ಕೊರಟಗೆರೆಯಲ್ಲಿ ಮುಂದುವರೆದ ಕೋವಿಡ್ ಅಟ್ಟಹಾಸ; ಇಂದು 39 ಪಾಸಿಟಿವ್ ಪ್ರಕರಣ


Team Udayavani, Jan 9, 2022, 6:33 PM IST

ಕೊರಟಗೆರೆಯಲ್ಲಿ ಮುಂದುವರೆದ ಕೋವಿಡ್ ಅಟ್ಟಹಾಸ; ಇಂದು 39 ಪಾಸಿಟಿವ್ ಪ್ರಕರಣ

ಕೊರಟಗೆರೆ : ಕೊರಟಗೆರೆ ತಾಲೂಕಿನಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ಶಾಲೆಯ 22 ವಿದ್ಯಾರ್ಥಿಗಳಿಗೆ ನೆನ್ನೆ ಕೊರೋನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಇಂದು 39 ಪಾಸಿಟಿವ್ ಬರುವ ಮೂಲಕ ಮತ್ತೆ ನಾಗರಿಕರ ನಿದ್ದೆಗೆಡಿಸಿದಂತಾಗಿದೆ.

ಕೊರೋನಾ 3ನೇ ಅಲೆ ಕೊರಟಗೆರೆ ತಾಲೂಕಿನಲ್ಲಿ ಹೆಚ್ಚು  ಉಲ್ಬಣವಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಶುಕ್ರವಾರ ಒಂದೇ ಶಾಲೆಯ 22 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಧೃಡಪಟ್ಟ ಬೆನ್ನಲ್ಲೇ ಶನಿವಾರ 9 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 39 ಜನರಿಗೆ ಕೋವಿಡ್-19 ಹರಡುವ ಮೂಲಕ ಮತ್ತೆ ಸಾರ್ವಜನಿಕರ ನಿದ್ದೆಗೆಡಿಸುವಂತಾಗಿದೆ.

ಕೊರಟಗೆರೆ ತಾಲೂಕಿನಲ್ಲಿ ಕೊರೋನಾ 1 ಹಾಗೂ 2ನೇ ಅಲೆ ಬಹಳಷ್ಟು ಜನರಿಗೆ ಸಂಕಷ್ಟಕ್ಕೆ ದೂಡಿ, ಆರ್ಥಿಕ ಸಂಕಷ್ಟದ ಜೊತೆಗೆ ಸಾವು-ನೋವುಗಳ ಸಂಖ್ಯೆಯೂ ಹೆಚ್ಚಾಗಿ ಸಾರ್ವಜನಿಕರ ಜೀವನ ಮೂರಾಬಟ್ಟೆ ಮಾಡಿದ ಕೊರೋನಾ ಮತ್ತೆ ತನ್ನ ಅಟ್ಟಹಾಸ ಮೆರೆಯಲು ಪ್ರಾರಂಭಿಸಿದ್ದು, ಕಳೆದ ಎರಡು ದಿನಗಳಿಂದ 50ಕ್ಕೂ ಹೆಚ್ಚು ಸೋಂಕು ಧೃಡಪಟ್ಟಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಂತ್ತಾಗಿದೆ.

ಕೊರಟಗೆರೆ ತಾಲೂಕಿನ ಒಂದೇ ಶಾಲೆಯಲ್ಲಿ 22 ಸೋಂಕು ವಿದ್ಯಾರ್ಥಿಗಳಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಜಂಟಿ ಸಹಯೋಗದಲ್ಲಿ ಕಾರ್ಯೋನ್ಮುಖರಾಗಿ ಅದೇ ಶಾಲೆಯ ಬಹಳಷ್ಟು ವಿದ್ಯಾರ್ಥಿಗಳಿಗೆ ಸ್ವ್ಯಾಬ್ ಟೆಸ್ಟ್ ನಡೆಸಿದ್ದು ಅದರಲ್ಲಿ 9 ವಿದ್ಯಾರ್ಥಿಗಳು, ಅಡುಗೆ-ಸಹಾಯಕರು, ಒಬ್ಬ ಸಿಸ್ಟರ್ ಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಉಳಿದಂತೆ ಇತರ ಭಾಗಗಳಿಂದ 30 ಜನ ಸೋಂಕಿತರು ಪತ್ತೆಯಾಗಿರುವುದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಕಂಡು ಬಂದಂತಾಗಿದೆ.

ಸೋಂಕು‌ ಕಂಡ ವಿದ್ಯಾರ್ಥಿಗಳನ್ನ ವಿದ್ಯಾರ್ಥಿನಿಲಯದಲ್ಲಿ ಪ್ರತ್ಯೇಕ ಕೊಠಡಿ ಗಳಲ್ಲಿ ಕ್ವಾರಂಟೈನ್ ಮಾಡಲಾಗಿ ಉಳಿದ ಇತರ ಸಾರ್ವಜನಿಕರನ್ನ ಅವರವರ ಮನೆಯಲ್ಲಿ ಪ್ರತ್ಯೇಕವಾಗಿ ಹೊಂ ಕ್ವಾರಂಟೈನ್ ಮಾಡಲಾಗಿದೆ.

ತಹಶೀಲ್ದಾರ್ ನಾಹಿದಾ ಜಮ್ ಜಮ್ ಸ್ವತಃ ಮುಂದೆ ನಿಂತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸ್ವ್ಯಾಬ್ ಟೆಸ್ಟ್ ನಂತರ ಧೃಡಪಟ್ಟವರನ್ನು ಕ್ವಾರಂಟೈನ್ ಮಾಡಲಾಗಿ ಸಾರ್ವಜನಿಕರು ಕೊರೋನಾ  ಸೋಂಕಿನ ಬಗ್ಗೆ ಹೆಚ್ಚು ಜಾಗೃತರಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.