ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ “ಕೈ’ ಪ್ರತಿಭಟನೆ


Team Udayavani, Dec 24, 2019, 3:00 AM IST

powrat

ತಿಪಟೂರು: ಪೌರತ್ವ ಕಾನೂನು ತಿದ್ದುಪಡಿ ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ನಗರದ ಸಿಂಗ್ರಿನಂಜಪ್ಪ ವೃತ್ತದಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಕಾಯಕರ್ತರು, ಮುಖಂಡರು ರಸ್ತೆ ತಡೆ ನಡೆಸಿ ಶಾಂತಿಯುತ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಆರತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಉದ್ಯೋಗ ನಾಶ: ಈ ವೇಳೆ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಡೇನೂರು ಕಾಂತರಾಜು ಮಾತನಾಡಿ, ದೇಶದಲ್ಲಿನ ಜಿಡಿಪಿ ನೆಲಕಚ್ಚುತ್ತಿದ್ದು, ಪದವಿ ಪಡೆದ ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ. ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದ್ದು, ದೇಶದಲ್ಲಿನ ಆರ್ಥಿಕ ಪರಿಸ್ಥಿತಿ ದುರ್ಬಲವಾಗಿ ದಿವಾಳಿಯತ್ತ ಸಾಗುತ್ತಿದೆ. ಕಾರ್ಖಾನೆಗಳು ಮುಚ್ಚಿಹೋಗುತ್ತಿದ್ದು ಇದನ್ನು ಗಮನಹರಿಸದ ಪ್ರಧಾನಿ ಮೋದಿ, ದೇಶದಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿ ಮಾಡುತ್ತಾ ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಹಿಂದೂ, ಮುಸ್ಲಿಮರು ನಮ್ಮ ದೇಶದಲ್ಲಿ ಸಮಾನವಾಗಿ ಒಂದೇ ಎಂದು ಬಾಳುತ್ತಿದ್ದೇವೆ. ಆದರೆ ಇದು ವೋಟ್‌ಬ್ಯಾಂಕ್‌ಗಾಗಿ ಕಾಯ್ದೆ ತಿದ್ದುಪಡಿ ನೆಪದಲ್ಲಿ ತಂತ್ರಗಾರಿಕೆ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಥಾಸ್ಥಿತಿ ಕಾನೂನು ಇರಲಿ:  ಕಾಂಗ್ರೆಸ್‌ ಮುಖಂಡ ಅಣ್ಣಯ್ಯ ಮಾತನಾಡಿ, ಇದು ಧರ್ಮದಲ್ಲಿ ವೈಷಮ್ಯ ಬಿತ್ತುವಂತಾಗಿದೆ. ಸಂವಿಧಾನವನ್ನು ಉಳಿಸಬೇಕು. ಕಾಯ್ದೆ ತಿದ್ದುಪಡಿ ಮಾಡುವ ಈ ಕೆಲಸದಿಂದ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ದೇಶದಲ್ಲಿ ಮಾಡುವ ಕೆಲಸ ಬೇಕಾದಷ್ಟಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಮಂಗಳೂರಿಗೆ ಹೋಗಿ ಅಲ್ಲಿನ ಸ್ಥಿತಿಗತಿ ವಿಚಾರಿಸಿ ಸಾಂತ್ವನ ಹೇಳಬಹುದು. ಆದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೋಗುವಂತಿಲ್ಲ ಎಂದರೆ ಯಾವ ನ್ಯಾಯ. ಯಾವ ಸರ್ಕಾರವೂ ಇಂತಹ ಕೆಲಸ ಮಾಡಿಲ್ಲ ಆದರೆ ಇವರು ಜೇನುಗೂಡಿಗೆ ಕೈ ಇಡುವ ಕೆಲಸ ಮಾಡಿದ್ದಾರೆ ಇದು ಸರಿಯಲ್ಲ, ಕೂಡಲೇ ಈ ಕಾಯ್ದೆ ರದ್ದುಪಡಿಸಬೇಕೆಂದು ಒತ್ತಾಯಿಸಿದರು.

ಪ್ರಚೋದನೆ: ತಾಪಂ ಮಾಜಿ ಅಧ್ಯಕ್ಷ ಸುರೇಶ್‌ ಮಾತನಾಡಿ, ಇದು ಮತಕ್ಕಾಗಿ ಮಾಡುತ್ತಿರುವ ಕೆಲಸ. ನಾವು ಭಾರತೀಯರೆಲ್ಲರೂ ಒಂದೇ. ಮೋದಿ ಹಾಗೂ ಅಮಿತ್‌ ಷಾ ಅವರು ದೇಶವನ್ನು ಪ್ರಚೋದನೆ ಮಾಡುತ್ತಿದ್ದಾರೆ. ಕಾಯ್ದೆ ತಿದ್ದುಪಡಿ ರದ್ದುಗೊಳಿಸಿ ರೈತರು, ಯುವಕರು ಹಾಗೂ ದೇಶದ ಜನರನ್ನು ರಕ್ಷಣೆ ಮಾಡುವ ಕೆಲಸವಾಗಲಿ ಎಂದರು.

ಹುಳಿ ಹಿಂಡುವ ಕೆಲಸ: ಮುಸ್ಲಿಂ ಮುಖಂಡ ಅಲ್ಲಾಬಕ್ಷ್ ಮಾತನಾಡಿ, ಕಾಯ್ದೆ ತಿದ್ದುಪಡಿಯಿಂದಾಗಿ ದೇಶದಲ್ಲಿ 36 ಜನ ಮುಸ್ಲಿಮರು ಸತ್ತಿದ್ದಾರೆ. ಇದಕ್ಕೆ ಯಾವ ಪ್ರಧಾನಿಯಾಗಲಿ, ಮುಖ್ಯಮಂತ್ರಿಗಳಾಗಲಿ ಮಾತನಾಡಿಲ್ಲ. ಹಿಂದೂ ಹಾಗೂ ಮುಸ್ಲಿಮರು ಯಾವುದೇ ಬೇಧವಿಲ್ಲದೇ ಜೀವನ ನಡೆಸುತ್ತಿದ್ದು, ಇದು ಧರ್ಮ ಧರ್ಮಗಳ ನಡುವೆ ಹುಳಿ ಹಿಂಡುವ ಕೆಲಸ ಎಂದರು. ಜನಸ್ಪಂದನ ಟ್ರಸ್ಟ್‌ ಅಧ್ಯಕ್ಷ ಸಿ.ಬಿ.ಶಶಿಧರ್‌, ಎಪಿಎಂಸಿ ಉಪಾಧ್ಯಕ್ಷ ಬಜಗೂರು ಮಂಜುನಾಥ್‌, ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್‌.ಪ್ರಕಾಶ್‌, ತಾಪಂ ಅಧ್ಯಕ್ಷ ಶಿವಸ್ವಾಮಿ, ಸದಸ್ಯರಾದ ಜಯಂತಿ, ರವಿಕುಮಾರ್‌, ಸುರೇಶ್‌, ನಗರಸಭೆ ಸದಸ್ಯೆ ವಿನುತಾ, ಮಹೇಶ್‌, ಮುಖಂಡರಾದ ಬೆನ್ನಾಯ್ಕನಹಳ್ಳಿ ಶಿವಪ್ಪ, ತನ್ವೀರ್‌ವುಲ್ಲಾ ಶರೀಫ್ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.