ತನಗೆ ಹಲವರು ಜೀವ ಬೆದರಿಕೆ ಹಾಕುತ್ತಿದ್ದಾರೆ : ಸುರೇಶ್ ಗೌಡ
ತುಮಕೂರು ಗ್ರಾಮಾಂತರ ಮಾಜಿ ಬಿಜೆಪಿ ಶಾಸಕರಿಂದ ದೂರು ; ಎಫ್ಐಆರ್ ದಾಖಲು
Team Udayavani, Nov 25, 2022, 4:29 PM IST
ತುಮಕೂರು: ತನಗೆ ಹಲವರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ತುಮಕೂರಿನ ಕ್ಯಾತಸಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ.ಇದರ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಎಫ್ಐಆರ್ನ ಪ್ರಕಾರ, ಪೊಲೀಸರು ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್, ಅವರ ಬೆಂಬಲಿಗ ಹಿರೇಹಳ್ಳಿ ಮಹೇಶ್, ಬೊಮ್ಮನಹಳ್ಳಿ ಬಾಬು (ಅತ್ತಿಕಾ ಬಾಬು) ಮತ್ತು ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಹಲವಾರು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮೂವರು ಆರೋಪಿಗಳಾದ ಶಾಸಕ ಗೌರಿಶಂಕರ್, ಅವರ ಬೆಂಬಲಿಗ ಹಿರೇಹಳ್ಳಿ ಮಹೇಶ್, ಬೊಮ್ಮನಹಳ್ಳಿ ಬಾಬು ಅಕಾ ಅತ್ತಿಕ ಬಾಬು ತಮ್ಮ ಕೊಲೆಗೆ ಸಂಚು ರೂಪಿಸಿದ್ದರು ಎಂದು ದೂರಿನಲ್ಲಿ ಗೌಡರು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.