ತಿಪಟೂರು ನಗರಸಭೆ ಚುನಾವಣೆ ಟಿಕೆಟ್‌ಗೆ ಪೈಪೋಟಿ

Compete for Tiptur Municipal Election Tickets

Team Udayavani, May 12, 2019, 2:39 PM IST

tumkur-tdy-8..

Compete for Tiptur Municipal Election Tickets

ತಿಪಟೂರು: ಈಗಷ್ಟೇ ಲೋಕಸಭಾ ಚುನಾವಣಾ ಕದನ ಮುಗಿದು ಫ‌ಲಿತಾಂಶಕ್ಕೆ ಕಾಯುತ್ತಿರುವ ಸಂದರ್ಭದಲ್ಲಿ ರಾಜ್ಯ ಚುನಾವಣಾ ಆಯೋಗ ನಗರಸಭಾ ಚುನಾವಣೆ ಘೋಷಿಸಿದ್ದು ರಾಜಕೀಯ ಮುಖಂಡರಿಗೆ ಒಂದು ರೀತಿಯ ತಲೆನೋವಾಗಿ ಪರಿಣಮಿಸಿದೆ. ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಕೊಡಬಾರದು ಎಂಬ ಲೆಕ್ಕಾಚಾರದಲ್ಲಿ ಮುಖಂಡರು ಮುಳುಗಿದ್ದಾರೆ.

ಹೆಚ್ಚಿದ ಸ್ಪರ್ಧಾಕಾಂಕ್ಷಿಗಳು: ತಿಪಟೂರು ನಗರ ಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮೇ 29ರಂದು ಚುನಾವಣೆ ನಡೆಯಲಿದೆ. ನಗರಸಭಾ ವ್ಯಾಪ್ತಿಯಲ್ಲಿ ಒಟ್ಟು 31 ವಾರ್ಡ್‌ ಗಳಿದ್ದು, 45256 ಮತದಾರರಿದ್ದಾರೆ. ಅದರಲ್ಲಿ 21896 ಪುರುಷರು, 23357 ಮಹಿಳಾ ಮತಗಳಿವೆ. ಈಗಾಗಲೇ ಮೇ 9ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದರೂ, ಯಾವುದೇ ಪಕ್ಷದ ಅಭ್ಯರ್ಥಿ ಗಳಿಂದ ಅಥವಾ ಪಕ್ಷೇತರರಿಂದಾಗಲಿ ಇದುವರೆಗೂ ಒಂದೂ ನಾಮಪತ್ರವೂ ಸಲ್ಲಿಕೆಯಾಗಿಲ್ಲ. ಪಕ್ಷಗಳ ಮುಖಂಡರಿಗಂತೂ ಯಾರಿಗೆ ಟಿಕೆಟ್ ನೀಡಬೇಕೆಂಬುದೇ ತಲೆನೋವಾಗಿದ್ದು ಸ್ಪರ್ಧಾ ಕಾಂಕ್ಷಿಗಳ ಸಂಖ್ಯೆ ಮಾತ್ರ ಏರುತ್ತಿದೆ.

ಅಧಿಕೃತ ಬಿಡುಗಡೆ ಇಲ್ಲ: ಟಿಕೆಟ್ಗಾಗಿ ಮುಖಂಡರ ಮೇಲೆ ಒತ್ತಡಗಳು ಹೆಚ್ಚುತ್ತಿದ್ದು, ಟಿಕೆಟ್ ಸಿಗದವರು ಬಂಡಾಯ ಏಳುವ ಲಕ್ಷಣಗಳು ಈಗಾಗಲೇ ಗೋಚರಿಸುತ್ತಿದೆ. ಜೆಡಿಎಸ್‌, ಕಾಂಗ್ರೆಸ್‌ ಮತ್ತು ಬಿಜೆಪಿ ಮುಖಂಡರು ಕೆಲ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದರೂ ಅಧಿಕೃತವಾಗಿ ಬಿಡುಗಡೆಗೊಳಿಸಿಲ್ಲ. ಆದರೆ, ಅಭ್ಯರ್ಥಿಗಳು ನಾನೇ ಸ್ಪರ್ಧಿಸುತ್ತಿದ್ದೇನೆಂದು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋ ಹಾಗೂ ಪಕ್ಷದ ಹೆಸರನ್ನು ಹಾಕಿಕೊಂಡು ರಾರಾಜಿಸುತ್ತಿದ್ದರೆ ಮುಖಂಡರು ಮಾತ್ರ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿದ್ದಾರೆನ್ನಲಾಗಿದೆ.

ಚುನಾವಣೆಯಲ್ಲಿ ಮಾಜಿ ಸದಸ್ಯರೇ ಹೆಚ್ಚು ಸ್ಪರ್ಧೆ: ಈಗಾಗಲೇ ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಒಂದೆರಡು ಬಾರಿ ಗೆದ್ದಿದ್ದ ಮಾಜಿ ಸದಸ್ಯರೇ ಚುನಾವಣೆಗೆ ಸ್ಪರ್ಧಿಸುತ್ತಿದ್ದು ಚುನಾವಣೆ ಎದುರಿ ಸುವ ಪಟ್ಟುಗಳನ್ನು ಕರಗತ ಮಾಡಿಕೊಂಡಿದ್ದಾರೆ. ನಗರವನ್ನು ಮಾದರಿ ನಗರವನ್ನಾಗಿ ಮಾಡುತ್ತೇ ವೆಂದು ಜನತೆಗೆ ಆಶ್ವಾಸನೆ ನೀಡಿ ಗೆದ್ದಿದ್ದ ಸದಸ್ಯರು ಈ ಬಾರಿಯೂ ನಾವೇ ಸ್ಪರ್ಧಿಸುತ್ತೇವೆ. ನಮಗೆ ಟಿಕೆಟ್ ಕೊಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಇನ್ನೂ ಕೆಲವೆಡೆ ಸಾಮಾನ್ಯ ಹಾಗೂ ಮಹಿಳಾ ಮೀಸಲಾತಿ ಇರುವುದರಿಂದ ಅವರ ಪತ್ನಿಯರನ್ನು ಚುನಾವಣಾ ಕಣಕ್ಕೆ ಇಳಿಸುವ ಸಾಧ್ಯತೆಗಳು ಕಂಡುಬಂದಿವೆ.

ತಂತ್ರ-ಕುತಂತ್ರ: ಒಂದೇ ವಾರ್ಡ್‌ಗೆ 4-5 ಅಭ್ಯರ್ಥಿಗಳಿರುವ‌ ಕಾರಣ ಟಿಕೆಟ್ ಯಾರಿಗೆ ಕೊಡ ಬೇಕೆಂಬ ಗೊಂದಲ ಮುಖಂಡರಲ್ಲಿ ಮನೆ ಮಾಡಿದೆ. ಈಗಾಗಲೇ ಒಂದೆರಡು ಬಾರಿ ಗೆದ್ದು ಅಧಿಕಾರದ ರುಚಿ ಕಂಡಿರುವ ಸದಸ್ಯರು ಟಿಕೆಟ್ಗಾಗಿ ತಮ್ಮೆಲ್ಲಾ ತಂತ್ರ-ಕುತಂತ್ರಗಳನ್ನು ಉಪಯೋಗಿ ಸುತ್ತಿರುವುದು ಕಂಡು ಬರುತ್ತಿದೆ. ಪಕ್ಷದ ಯಾರನ್ನು ಕಳೆದುಕೊಳ್ಳಲು ಇಷ್ಟವಿಲ್ಲದ ಮುಖಂಡರಿಗೆ ಟಿಕೆಟ್ನಿಂದಾಗಿ ಎಲ್ಲಿ ಗೊಂದಲ ಉಂಟಾಗಿ ಬಿಡು ತ್ತದೆಯೋ ಎಂಬ ಭಯ ಕಾಡುತ್ತಿದೆ.

ಒಟ್ಟಾರೆ ವಿಧಾನಸಭಾ ಚುನಾವಣೆಗೂ ಕಡಿಮೆ ಇಲ್ಲವೆಂಬಂತೆ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದ್ದು ತೀವ್ರ ಕುತೂಹಲ ಕೆರಳಿಸಿದೆ. ಜೆಡಿಎಸ್‌, ಬಿಜೆಪಿ ಹಾಗೂ ಕಾಂಗ್ರೆಸ್‌ ಗೆಲುವಿಗಾಗಿ ರಣತಂತ್ರ ಎಣೆಯುತ್ತಿದ್ದು, ಮತದಾರ ಪ್ರಭು ಮಾತ್ರ ಯಾರಿಗೆ ಮತಹಾಕಿ ಆಶೀರ್ವದಿಸುತ್ತಾನೋ ಎಂಬುದು ಫ‌ಲಿತಾಂಶದ ಬಳಿಕ ತಿಳಿದು ಬರಲಿದೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.