ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ


Team Udayavani, Feb 11, 2021, 4:34 PM IST

Congress protests against oil price hike

ತಿಪಟೂರು: ಕೇಂದ್ರ ಸರ್ಕಾರ ತೈಲ ಬೆಲೆಗಳನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ತಾಲೂಕು ಕಾಂಗ್ರೆಸ್‌ ಸಮಿತಿ ವತಿಯಿಂದ ಮಾಜಿ ಶಾಸಕ ಕೆ. ಷಡಕ್ಷರಿ ನೇತೃತ್ವದ ಲ್ಲಿ ಬುಧವಾರ ನಗರದ ಶ್ರೀ ಕೆಂಪಮ್ಮದೇವಿ ದೇವಾಲಯದಿಂದ ದೊಡ್ಡಪೇಟೆ ಮಾರ್ಗದಲ್ಲಿ ಬಿ.ಎಚ್‌. ರಸ್ತೆ ಮುಖಾಂತರ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನು ಬುಧವಾರ ನಡೆಸಲಾಯಿತು.

ಪಾದಯಾತ್ರೆ ಮೂಲಕ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ತಹ ಶೀಲ್ದಾರ್‌ ಚಂದ್ರಶೇಖರ್‌ಗೆ ಮನವಿ ಸಲ್ಲಿಸಿ ಮಾಜಿ ಶಾಸಕ ಕೆ.ಷಡಕ್ಷರಿ ಮಾತನಾಡಿ, ಕೇಂದ್ರ ಸರ್ಕಾರ ಒಂದೇ ಸಮ ಪೆಟ್ರೋಲ್‌, ಡೀಸೆಲ್‌ ಮತ್ತು ಅಡುಗೆ ಅನಿಲ ದರಗಳನ್ನು ಹೆಚ್ಚಿಸುತ್ತಿರುವುದು ಸರಿಯಲ್ಲ. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಹೊರೆ ಯಾಗಲಿದ್ದು ಜೀವನ ನಡೆಸುವುದು ಕÐಕರr ‌ವಾಗಿದೆ ಎಂದರು.

ರೈತ ಪರ, ಜನಸಾಮಾನ್ಯರ ಪರ ಸರ್ಕಾರ ಎಂದು ಬಾಯಿ ಮಾತಿನಲ್ಲಿ ಹೇಳುವ ಮೋದಿ ಸರ್ಕಾರ ಇಂಧನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆಗಳನ್ನು ಗಗನಕ್ಕೇರಿಸುವ ಮೂಲಕ ಶ್ರೀಸಾಮಾನ್ಯರ ಬದುಕಿ ನಲ್ಲಿ ಚೆಲ್ಲಾಟವಾಡುತ್ತಿದೆ. ಕೊರೊನಾದಿಂದಾಗಿ ಜನರ ಜೀವನ ಇನ್ನೂ ಸುಧಾರಣೆಯಾಗಿಲ್ಲ.

ಸಾಲ ಮಾಡಿ ಕೊಂಡು ಜೀವನ ನಡೆಸುತ್ತಿರುವ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ದಿಢೀರನೆ ಬೆಲೆಗಳನ್ನು ಏರಿಸುವ ಮೂಲಕ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡು ವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಡ ಜನರ ಕಷ್ಟ ಅವರಿಗೆ ಅರ್ಥಮಾಡಿಕೊಳ್ಳದೆ ತಾವು ಮಾಡಿದ್ದೇ ಕಾನೂನು ಎಂಬಂತಾಗಿದೆ. ರೈಲ್ವೆ ಖಾಸಗೀಕರಣ, ಕೃಷಿ ಕಾಯ್ದೆ ತಿದ್ದುಪಡಿಯಿಂದಾಗಿ ರೈತರಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಪ್ರತಿಭಟನೆ, ಧರಣಿ ನಡೆಸುತ್ತಿದ್ದರೂ ಕವಡೆಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಉದ್ಯೋಗ ಸೃಷ್ಟಿಸುತ್ತೇವೆಂದು ಹೇಳಿ ಯುವಕರಿಗೆ ಉದ್ಯೋಗವಿಲ್ಲದೆ ನಿರುದ್ಯೋಗ ಸಮಸ್ಯೆಯನ್ನು ಎದುರಿಸುವಂತಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದ ಯಾವ ಕಾನೂನುಗಳು ಸಮರ್ಪಕವಾಗಿಲ್ಲ. ಜನಸಾಮಾನ್ಯರಿ ಗೆ ಹೊರೆಯಾಗುವಂತಹ ಕೆಲಸವನ್ನು ಪ್ರಧಾನಿ ಮೋದಿಯವರು ಮಾಡುತ್ತಿದ್ದಾರೆ. ಯುವಕರು ಈಗಲೇ ಎಚ್ಚೆತ್ತುಕೊಂಡರೆ ಸರಿ ಇಲ್ಲವಾದಲ್ಲಿ ಗುಲಾ ಮ ರಾಗಿ ಬದುಕಬೇಕಾಗುತ್ತದೆ ಎಂದು ಕಿಡಿ ಕಾರಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೆ ಇಂಧನ ಬೆಲೆ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯವಸ್ತುಗಳ ಬೆಲೆಯನ್ನು ಕಡಿಮೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ನಮ್ಮ ಹೋರಾಟವನ್ನು ತೀವ್ರಗತಿಯಲ್ಲಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಮುಂದುವರಿದ ರಾಗಿಂಗ್ ಹಾವಳಿ: ಮಂಗಳೂರಿನಲ್ಲಿ 11 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಬ್ಲಾಕ್‌ ಕಾಂಗ್ರೆಸ್‌ ತಾ. ಅಧ್ಯಕ್ಷ ಮಡೇನೂರು ಕಾಂತರಾಜು, ತಾಪಂ ಅಧ್ಯಕ್ಷ ಜಿ.ಎಸ್‌.ಶಿವಸ್ವಾಮಿ, ಉಪಾಧ್ಯಕ Ò ಶಂಕರ್‌, ಮಾಜಿ ಅಧ್ಯಕ್ಷ ಸುರೇಶ್‌ ನ್ಯಾಕೇನಹಳ್ಳಿ, ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಸೈಫ‌ುಲ್ಲಾ, ನಗರ ಕಾಂಗ್ರೆಸ್‌ ಅಧ್ಯಕ್ಷ ಟಿ.ಎನ್‌. ಪ್ರಕಾಶ್‌, ನಗರಸಭಾ ಸದಸ್ಯ ರಾದ ವಿ.ಯೋಗೇಶ್‌, ಪ್ರಭುಕೋಟೆ, ವಿನುತಾ, ಮೇಘನಾ, ಮಹೇಶ್‌, ಅಣ್ಣಯ್ಯ, ಗೌಸ್‌, ಮುಖಂಡರಾದ ಬಜಗೂರು ಮಂಜು ನಾಥ್‌, ಜುಬೇರ್‌, ಮಾದೀಹಳ್ಳಿ ಪ್ರಕಾಶ್‌, ಲೋಕ ನಾಥ್‌ ಸಿಂಗ್‌, ಸುಜಿತ್‌ ಭೂಷಣ್‌ ಇತರರು ಇದ್ದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.