ಅಭಿವೃದ್ಧಿಗೆ ಸಹಕಾರ ಅಗತ್ಯ
Team Udayavani, Sep 24, 2019, 5:55 PM IST
ತಿಪಟೂರು: ಕಾಲೇಜು ಅಭಿವೃದ್ಧಿಗೆ ಪೋಷಕರ ಸಹಕಾರ ಅಗತ್ಯವಾಗಿದ್ದು, ಕಾಲೇಜಿನೊಂದಿಗೆ ಉತ್ತಮ ಒಡನಾಟ ವಿಟ್ಟು ಅಭಿವೃದ್ಧಿಗೆ ಶ್ರಮಿಸಬೇಕೆಂದು ಪೋಷಕರ ಸಂಘದ ಅಧ್ಯಕ್ಷ ಬಿಲ್ಲೇಮನೆ ಚಂದ್ರಶೇಖರ್ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೋಷಕರ ಸಮಿತಿ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಪೋಷಕರ ಸಭೆ ಉದ್ಘಾಟಿಸಿ ಮಾತನಾಡಿದರು. ಪೋಷಕರು ಶಿಕ್ಷಕರ ಜೊತೆ ಕೈ ಜೋಡಿ ಸಿದರೆ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ. ಪೋಷಕರು ಮಕ್ಕಳನ್ನು ಕಾಲೇಜಿಗೆ ಕಳುಹಿಸುವುದು ಮುಖ್ಯವಲ್ಲ. ಕಾಲೇಜು ಮತ್ತು ಉಪನ್ಯಾಸಕರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಅವರ ವಿದ್ಯಾಭ್ಯಾಸದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ. ಕೆ.ಎಂ. ರಾಜಣ್ಣ, ಕಾಲೇಜಿನಲ್ಲಿ ಸಾಕಷ್ಟು ಮೂಲ ಸೌಕರ್ಯಗಳ ಕೊರತೆಯಿದ್ದು, ಇದ ರಿಂದ ವಿದ್ಯಾರ್ಥಿಗಳಿಗೆ ತೊಂದರೆ ಯಾಗುತ್ತಿದೆ. ಜನಪ್ರತಿನಿಧಿಗಳು ಯಾವುದೇ ಅನುಮಾನ ಇಟ್ಟುಕೊಳ್ಳದೆ ಉತ್ತಮ ಒಡನಾಟವಿಟ್ಟು ಕಾಲೇಜಿನ ಅಭಿವೃದ್ಧಿಗೆ ಕೈಜೋಡಿಸಬೇಕಿದೆಎಂದರು. ಪೋಷಕರ ಸಂಘದ ಸಂಚಾಲಕ ಪ್ರೊ. ಜಿ.ಸಿ. ನೀಲಕಂಠಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಸ್ಕೃತ ವಿದ್ವಾಂಸ ಡಿ.ಎಚ್. ಗಂಗಣ್ಣ ಮಾತನಾಡಿದರು. ಐಕ್ಯೂಎಸಿ ಸಂಯೋಜಕ ಡಾ. ಎಸ್. ಆರ್. ನಾಗಭೂಷಣ್, ಪೋಷಕರ ಸಂಘದ ಕಾರ್ಯದರ್ಶಿ ಶೇಖರಪ್ಪ, ಪ್ರೊ. ಎಚ್.ಬಿ. ಕುಮಾರಸ್ವಾಮಿ, ಡಾ. ಎನ್. ನರಸಿಂಹರಾಜು, ಪ್ರೊ. ಎಂ.ಆರ್. ಚಿಕ್ಕಹೆಗ್ಗಡೆ, ಪ್ರೊ. ಕೆ.ವಿ. ನಾಗರಾಜು, ಪ್ರೊ. ಕೆ. ನಾಗರಾಜು, ಪ್ರೊ. ಅನು ಪ್ರಸಾದ್, ಲಕ್ಷಿ ರಂಗಯ್ಯ, ಎಚ್.ಜಿ. ರಮೇಶ್, ಕಲ್ಪನಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!