರಿ ನರೇಗಾ ಯೋಜನೆಯಡಿ 8.85 ಲಕ್ಷ ರೂ. ವೆಚ್ಚದಲ್ಲಿ ಕೈಗೊಂಡು 2016-17ರಲ್ಲಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

ನಂತರ ದಬ್ಬೆಘಟ್ಟ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕಾ ಯೋಜನೆಯಡಿ 75 ಸಾವಿರ ರೂ. ಸಹಾಯಧನ ಒಳಗೊಂಡಂತೆ ಒಟ್ಟು 1.50 ಲಕ್ಷ ರೂ. ವೆಚ್ಚದಲ್ಲಿ ಕೃಷಿಕ ಶಿವಣ್ಣ ಅವರ ಜಮೀನಿನಲ್ಲಿ ನಿರ್ಮಿಸಲಾದವೈಯಕ್ತಿಕ ಕೃಷಿ ಹೊಂಡ ವೀಕ್ಷಿಸಿದ ತಂಡ ಮಧುಗಿರಿ ಹಿರಿಯ ಸಹಾಯಕ ಕೃಷಿ ನಿರ್ದೇಶಕ ವಿಶ್ವನಾಥಗೌಡರಿಂದ ಮಾಹಿತಿ ಪಡೆಯಿತು.

ನಾಲಾ ಬದು ಕಾಮಗಾರಿ ವೀಕ್ಷಣೆ: 13ಲಕ್ಷ ಲೀ. ಸಂಗ್ರಹ ಸಾಮರ್ಥ್ಯವಿರುವ ಈ ಕೃಷಿ ಹೊಂಡದ ನೀರನ್ನು ತೋಟಗಾರಿಕೆ ಬೆಳೆಗೆ ಬಳಸಲಾಗುತ್ತಿದೆ ಎಂದು ವಿಶ್ವನಾಥಗೌಡ ತಿಳಿಸಿದರು. ನರೇಗಾ ಯೋಜನೆಯಡಿ 3 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 30 ಮೀ. ಉದ್ದದ ನಾಲಾ ಬದು ಕಾಮಗಾರಿ ವೀಕ್ಷಿಸಿತು. ಕೋಟೆಕಲ್ಲಪ್ಪನ ಬೆಟ್ಟದಲ್ಲಿ ಅರಣ್ಯ ಇಲಾಖೆಯಿಂದ 2017-18 ಹಾಗೂ 2018-19ನೇ ಸಾಲಿನಲ್ಲಿ 1.73 ಲಕ್ಷ ರೂ. ವೆಚ್ಚದಲ್ಲಿ ರಸ್ತೆಬದಿ ನಿರ್ಮಿಸಲಾಗಿರುವ ನೆಡುತೋಪು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ಮಧುಗಿರಿ ವಲಯ ಅರಣ್ಯಾಧಿಕಾರಿ ತಾರಕೇಶ್ವರಿ ಮಾತನಾಡಿ, 10 ಮೀ. ಅಂತರದಲ್ಲಿ ಒಂದು ಸಸಿಯಂತೆ 3 ಕಿ.ಮೀ. ದೂರ ಸುಮಾರು 1500 ಬೇವು, ಆಲ, ಹತ್ತಿ, ಹಿಪ್ಪೆ, ಅರಳಿ, ನೇರಳೆ, ಜಂಬುನೇರಳೆ ಸಸಿ ನೆಡಲಾಗಿದೆ ಎಂದು ಹೇಳಿದರು. ಬಳಿಕ ತಂಡವು ಮಧುಗಿರಿ ಪುರಸಭೆಯಿಂದ 14ನೇ ಹಣಕಾಸು ಯೋಜನೆಯಡಿ ಸಿದ್ದಾಪುರ ಪ್ರದೇಶದಲ್ಲಿ 90ಸಾವಿರ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಕೊಳವೆಬಾವಿ ಮರುಪೂರಣ ಕಾಮಗಾರಿ ವೀಕ್ಷಿಸಿ ಗುತ್ತಿಗೆದಾರರಿಂದ ಮಾಹಿತಿ ಪಡೆಯಿತು.

ತಂಡದ ಬಲರಾಮ್‌ ಪ್ರಸಾದ ಭಿಮಲ್, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಕೃಷಿ ಉಪನಿರ್ದೇಶಕ ಉಮೇಶ್‌, ಕೃಷಿ ಸಹಾಯಕ ನಿರ್ದೇಶಕ ಡಿ. ಹನುಮಂತರಾಯಪ್ಪ, ಜಿಲ್ಲಾ ಪಂಚಾಯಿತಿ ಸಾಮಾಜಿಕ ಪರಿಶೋಧಕ ಚಂದ್ರಶೇಖರ್‌, ಮತ್ತಿತರರಿದ್ದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.