ಪಿಎಸ್ಐ ವಿರುದ್ಧ ಡಿವೈಎಸ್ಪಿಗೆ ದೂರು
ಅನುಚಿತ ನಡವಳಿಕೆ, ದೂರು ದಾಖಲಿಸಿಕೊಳ್ಳಲು ಮೀನಮೇಷ: ಆರೋಪ
Team Udayavani, May 1, 2019, 3:31 PM IST
ತಿಪಟೂರು: ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಲಕ್ಷ್ಮೀಕಾಂತ್ ಅನುಚಿತ ನಡವಳಿಕೆ ಹಾಗೂ ದೂರು ದಾಖಲಿಸಿಕೊಳ್ಳಲು ಮೀನಮೇಷ ಎಣಿ ಸುತ್ತಿದ್ದು, ಇವರ ವಿರುದ್ಧ ಕಾನೂನೂ ಕ್ರಮ ಕೈಗೊಳ್ಳಬೇಕೆಂದು ತುಮಕೂರು ಜಿಲ್ಲಾ ಜಯಕರ್ನಾಟಕ ಸಂಘಟನೆ ಪದಾಧಿಕಾರಿಗಳು ತಿಪಟೂರು ಉಪ ವಿಭಾಗದ ಡಿವೈಎಸ್ಪಿ ಕಲ್ಯಾಣ್ಕುಮಾರ್ ರವರಿಗೆ ಮನವಿ ಪತ್ರ ಸಲ್ಲಿಸಿದ ಘಟನೆ ಸೋಮವಾರ ನಡೆಯಿತು.
ಈ ವೇಳೆ ಜಿಲ್ಲಾ ಅಧ್ಯಕ್ಷ ಸಿ.ಪಿ. ಸುಧೀರ್ ಮಾತನಾಡಿ, ಹುಳಿಯಾರು ಹೋಬಳಿ ಜಯ ಕರ್ನಾಟಕ ಅಧ್ಯಕ್ಷ ಮೋಹನ್ಕುಮಾರ್ ರೈ ಸ್ಥಳೀಯ ವಿಷಯವಾಗಿ ಠಾಣೆಗೆ ದೂರು ನೀಡಲು ಹೋದಾಗ ಪಿಎಸ್ಐ ಲಕ್ಷ್ಮೀಕಾಂತ್ ಈ ವಿಷಯದ ಬಗ್ಗೆ ಕೇಳಲು ನೀನು ಯಾರು ಎಂದು ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ ಸಂಘಟನೆ ಬಗ್ಗೆ ಕೇವಲವಾಗಿ ಮಾತನ್ನಾಡುತ್ತಾರೆ.
ಈ ರೀತಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯಾಗಿ ಈ ರೀತಿ ನಡೆದು ಕೊಂಡರೆ ಜನಸಾಮಾನ್ಯರ ಗತಿ ಏನು. ಈ ಬಗ್ಗೆ ತಾವುಗಳು ಪರಿಶೀಲನೆ ನಡೆಸಿ ಪಿಎಸ್ಐ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿದರು.
ಈ ವೇಳೆ ಜಯಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ತಿಮ್ಮರಾಜು, ಗಿರೀಶ್ಗೌಡ, ತಿಪಟೂರು ತಾಲೂಕು ಅಧ್ಯಕ್ಷ ಬಿ.ಟಿ. ಕುಮಾರ್, ಮಧುಗಿರಿ ತಾಲೂಕು ಅಧ್ಯಕ್ಷ ಚಂದನ್, ಹುಳಿಯಾರು ಹೋಬಳಿ ಅಧ್ಯಕ್ಷ ಮೋಹನ್ಕುಮಾರ್ ರೈ, ಕಾರ್ಯಾಧ್ಯಕ್ಷ ತಾಂಡವಚಾರ್, ಯುವಘಟಕದ ಮೋಹನ್ಬಾಬು, ಪ್ರಶಾಂತ್, ರಾಜೇಶ್, ಖಲಂದರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.