ಜಮೀನಿನಲ್ಲಿ ಪೊದೆ, ನೀಲಗಿರಿ ಬೆಳೆಸಿದ್ದರೆ ತೆರವುಗೊಳಿಸಿ


Team Udayavani, Mar 5, 2020, 3:00 AM IST

amininali

ಕುಣಿಗಲ್‌: ಚಿರತೆ ಹಾವಳಿ ತಡೆಗೆ ತಾಲೂಕು ಆಡಳಿತ ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದು, ರೈತರು ಕೃಷಿ ಚಟಿವಟಿಕೆ ಮಾಡದೆ ಜಮೀನಿನಲ್ಲಿ ಪೊದೆ, ನೀಲಗಿರಿ ಮರಗಳು ಬೆಳೆದಿದ್ದರೆ ತಕ್ಷಣ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಭೂ ಕಂದಾಯ ಅಧಿನಿಯಮದಡಿ ವಶಕ್ಕೆ ಪಡೆಯಲಾಗುವುದು ಎಂದು ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ ಎಚ್ಚರಿಸಿದರು.

ತಾಪಂ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ತುಮಕೂರು, ಕುಣಿಗಲ್‌, ಗುಬ್ಬಿ ಗಡಿಭಾಗದಲ್ಲಿ ಚಿರತೆ ದಾಳಿ ನಿರಂತರವಾಗಿದೆ. ಇದರಿಂದ ಸಾಕು ಪ್ರಾಣಿಗಳು ಹಾಗೂ ಮಾನವನ ಪ್ರಾಣ ಹಾನಿಯೂ ಸಂಭವಿಸಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಅಲ್ಲದೆ ಈ ಸಂಬಂಧ ಕರಪತ್ರ ಮುದ್ರಿಸಿ ಹಾಗೂ ಗ್ರಾಮ ಪಂಚಾಯಿತಿ, ಅಂಗನವಾಡಿ ನೌಕರರ ಮೂಲಕ ವಿತರಣೆ ಮಾಡಿಸಿ ಜಾನ ಜಾಗೃತಿ ಮೂಡಿಸುವಂತ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕಾಲುವೆಗಳಲ್ಲಿ ಇರುವ ಪೊದೆ, ಗಿಡ ಗಂಟಿ ತೆರವುಗೊಳಿಸುವ ಸಂಬಂಧ ಈಗಾಗಲೇ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ನಿರ್ದೇಶನ ನೀಡಲಾಗಿದೆ. ತೆರವು ಕಾರ್ಯ ನಾಳೆಯಿಂದಲೇ ಪ್ರಾರಂಭವಾಗಲಿದೆ. ಅಲ್ಲದೆ ಸಣ್ಣ, ದೊಡ್ಡ ಇಳುವರಿ ರೈತರು ಹಲವು ವರ್ಷಗಳಿಂದ ತಮ್ಮ ಜಮೀನಿನಲ್ಲಿ ಯಾವುದೇ ಕೃಷಿ ಚಟುವಟಿಕೆ ಮಾಡದೆ ಜಮೀನಿನಲ್ಲಿ ಪೊದೆ,

ಗಿಡಗಂಟಿ ಹಾಗೂ ನಿಲಗಿರಿ ಮರಗಳು ಬೆಳೆದಿರುವುದರಿಂದ ಕಾಡು ಪ್ರಾಣಿಗಳ ವಾಸಕ್ಕೆ ಅನುಕೂಲವಾಗಿದೆ. ಆದ್ದರಿಂದ ರೈತರು ತಮ್ಮ ಜಮೀನುಗಳನ್ನು ಸ್ವತ್ಛಗೊಳಿಸಿಕೊಳ್ಳಿಸಿಕೊಂಡು ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ತೋಟ ಹಾಗೂ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸವಾಗಿರುವ ಜನರು ಎಚ್ಚರಿಕೆ ವಹಿಸಬೇಕು. ಮನೆಯಿಂದ ಒಬ್ಬರೆ ಹೊರ ಬರಬಾರದು. ಮಕ್ಕಳ ಬಗ್ಗೆ ಅತಿ ಎಚ್ಚರ ವಹಿಸಬೇಕೆಂದರು.

ನಾಲ್ಕು ಚಿರತೆ ಸೆರೆ: ಜಿಲ್ಲೆಯ ಕುಣಿಗಲ್‌, ಹೆಬ್ಬೂರು, ಗುಬ್ಬಿ ಈ ಪ್ರದೇಶದಲ್ಲಿ ನಾಲ್ಕು ಚಿರತೆ ಹಿಡಿದು ಬನ್ನೇರಗಟ್ಟ, ಬಂಡಿಪುರಕ್ಕೆ ಕಳಿಸಿಕೊಡಲಾಗಿದೆ. ಈ ಭಾಗದಲ್ಲಿ ಈಗ 4ರಿಂದ 5 ಚಿರತೆ ಇರುವ ಸಂಬಂಧ ಮಾಹಿತಿ ಇದೆ. ಚಿರತೆ ಸೆರೆ ಹಿಡಿಯಲು ಬನ್ನಿಕುಪ್ಪೆ, ದೊಡ್ಡಮಲಳವಾಡಿ ಸೇರಿ ಮೊದಲಾದ ಕಡೆ 19ರಿಂದ 20 ಬೋನು ಇಡಲಾಗಿದೆ. ಅಲ್ಲದೆ ಅದರ ಚಲನವಲನ ಕಂಡು ಹಿಡಿಯಲು 70 ಟ್ರ್ಯಾಕ್‌ ಕ್ಯಾಮರಾ ಅಳವಡಿಸಲಾಗಿದೆ.

ಈಗಾಗಲೇ ಎಸ್‌ಟಿಪಿ ಹಾಗೂ ಸೋಲಿಗರ ತಂಡ ಕಾರ್ಯಚರಣೆ ಇಳಿದಿದ್ದು, ಇನ್ನೊಂದು ವಾರದಲ್ಲಿ ನರಭಕ್ಷಕ ಚಿರತೆ ಸೆರೆ ಹಿಡಿಯಲಾಗುವುದು. ಚಿರತೆ ಎಲ್ಲಾದರೂ ಕಂಡು ಬಂದಲ್ಲಿ ತಕ್ಷಣ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಅರಣ್ಯ ಇಲಾಖೆ ಅ ಕಾರಿಗಳಿಗೆ ಮಾಹಿತಿ ನೀಡುವಂತೆ ಆರ್‌ಎಫ್‌ಒ ಮಂಜುನಾಥ್‌ ಮನವಿ ಮಾಡಿದರು. ಗೋಷ್ಠಿಯಲ್ಲಿ ತಾಪಂ ಇಒ ಶಿವರಾಜಯ್ಯ, ಸಿಪಿಐ ನಿರಂಜನ್‌ಕುಮಾರ್‌ ಇದ್ದರು.

26 ಲಕ್ಷ ರೂ ಪರಿಹಾರ: 2018-19 ನೇ ಸಾಲಿನಲ್ಲಿ ಚಿರತೆ ದಾಳಿಯಿಂದ 146 ಸಾಕು ಪ್ರಾಣಿಗಳು ಮೃತಪಟ್ಟಿವೆ. ಈ ಸಂಬಂಧ 10.84 ಲಕ್ಷ ಪರಿಹಾರ ಹಾಗೂ ದಾಳಿಯಿಂದ ಸಣ್ಣಪುಟ್ಟ ಗಾಯಗೊಂಡ ಮೂವರಿಗೆ 92.846 ಸಾವಿರ ಪರಿಹಾರ ನೀಡಲಾಗಿದೆ. 2019-20ನೇ ಸಾಲಿನಲ್ಲಿ ಸಾಕು ಪ್ರಾಣಿಗಳ ಹತ್ಯೆ 123 ಪ್ರಕರಣ ದಾಖಲಾಗಿದೆ. ಅದರಲ್ಲಿ 40 ಪ್ರಕರಣದಲ್ಲಿ 2.25 ಲಕ್ಷ ರೂ. ಪರಿಹಾರ ನೀಡಲಾಗಿದೆ.

ಇನ್ನು ಉಳಿದ 83 ಪ್ರಕರಣಕ್ಕೆ 5.83 ಲಕ್ಷ ಪರಿಹಾರ ಬಾಕಿ ಇದೆ. ಪರಿಹಾರ ಹಣ ಬಂದಿದ್ದು, ಮಾ.15ರ ಒಳಗೆ ನೀಡಲಾಗುವುದು. ಮತ್ತೆ ಮೂರು ಮಂದಿ ಗಾಯಗೊಂಡ ಪ್ರಕರಣಕ್ಕೆ 1.20 ಲಕ್ಷ ಹಾಗೂ ದೊಡ್ಡಮಲಳವಾಡಿ ಗ್ರಾಮದ ಆನಂದಯ್ಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಆರ್‌ಎಫ್‌ಒ ಮಂಜುನಾಥ್‌ ಹೇಳಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.