ಒಂದು ಲಕ್ಷ ಹೊಸ ಸದಸ್ಯರ ಸೇರ್ಪಡೆಗೆ ಸಿಎಂ ಬೊಮ್ಮಾಯಿ ಸೂಚನೆ
Team Udayavani, Jan 21, 2023, 9:57 PM IST
ತುಮಕೂರು: 9 ದಿನಗಳ ವಿಜಯ ಸಂಕಲ್ಪ ಅಭಿಯಾನದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕರ್ತರಿಗೆ ಸೂಚಿಸಿದರು.
ನಗರದ ತುಮಕೂರು ವಿವಿ ಮುಂಭಾಗದ ಬಾಯರ್ ಕಾಫಿ ಶಾಪ್ ಬಳಿ ತುಮಕೂರು ನಗರ ಬಿಜೆಪಿ ಮಂಡಲ ವತಿಯಿಂದ ಶನಿವಾರ ಏರ್ಪಡಿಸಿದ್ದ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಈ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾರವರು ಒಂದು ಕಡೆ, ನಾನು ತುಮಕೂರಿನಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಮಿಸ್ ಕಾಲ್ ಕೊಡುವ ಮೂಲಕ ಜನರು ಪಕ್ಷದ ಸದಸ್ಯರಾಗಿ ನೋಂದಣಿಯಾಗುವಂತೆ ಎಲ್ಲಾ ಕಾರ್ಯಕರ್ತರು ಜನರ ಮನವೊಲಿಸಬೇಕು. ಸದಸ್ಯರಾದವರ ಮನೆಗೆ ಸ್ಟಿಕ್ಕರ್ ಅಂಟಿಸುವ ಕೆಲಸವನ್ನು ಮಾಡಬೇಕಾಗುತ್ತದೆ. ಸಂಘಟನೆಯ ಬಲದಿಂದ ಮುಂದಿನ ಚುನಾವಣೆಯನ್ನು ಎದುರಿಸಲು ಕಾರ್ಯಕರ್ತರು ಸನ್ನದ್ದರಾಗುವಂತೆ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ