ಮಕ್ಕಳಿಗೆ ಕಾನೂನು ಅರಿವು ಅಗತ್ಯ

ಶಾಲಾ ಮಟ್ಟದಲ್ಲೇ ಶಿಸ್ತು ಕಲಿತರೆ ಭವಿಷ್ಯಕ್ಕೆ ಉತ್ತಮ • ಡೀಸಿ ಡಾ.ರಾಕೇಶ್‌ಕುಮಾರ್‌ ಅಭಿಮತ

Team Udayavani, Jul 24, 2019, 3:40 PM IST

tk-tdy-2

ತುಮಕೂರು: ಮಕ್ಕಳಿಗೆ ಕಾನೂನು ಅರಿವು ಅಗತ್ಯ. ಇದರಿಂದ ಉತ್ತಮ ಸಮಾಜಕ್ಕೆ ನಿರ್ಮಾಣ ಸಾಧ್ಯ ಎಂದು ಡೀಸಿ ಡಾ. ಕೆ. ರಾಕೇಶ್‌ಕುಮಾರ್‌ ತಿಳಿಸಿದರು.

ನಗರದ ಎಂಪ್ರಸ್‌ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಕೆ.ಎಸ್‌.ಆರ್‌.ಪಿ. 12ನೇ ಪಡೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸ್ಟೂಡೆಂಟ್ ಪೊಲೀಸ್‌ ಕೆಡೆಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಕಾನೂನು ಪಾಲನೆ, ಶಿಸ್ತು, ನಾಗರಿಕ ಜವಾಬ್ದಾರಿ ಹಾಗೂ ನಾಯಕತ್ವದ ಗುಣ ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗಾಗಿ ಪೊಲೀಸ್‌ ಕೆಡೆಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಇಂದಿನ ಯುವ ಪೀಳಿಗೆಯಲ್ಲಿ ಶಿಸ್ತು, ಸಹನೆ, ರಾಷ್ಟ್ರ ಗೌರವ ಕಡಿಮೆಯಾಗುತ್ತಿದೆ. ಪ್ರಜ್ಞಾವಂತ ನಾಗರಿಕ ಸಮಾಜ ರೂಪಿಸುವುದಕ್ಕೆ ಪೊಲೀಸ್‌ ಕೆಡೆಟ್ ಕಾರ್ಯಕ್ರಮ ಪೂರಕವಾಗಿದ್ದು, ಶಾಲಾ ಮಟ್ಟದಲ್ಲೇ ಶಿಸ್ತು ಕಲಿಯಲು ಈ ಕಾರ್ಯ ಕ್ರಮ ಅನುವು ಮಾಡಿಕೊಡುತ್ತದೆ. ಪ್ರಜ್ಞಾವಂತ ನಾಗರಿಕರಿರುವ ದೇಶ ಸದಾ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುತ್ತದೆ ಎಂದರು.

ಸಾಧನೆಗೆ ಪ್ರೇರಣೆ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೋನಂ ವಂಶಿಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿ 2 ಶಾಲೆಗಳನ್ನು ಸ್ಟೂಡೆಂಟ್ ಪೊಲೀಸ್‌ ಕೆಡೆಟ್ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿತ್ತು. ಈ ಬಾರಿ 10 ಶಾಲೆಗಳಲ್ಲಿ ಕಾರ್ಯಕ್ರಮವನ್ನು ವಿಸ್ತರಿಸ ಲಾಗಿದೆ. ಕಾರ್ಯಕ್ರಮದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ತಂಡದ ಕೆಲಸ, ನವೀನ ಚಿಂತನೆ, ಪರಿಹಾರ ಸಾಮರ್ಥ್ಯ, ಕೌಶಲ್ಯ ವೃದ್ಧಿಯಾಗುವುದಲ್ಲದೆ ಯಾವುದೇ ಮಹತ್ತರ ಸಾಧನೆಯನ್ನು ಸಾಧಿಸಲು ಪ್ರೇರಣೆ ದೊರೆಯಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಾತ್ಯಾತೀತ ದೃಷ್ಟಿಕೋನ ಅಭಿವೃದ್ಧಿಪಡಿಸಲು ಯುವಕರನ್ನು ಪ್ರೇರೇಪಿಸುವುದು, ಸಂವಿಧಾನದ ಮೂಲಭೂತ ಕರ್ತವ್ಯ ಪಾಲಿಸುವಂತೆ ಪ್ರೋತ್ಸಾಹಿಸುವುದಲ್ಲದೇ, ವಿದ್ಯಾರ್ಥಿ ಗಳನ್ನು ಭಾವನ್ಮಾತಕ, ಮಾನಸಿಕ, ದೈಹಿಕವಾಗಿ ಸದೃಢವಾಗುವಂತೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಜವಾಬ್ದಾರಿ ಮೂಡಿಸುವ ಗುರಿ: ಕೆಎಸ್‌ಪಿಎಸ್‌ ಕಮಾಂಡೆಂಟ್ ಸುಂದರ್‌ರಾಜು ಮಾತನಾಡಿ, ಸ್ಟೂಡೆಂಟ್ ಪೊಲೀಸ್‌ ಕೆಡೆಟ್ ಕಾರ್ಯಕ್ರಮವು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ವಿದ್ಯಾರ್ಥಿ ಗಳಲ್ಲಿ ಜವಾಬ್ದಾರಿ ಮೂಡಿಸಿ, ಶಿಸ್ತು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣದ ಗುರಿ ಹೊಂದುವುದಕ್ಕೆ ಈ ಕಾರ್ಯಕ್ರಮ ಅನುಕೂಲ ವಾಗುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮವನ್ನು ಪ್ರಥಮ ಬಾರಿಗೆ ಕೇರಳ ರಾಜ್ಯದಲ್ಲಿ ಏರ್ಪಡಿಸಲಾಗಿತ್ತು. ನಂತರ ಉಳಿದ ರಾಜ್ಯಗಳಲ್ಲಿಯೂ ಆರಂಭಿಸಿ ವಿದ್ಯಾರ್ಥಿಗಳು ನಿಟ್ನೇತಿಯಿಂದ ಸಮಾಜದಲ್ಲಿ ಜೀವನ ನಡೆಸುವ ಮನೋಸ್ಥೈರ್ಯ ಕಲಿಸಿ ಕೊಡುತ್ತದೆ ಎಂದು ತಿಳಿಸಿದರು. ಡಿಡಿಪಿಐಗಳಾದ ಎಂ.ಆರ್‌.ಕಾಮಾಕ್ಷಿ ಹಾಗೂ ಕೆ.ರವಿಶಂಕರ್‌ ರೆಡ್ಡಿ, ಡಿವೈಎಸ್‌ಪಿಗಳಾದ ತಿಪ್ಪೇಸ್ವಾಮಿ, ಪಟೇಲ್ ಹಾಗೂ ಯುವ ಕುಮಾರ್‌, ಎಂಪ್ರಸ್‌ ಕಾಲೇಜಿನ ಪ್ರಾಂಶುಪಾಲ ಸಿದ್ದಲಿಂಗಪ್ಪ, ಪದ್ಮಾವತಿ, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.