ಕೇಂದ್ರ-ರಾಜ್ಯ ಸರ್ಕಾರಗಳ ಜನವಿರೋಧಿ ಧೋರಣೆ


Team Udayavani, Apr 12, 2022, 3:48 PM IST

Untitled-1

ತುಮಕೂರು: ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌, ವಿದ್ಯುತ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫ‌ಲವಾಗಿ ರುವ ಬಿಜೆಪಿ ನೇತೃತ್ವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ಧೋರಣೆಯ ಮೂಲಕ ಭಾವನಾತ್ಮಕ ವಿಚಾರ ಮುಂದಿಟ್ಟು ಬೆಲೆ ಏರಿಕೆ ಮರೆಸಲು ಯತ್ನಿಸುತ್ತಿವೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್‌ ಆರೋಪಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮ ವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರು ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆಗಳನ್ನು ಇಳಿಸುವುದಾಗಿ, ನಿರುದ್ಯೋಗ ನಿವಾರಣೆ ಮಾಡುವುದಾಗಿ ಹಾಗೂ ಭ್ರಷ್ಟಾಚಾರ ತಡೆಗಟ್ಟುವುದಾಗಿ ವಾಗ್ಧಾನ ನೀಡಿ ಅಧಿಕಾರ ದಕ್ಕಿಸಿಕೊಂಡ ಬಿಜೆಪಿ ಸರ್ಕಾರದ ದುರಾಡಳಿತದಿಂದಾಗಿ ಜನಸಾಮಾನ್ಯರು ಬೆಲೆ ಏರಿಕೆಯನ್ನು ಹೊರೆಯನ್ನು ಹೊರಬೇಕಾಗಿದೆ ಎಂದು ದೂರಿದರು.

ಸರ್ಕಾರ ಹೊಣೆಗೇಡಿತನ: ಪ್ರಧಾನಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡಾಗ ಒಂದು ಲೀ. 70 ರೂ. ಪೆಟ್ರೋಲ್‌ ಬೆಲೆ 112ರೂ.ಗೆ ಏರಿಕೆ ಯಾಗಿದೆ. ಡೀಸೆಲ್‌ 58ರಿಂದ 98 ಕ್ಕೆತಲುಪಿದೆ. 400 ರೂ.ಗಳಿದ್ದ ಗೃಹ ಬಳಕೆಯ ಗ್ಯಾಸ್‌ ಸಿಲಿಂಡರ್‌ ಬೆಲೆ ಸಾವಿರ ರೂ. ಸಮೀಪಿಸಿದೆ. ಜನ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೂ ಸಹ ಬೆಲೆ ಏರಿಕೆಗೂ ತಮಗೂ ಯಾವುದೇ ಸಂಬಂಧವಿಲ್ಲದಂತೆ ಕೇಂದ್ರ ಸರ್ಕಾರ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ದೇಶದ ಜನರು ಬೆಲೆ ಏರಿಕೆಯಲ್ಲಿ ಬೇಯುತ್ತಿರುವಾಗ ಪ್ರಧಾನಿ ಮೋದಿ ಸ್ನೇಹಿತರ ಸಂಪತ್ತು ಮಾತ್ರ ಬೆಲೆ ಏರಿಕೆಯಂತೆಯೇ ಏರಿಕೆಯಾಗುತ್ತಿದೆ ಎಂದು ಲೇವಡಿ ಮಾಡಿದರು.

ಸಿಪಿಐ ಮುಖಂಡ ಕಂಬೇಗೌಡ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿರುವ ಡಬ್ಬಲ್‌ ಇಂಜಿನ್‌ ಸರ್ಕಾರದಿಂದಾಗಿ ಇಂದು ರಸಗೊಬ್ಬರಗಳ ಬೆಲೆ ಏರಿಸಿ ರೈತ ಸಮೂಹವನ್ನು ವಂಚಿಸುತ್ತಿದೆ. ಆಹಾರಧಾನ್ಯ, ಅಡುಗೆ ಎಣ್ಣೆ, ವಿದ್ಯುತ್‌ ದರ ಸೇರಿದಂತೆ ದಿನನಿತ್ಯ ಉಪಯೋಗಿಸುವ ಪದಾರ್ಥಗಳ ಬೆಲೆಗಳು ಸಹ ಗಗನಮುಟ್ಟಿವೆ.

ಕೋಮು ದ್ವೇಷದ ರಾಜಕಾರಣಕ್ಕೆ ಉತ್ತೇಜನ: ಉಚಿತ ಆರೋಗ್ಯ ಸೇವೆ ನೀಡುವ ಜವಾಬ್ದಾರಿ ಯಿಂದ ನುಣುಚಿಕೊಂಡಿರುವ ಸರ್ಕಾರ, ಸುಮಾರು 800 ಕ್ಕೂ ಹೆಚ್ಚು ಅಗತ್ಯ ಔಷಧಿಗಳ ಬೆಲೆ ಏರಿಸಿ ಜನಸಾಮ್ಯಾನರನ್ನು ಸಂಕಷ್ಟಕ್ಕೆ ತಳ್ಳಿದೆ. ಜನತೆ ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಮರೆಮಾಚಲು ಹಾಗೂ ಮುಂಬರುವ ಚುನಾವಣೆ ಯಲ್ಲಿ ಜಯಿಸಲು ಭಾವನಾತ್ಮಕ, ಧಾರ್ಮಿಕ ಆಚಾರ-ವಿಚಾರಗಳನ್ನು ಹುಟ್ಟುಹಾಕಿ ಕೋಮು ದ್ವೇಷದ ರಾಜಕಾರಣವನ್ನು ಉತ್ತೇಜನಗೊಳಿಸುವ ಪಿತೂರಿಗಳು ಸಹನೀಯ ವಿಚಾರವಲ್ಲ ಎಂದರು.

ಪ್ರತಿಭಟನೆಯಲ್ಲಿ ಮುಖಂಡರಾದ ಸಹ ಕಾಯ ದರ್ಶಿ ಅಶ್ವತ್ಥನಾರಾಯಣ, ಬಾಲೇನಹಳ್ಳಿ ಸೀನಪ್ಪ, ಅಜ್ಜನಹಳ್ಳಿ ವಸಂತರಾಜು, ದುರ್ಗದಹಳ್ಳಿ ರುದ್ರಪ್ಪ, ಯಶೋಧಮ್ಮ, ಚಿಕ್ಕಣ್ಣ, ರಾಮಣ್ಣ, ಗಂಗಾಧರಪ್ಪ, ಪುನೀತ್‌, ಹನುಮಂತರಾಯಪ್ಪ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.