ವಿವಾದಾತ್ಮಕ ಹೇಳಿಕೆ : ಮಾಜಿ ಪ್ರಧಾನಿ ದೇವೇಗೌಡರ ಕ್ಷಮೆ ಯಾಚಿಸಿದ ಕೆ.ಎನ್.ರಾಜಣ್ಣ
Team Udayavani, Jul 1, 2022, 5:23 PM IST
ತುಮಕೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ಕೆ.ಎನ್.ರಾಜಣ್ಣ ಶುಕ್ರವಾರ ಕ್ಷಮೆ ಯಾಚಿಸಿದ್ದಾರೆ.
ದೇವೇಗೌಡರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಇರಲಿ, ದೇವೇಗೌಡರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ, ಆ ನಿಯತ್ತು ನನಗೆ ಇದೆ. ಇಂದು ಅಥವಾ ನಾಳೆ ಅವರನ್ನು ಭೇಟಿಯಾಗುವೆ. ಅವರ ಸಾವನ್ನು ಬಯಸುವ ವ್ಯಕ್ತಿ ನಾನಲ್ಲ, ಜೆಡಿಎಸ್ ಪ್ರತಿಭಟನೆ ನಡೆಸಿದರೆ ಅಡ್ಡಿಯಿಲ್ಲ. ಗೆಲ್ಲಲಿ, ಬಿಡಲಿ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದಾರೆ.
ರಾಜಣ್ಣ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನವದೆಹಲಿಯಲ್ಲಿ ಖಂಡಿಸಿದ್ದು, ರಾಜಣ್ಣ ಹೇಳಿಕೆ ಪಕ್ಷ ಒಪ್ಪುವುದಿಲ್ಲ.ಅವರು ಕ್ಷಮೆ ಕೇಳಲೇ ಬೇಕು. ದೇವೇಗೌಡರಿಗೆ ದೇವರು ಇನ್ನಷ್ಟು ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
”ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಈಗ ಇಬ್ಬರ ಮೇಲೆ ಕೈಹಾಕಿಕೊಂಡು ಹೋಗುತ್ತಿದ್ದಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ” ಎಂಬ ರಾಜಣ್ಣ ಹೇಳಿಕೆಗೆ ಜೆಡಿಎಸ್ ನಾಯಕರು, ಕಾರ್ಯಕರ್ತರು ಮತ್ತು ಹೆಚ್ ಡಿಡಿ ಅವರ ಅಭಿಮಾನಿ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!