ಕಲ್ಪತರು ನಾಡನ್ನು ಬಿಟ್ಟು ತೊಲಗದ ಕೋವಿಡ್‌ 19


Team Udayavani, Jun 13, 2020, 6:10 AM IST

kalapataru-corona

ತುಮಕೂರು: ಕೋವಿಡ್‌ 19 ವೈರಸ್‌ನಿಂದ ಜಿಲ್ಲೆ ಮುಕ್ತಿ ಹೊಂದಿತು ಎಂದು ಕೊಂಡಿದ್ದ ಜನರಿಗೆ ಈಗ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಹೊರ ರಾಜ್ಯ, ಜಿಲ್ಲೆಗಳಿಂದ ಬರುತ್ತಿರುವವ ರಿಗೆ ಕೋವಿಡ್‌ 19 ಕಾಣಿಸಿಕೊಳ್ಳುತ್ತಿರುವುದರ  ಜೊತೆಗೆ ಸಮುದಾಯದಲ್ಲಿ ಹರಡುವ ಭೀತಿ ಹೆಚ್ಚಿದೆ. ಜಿಲ್ಲೆಯಲ್ಲಿ ಕೋವಿಡ್‌ 19 ಸದ್ಯ ತೊಲಗಿತ್ತಲ್ಲ ಎಂದು ನಿರಾಳರಾಗಿದ್ದ ಜನರಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿ ಅರ್ಧ ಶತಕದತ್ತ ಹೋಗುತ್ತಿರುವುದು ಜನರಲ್ಲಿ  ಆತಂಕ ಹೆಚ್ಚುವಂತೆ ಮಾಡಿದೆ.

ಒಂದೇ ಕುಟುಂಬದ 6 ಮಂದಿಗೆ ಕೋವಿಡ್‌ 19: ಈವರೆಗೂ ಒಂದು, ಎರಡು ಕೋವಿಡ್‌ 19 ಪ್ರಕ ರಣ ಪತ್ತೆಯಾಗುತ್ತಿತ್ತು. ಆದರೆ ಗುರುವಾರ ಜಿಲ್ಲೆಯಲ್ಲಿ ಏಳು ಪ್ರಕರಣ ವರದಿಯಾಗಿದೆ. ಆಂಧ್ರ ಪ್ರದೇಶದ ಹಿಂದೂಪುರಕ್ಕೆ ಹೋಗಿ ಬಂದಿದ್ದ  ಒಂದೇ ಕುಟುಂಬದ ಮಕ್ಕಳೂ ಸೇರಿದಂತೆ ಆರು ಜನರಿಗೆ ಕೋವಿಡ್‌ 19 ಧೃಡ ವಾಗಿರುವುದು, ಮುಂದೆ ಸಮುದಾಯದಲ್ಲಿ ಹೆಚ್ಚು ಹರಡುವ ಸಾಧ್ಯತೆ ಕಂಡುಬರುತ್ತಿದೆ.

ಹೊರಗಿನಿಂದಲೇ ಸೋಂಕು: ಈವರೆಗೆ ಅಹ ಮದಾಬಾದ್‌ ನಿಂದ ಬಂದಿರುವ ಮೂವರಿಗೆ ಸೋಂಕು ಕಾಣಿಸಿ ಕೊಂಡಿರುವುದು ಮತ್ತು ಬೆಂಗಳೂರು ಪಾದರಾಯನಪುರದಿಂದ ಶಿರಾ ನಗರಕ್ಕೆ ಬಂದಿದ್ದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿರುವುದು ಗಮನಿಸಿರುವ ಜಿಲ್ಲೆಯ ಜನ ವಿವಿಧ ರಾಜ್ಯ ಹಾಗೂ ಹೊರ ಜಿಲ್ಲೆ ಗಳಿಂದ ಬಂದಿರುವ ಮತ್ತು ಬರುತ್ತಿರುವ ಜನ ರಿಂದ ಮತ್ತೆ ಎಲ್ಲಿ ಕೋವಿಡ್‌ 19 ಸೋಂಕು ಹರಡು ತ್ತದೆಯೋ ಎನ್ನುವ ಆತಂಕ ಮೂಡುತ್ತಿದೆ.

23 ಮಂದಿಗೆ ಚಿಕಿತ್ಸೆ: ಜಿಲ್ಲೆಯಲ್ಲಿ ಈವರೆಗೆ 11402 ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದೆ. ಅದರಲ್ಲಿ 10,703 ಪ್ರಕರಣಗಳು ನೆಗೆಟಿವ್‌ ಬಂದಿದೆ. ಇನ್ನೂ 2212 ಜನರು ಹೋಂ ಕ್ವಾರೆಂ ಟೈನ್‌ನಲ್ಲಿದ್ದಾರೆ. 1,027 ಜನರಲ್ಲಿ ಸೋಂಕು ಗುಣಲಕ್ಷಣ ಇದೆ ಎಂದು ಗುರುತಿಸಲಾಗಿದೆ.  23 ಜನರಿಗೆ ಜಿಲ್ಲಾ ಕೋವಿಡ್‌-19 ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 587 ಜನರ ಮಾದರಿ ಪರೀಕ್ಷೆ ಲ್ಯಾಬ್‌ ನಿಂದ ಬರ ಬೇಕಾಗಿದ್ದು ಇದು ಜನರನ್ನು ಭೀತಿಗೊಳಿಸಿದೆ ಬರಬೇಕಾಗಿರುವ ವರದಿಯಲ್ಲಿ ಇನ್ನೂ ಎಷ್ಟು  ಜನರಿಗೆ ಸೋಂಕು ಇದೆಯೋ ಎನ್ನುವ ಆತಂಕ ಎದುರಾಗಿದೆ.

ಸಮುದಾಯ ಸೋಂಕಿನ ಭಯ: ಈಗ ಎಲ್ಲಾ ಕಡೆ ಲಾಕ್‌ಡೌನ್‌ ಸಂಪೂರ್ಣ ತೆರವು ಮಾಡಿದ ಮೇಲೆ ಜಿಲ್ಲೆಯಲ್ಲಿ ಅದರಲ್ಲಿಯೂ ನಗರದಲ್ಲಿ ಯಾವುದೇ ಸಾಮಾಜಿಕ ಅಂತರವೂ ಇಲ್ಲದೇ, ಮಾಸ್ಕ್ ಗಳನ್ನೂ ಧರಿಸದೇ ಎಲ್ಲಾ ಕಡೆ ಗುಂಪು  ಗುಂಪಾಗಿ ಜನ ಸಂಚರಿಸುತ್ತಿದ್ದಾರೆ. ಎಲ್ಲಾ ಕಡೆ ವಾಹನ ದಟ್ಟನೆ ಇದೆ, ಕೆಎಸ್‌ಆರ್‌ ಟಿಸಿ ಬಸ್‌ಗಳ ಸಂಚಾರ ಮುಂದುವರಿ ದಿದೆ, ಹೋಟೆಲ್‌, ದೇವಾಲಯಗಳು ತೆರೆದಿವೆ, ವ್ಯಾಪಾರಸ್ಥರು ತಮಗೆ ಉತ್ತಮ ವ್ಯಾಪಾರವಾದರೆ ಸಾಕಪ್ಪ ಎಂದು ಸರ್ಕಾರದ ನಿಯಮ ಮರೆಯುತ್ತಿದ್ದಾರೆ. ಇದರಿಂದ ಇದೆಲ್ಲವನ್ನು ಗಮನಿಸಿದರೆ ಈವ ರೆಗೂ ಸಮುದಾಯದಿಂದ ದೂರವಿದ್ದ ಈ ಕೋವಿಡ್‌ 19 ಎಲ್ಲಿ ಸಮುದಾಯಕ್ಕೆ ಹರಡುತ್ತದೆಯೋ ಎನ್ನುವ ಭೀತಿ ಹೆಚ್ಚಿದೆ.

ಕೋವಿಡ್‌ -19 ಜಿಲ್ಲೆಯಲ್ಲಿ ಸಮುದಾಯಕ್ಕೆ ಹೋಗದಂತೆ ಜಿಲ್ಲಾಡಳಿತದಿಂದ ಈವರೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈಗ ಲಾಕ್‌ಡೌನ್‌ ಪೂರ್ಣಗೊಂಡಿದೆ ಜನ ಸಂಚಾರ ಎಲ್ಲಾ ಕಡೆ ಇದೆ. ಈಗ ಕೋವಿಡ್‌ 19 ಸೋಂಕು ಹೆಚ್ಚಾಗುವ  ಸಂಭವವಿದೆ. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಲೇ ಬೇಕು. ಸ್ಯಾನಿಟೈಸರ್‌ ಹಾಕಿಕೊಳ್ಳಬೇಕು. ರೋಗದ ಲಕ್ಷಣ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಬಂದು ತಕ್ಷಣ ಚಿಕಿತ್ಸೆ ಪಡೆಯ ಬೇಕು. ಕೋವಿಡ್‌ 19 ಪಾಸಿಟಿವ್‌  ಬಂದರೂ ಹೆದರಬೇಕಿಲ್ಲ ಗುಣಮುಖರಾಗಬಹುದು.
-ಡಾ.ನಾಗೇಂದ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.