ನಿಯಮ ಪಾಲಿಸದವರಿಗೆ 250 ರೂ. ದಂಡ


Team Udayavani, Apr 7, 2021, 2:42 PM IST

ನಿಯಮ ಪಾಲಿಸದವರಿಗೆ 250 ರೂ. ದಂಡ

ತುಮಕೂರು: ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕಅಂತರ ಕಾಯ್ದು ಕೊಳ್ಳುವುದು, ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ. ಇದರ ಉಲ್ಲಂಘನೆಮಾಡಿದವರಿಗೆ ಕಾನೂನು ರೀತಿ ಪಾಲಿಕೆ ವ್ಯಾಪ್ತಿಯಲ್ಲಿ250. ರೂ.ಗಳು ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ರೇಣುಕಾ ಎಚ್ಚರಿಕೆ ನೀಡಿದರು.

ತುಮಕೂರು ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ಸಂಯುಕ್ತವಾಗಿ ಮಂಗಳವಾರಹಮ್ಮಿಕೊಂಡಿದ್ದ ಕೋವಿಡ್‌ ತಪಾಸಣೆ ಮತ್ತು ಸ್ವ್ಯಾಬ್‌ ಸಂಗ್ರಹ ಸೇರಿದಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದಲ್ಲಿ ಎರಡನೇ ಹಂತದ ಕೋವಿಡ್ ವ್ಯಾಪಕವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿಸಾರ್ವಜನಿಕರು ಜಾಗೃತವಾಗಿ ಇರುವುದು ಮುಖ್ಯ.ಎಲ್ಲರೂ ಮನೆಯಲ್ಲಿ ಇದ್ದು ಸಹಕರಿಸಬೇಕು. ಅನಗತ್ಯಸಭೆ, ಸಮಾರಂಭಗಳಿಗೆ ಹೋಗುವುದನ್ನು ನಿಲ್ಲಸಬೇಕು ಎಂದು ಸೂಚಿಸಿದರು.

ನಗರದಲ್ಲಿ ಪಾಸಿಟಿವ್‌ ಕೇಸ್‌ಗಳು ಹೆಚ್ಚಾಗುತ್ತಿದೆ. ಪಾಲಿಕೆ ವ್ಯಾಪ್ತಿಯ 7 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಟೆಸ್ಟ್‌ ಸಂಖ್ಯೆ ಕಡಿಮೆಯಾಗುತ್ತಿದೆ.ಆದ್ದರಿಂದ ವಾರ್ಡ್‌ ಹಂತದಲ್ಲಿ ಪಾಲಿಕೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಮೊಬೈಲ್‌ ಆರೋಗ್ಯ ವಾಹನದ ಮೂಲಕ ತಪಾಸಣೆ ಕೈಗೊಳ್ಳಲಾಗಿದೆ ಎಂದರು. ಕೋವಿಡ್‌ ಸೋಂಕಿತರ ಜೊತೆ ಪ್ರಥಮ ಹಾಗೂ ದ್ವೀತಿಯ ಸಂಪರ್ಕದಲ್ಲಿದವರು ತಾವಾಗಿಯೇಮಾಹಿತಿ ನೀಡಬೇಕು. ಅಂತಹವರಿಗೆ ವಾರ್ಡ್‌  ನಲ್ಲಿಯೇ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು. 45ವರ್ಷ ಮೇಲ್ಪಟ್ಟ ನಾಗರಿಕರುಕಡ್ಡಾಯವಾಗಿ ವ್ಯಾಕ್ಸಿನೇಷನ್‌ ಲಸಿಕೆಯನ್ನ ಪ್ರಾಥಮಿಕಆರೋಗ್ಯ ಕೇಂದ್ರದಲ್ಲಿ ಹಾಕಿಸಿಕೊಳ್ಳಬೇಕು. 28 ದಿನಗಳ ನಂತರ ದ್ವೀತಿಯ ಹಂತದ ಲಸಿಕೆಯನ್ನು ಪಡೆಯಬಹುದು ಎಂದರು.

ಮೊಬೈಲ್ ಸ್ಕ್ವಾಡ್ ಸಮಿತಿ ರಚನೆ: ಪಾಲಿಕೆ ವ್ಯಾಪ್ತಿ  ಯಲ್ಲಿ ಪರವಾನಗಿ ಪಡೆಯದೇ ಸಭೆ, ಸಮಾರಂಭ ನಡೆದರೆ ಅಂತವರ ವಿರುದ್ಧ ಕಾನೂನು ಕ್ರಮಕೈಗೊಂಡು 5 ರಿಂದ 10 ಸಾವಿರ ರೂ.ಗಳ ವರೆಗೆ ದಂಡವಿಧಿಸಲಾಗುವುದು. ಇದಕ್ಕೆಂದೆ ವಿಶೇಷವಾಗಿ 4 ಮೊಬೈಲ್‌ ಸ್ಕ್ವಾಡ್‌ ಸಮಿತಿಗಳನ್ನ ರಚಿಸಲಾಗಿದೆ. ಇವರು ಬೆಳಗ್ಗೆ 6 ರಿಂದ ಸಂಜೆ 6ರ ವರಗೆ ಪಾಲಿಕೆ ವ್ಯಾಪ್ತಿ ಯಲ್ಲಿಸಂಚರಿಸಲಿದ್ದಾರೆ.  ಮಾಸ್ಕ್ ಧರಿಸದವ ರನ್ನು ಗುರುತಿಸಿದಂಡ ವಿಧಿಸುತ್ತಾರೆ. ಅದಕ್ಕಾಗಿ ಸಾರ್ವಜನಿಕರಸಹಕರಿಸಬೇಕು ಎಂದು ಮನವಿ ಮಾಡಿದರು.

ನಗರ ಆರೋಗ್ಯಾಧಿಕಾರಿ ಡಾ. ಮೋಹನ್‌ ಮಾತನಾಡಿ, ನಗರ ಪ್ರದೇಶದಲ್ಲಿ ಪಾಸಿಟಿವ್‌ ಕೇಸ್‌ ಹೆಚ್ಚಾಗುತ್ತಿರುವ ಕಾರಣ ವಾರ್ಡ್‌ ಹಂತದಲ್ಲಿ ಅರಿವುಮೂಡಿಸುವುದು ಅಗತ್ಯ. 24ನೇ ವಾರ್ಡ್‌ನಲ್ಲಿ ವಿದ್ಯುಕ್ತವಾಗಿ ಸ್ವಾಬ್‌ ಕಲೆಕ್ಷನ್‌ ಪ್ರಕ್ರಿಯೆ ಆರಂಭವಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಾಗಿದೆ. ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದವರ ಸ್ವಾ$Âಬ್‌ ಕಲೆಕ್ಷನ್‌ ಮಾಡಲಾಗುತ್ತಿದೆ. ಜೊತೆಗೆ ಬಿಪಿ, ಶುಗರ್‌ ಸೇರಿದಂತೆ ಇನ್ನೀತರ ದೀರ್ಘ‌ ಕಾಯಿಲೆಗಳನ್ನು ಪತ್ತೆ ಮಾಡಲಾಗುತ್ತಿದೆ. ಅಂತಹವರಿಂದಲೂ ಸ್ವಾ$Âಬ್‌

ಕಲೆಕ್ಷನ್‌ ಮಾಡಲಾಗುವುದು. ವಾರ್ಡ್‌ನಲ್ಲಿ 45ವರ್ಷ ಮೇಲ್ಪಟ್ಟವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೋಗಲು ತೊಂದರೆಯಾಗದಂತೆ ವಾಸವಿಶಾಲೆಯಲ್ಲಿ ವಾಕ್ಸಿನೇಷನ್‌ ನೀಡಲು ಸಿದ್ಧತೆ ಮಾಡಲಾಗಿದೆ. ಸಾರ್ವಜನಿಕರು ಇದರ ಉಪಯೋಗಪಡೆದುಕೊಳ್ಳಬೇಕು ಎಂದರು. ನಗರ ಪಾಲಿಕೆಯ ಮಹಾಪೌರ ಬಿ.ಜಿ. ಕೃಷ್ಣಪ್ಪ, ಪಾಲಿಕೆ ಸದಸ್ಯ ಎಚ್‌. ಮಲ್ಲಿಕಾರ್ಜುನ್‌ ಸೇರಿದಂತೆ ಪಾಲಿಕೆ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದನ್ನುತಡೆಯಲು ಸಾರ್ವಜನಿಕರ ಸಹಕಾರಅತಿಮುಖ್ಯ. ಪ್ರತಿಯೊಬ್ಬರೂ ಕೋವಿಡ್ ನಿಯಮ ಪಾಲಿಸಬೇಕು. ಮಾಸ್ಕ್ ಹಾಕುವುದು ಕಡ್ಡಾಯ. ಮಾಸ್ಕ್ ಹಾಕದೇ ಇದ್ದವರಿಗೆ ದಂಡ ವಿಧಿಸಲಾಗುತ್ತದೆ.   ರೇಣುಕಾ, ಪಾಲಿಕೆ ಆಯುಕ್ತೆ

ತುಮಕೂರು ನಗರದ 24ನೇ ವಾರ್ಡ್‌ನಲ್ಲಿ ವಿದ್ಯುಕ್ತವಾಗಿ ಸ್ವ್ಯಾಬ್‌ ಕಲೆಕ್ಷನ್‌ ಪ್ರಕ್ರಿಯೆ ಆರಂಭವಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಾಗಿದೆ. ಸೋಂಕಿತರ ಪ್ರಾಥಮಿಕ,ಹಾಗೂ ದ್ವೀತಿಯ ಸಂಪರ್ಕದವರ ಸ್ವ್ಯಾಬ್‌ ‌ ಕಲೆಕ್ಷನ್‌ ಮಾಡಲಾಗುತ್ತಿದೆ. ಯಾರೂಭಯಪಡದೇ ಕೋವಿಡ್ ಪರೀಕ್ಷೆಮಾಡಿಸಿಕೊಳ್ಳಿ, 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಿರಿ.   ಡಾ.ಮೋಹನ್, ನಗರ ಆರೊಗ್ಯಾಧಿಕಾರಿ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.