ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೋವಿಡ್‌ 19


Team Udayavani, Jun 26, 2020, 6:46 AM IST

pariske-covid

ಶಿರಾ: ತಾಲೂಕಿನ ಕಾಮಗೊಂಡನಹಳ್ಳಿ ಗ್ರಾಮದ ಶಿಕ್ಷಕರ ಮಗ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೋವಿಡ್‌ 19 ದೃಢವಾದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, 100 ಮೀಟರ್‌ ಅಂತರದ 50 ಮನೆ  ಗಳನ್ನು ಹೋಂ ಕ್ವಾರಂಟೈನ್‌ ಒಳಪಡಿಸಲಾಗಿದೆ. ಆಂಧ್ರ ಪ್ರದೇಶದ ರಾಯದುರ್ಗ ಸೋಂಕಿನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗೆ ಕೋವಿಡ್‌ 19 ಪಾಸಿಟಿವ್‌ ಬಂದಿದ್ದು ಕಾಮಗೊಂಡನಹಳ್ಳಿ ಸೀಲ್‌ಡೌನ್‌ಮಾಡಲಾಗಿದೆ.

ತಾಯಿಯಿಂದ  ಮಗನಿಗೆ ಸೋಂಕು: ಶಾಲೆಗಳು ರಜೆ ಇದ್ದ ಕಾರಣ ಸೋಂಕಿತ ವಿದ್ಯಾರ್ಥಿಯ ತಾಯಿ ಆಂಧ್ರಪ್ರದೇಶದ ರಾಯದುರ್ಗದಲ್ಲಿದ್ದರು, ಈ ವೇಳೆ ಮಕ್ಕಳು ಸಹ ಜೊತೆಯಲ್ಲಿದ್ದರು. ರಾಯದುರ್ಗದಲ್ಲಿ ವಾಸಿಸುವ ಮನೆ ಮುಂದಿನ ಕುಟುಂಬದ  ಸದಸ್ಯರಿಗೆ ಕೋವಿಡ್‌ 19 ಪಾಸಿಟಿವ್‌ ಇದ್ದ ಕಾರಣ ಇವರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿತ್ತು. ವಿದ್ಯಾರ್ಥಿಯ ತಂದೆ ಶಿಕ್ಷಕನಾಗಿದ್ದು, ಜೂ.18ರಂದು ದ್ವೀತಿಯ ಪಿಯುಸಿ ಇಂಗ್ಲಿಷ್‌ ಪ್ರಶ್ನೆ ಪತ್ರಿಕೆ ಪರೀಕ್ಷೆ ಇದ್ದ ಕಾರಣ  ಪಟ್ಟನಾಯಕನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಮಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯ ಬೇಕಿದ್ದ ಕಾರಣ ಜೂ.21ರಂದು ಮಗ ರಾಯದುರ್ಗದಿಂದ ಪಟ್ಟನಾಯಕನ ಹಳ್ಳಿಗೆ ವಾಪಸಾಗಿ, ಹೋಂ ಕ್ವಾರಂಟೈನ್‌  ನಲ್ಲಿದ್ದ ವಿದ್ಯಾರ್ಥಿಯ ತಾಯಿಗೆ ಜ್ವರ ಹೆಚ್ಚಾದ ಕಾರಣ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದಾರೆ. ಜೂ.23 ರಂದು ತಾಯಿಗೆ ಕೋವಿಡ್‌ 19 ದೃಢವಾಗಿದೆ. ತಕ್ಷಣ ರಾಯದುರ್ಗದಿಂದ ಶಿರಾ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿದ ಕಾರಣ  ತಕ್ಷಣ ಕಾರ್ಯಪ್ರವೃತ್ತರಾದ ಆರೋಗ್ಯ ಇಲಾಖೆ ವಿದ್ಯಾರ್ಥಿ ಮತ್ತು ತಂದೆಯ ಗಂಟಲ ದ್ರವ ಪರೀಕ್ಷೆ ಮಾಡಿದ್ದು ವಿದ್ಯಾರ್ಥಿಗೆ ಕೋವಿಡ್‌ 19 ದೃಢ ವಾಗಿ, ತಂದೆಯ ವರದಿ ನೆಗಟಿವ್‌ ಬಂದಿದೆ.

ಗುರುವಾರ ಕಾಮಗೊಂಡನಹಳ್ಳಿ ಸೀಲ್‌ಡೌನ್‌  ಮಾಡಲಾಗಿದ್ದು ವಿದ್ಯಾರ್ಥಿಗೆ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ತಂದೆಗೆ ಶಿರಾ ಪಟ್ಟಣದ ತಾಯಿ ಮಕ್ಕಳ ಅಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.