ಕುಡಿವ ನೀರಿನ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ

Creating drastic water shortage is a tough step

Team Udayavani, May 12, 2019, 2:29 PM IST

TUMKUR-TDY-7..

ಕೊರಟಗೆರೆ ಪಪಂ ಕಚೇರಿಯಲ್ಲಿ ನಡೆದ ತುರ್ತು ಕುಡಿಯುವ ನೀರಿನ ಸಭೆಯಲ್ಲಿ ತುಮಕೂರು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಅನುಪಮಾ ಮಾತನಾಡಿದರು.

ಕೊರಟಗೆರೆ: ಕುಡಿಯುವ ನೀರಿನ ಸರಬರಾಜು ಮತ್ತು ಸ್ವಚ್ಛತೆ ನಿರ್ವಹಣೆಯಲ್ಲಿ ವಿಳಂಬ ಮಾಡಿ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿ ಮಾಡುವ ವಾಟರ್‌ ಮ್ಯಾನ್‌ ಮತ್ತು ನೌಕರರ ವಿರುದ್ಧ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಅಮಾನತಿಗೆ ಆದೇಶ ಮಾಡುತ್ತೇನೆ ಎಂದು ತುಮಕೂರು ನಗರಾಭಿ ವೃದ್ಧಿ ಕೋಶ ಯೋಜನಾ ನಿರ್ದೇಶಕಿ ಅನುಪಮಾ ಖಡಕ್‌ ಎಚ್ಚರಿಕೆ ನೀಡಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಆದೇಶದ ಮೇರೆಗೆ ಕೊರಟಗೆರೆ ಪಪಂಗೆ ಶುಕ್ರವಾರ ಸಂಜೆ ದಿಢೀರ್‌ ಭೇಟಿ ನೀಡಿದ ಅವರು, ಪಪಂ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಡಿಯುವ ನೀರಿನ ತುರ್ತು ಸಭೆ ನಡೆಸಿದರು.

ಅನಿವಾರ್ಯ: ಈ ವೇಳೆ ವಾಟರ್‌ ಮ್ಯಾನ್‌ಗಳಿಂದ ಮಾಹಿತಿ ಪಡೆದು ಅಧಿಕಾರಿಗಳ ವಿರುದ್ಧ ಕಿಡಿಕಾರಿ ದರು. ಪಟ್ಟಣದಲ್ಲಿ 15 ಸಾವಿರ ಜನರಿಗೆ ಇನ್ನೆರಡು ವರ್ಷ ಆಗುವಷ್ಟು ಕುಡಿಯುವ ನೀರಿನ ಶೇಖರಣೆ ಆಗಿದೆ. 15 ವಾರ್ಡುಗಳಿಗೆ ಪ್ರತಿದಿನ ಒಂದು ಗಂಟೆ ಕಡ್ಡಾಯವಾಗಿ ಕುಡಿಯುವ ನೀರಿನ ಪೂರೈಕೆ ಮಾಡಿ. ಪ್ರತಿದಿನ ಸಂಜೆ ತನಗೆ ದಾಖಲೆ ಸಮೇತ ವರದಿ ಸಲ್ಲಿಸಬೇಕು. ಇಲ್ಲವಾದರೇ ವಾಟರ್‌ ಮ್ಯಾನ್‌ಗಳಿಗೆ ಪಾವಗಡ ಮತ್ತು ಮಧುಗಿರಿ ಪಟ್ಟಣಕ್ಕೆ ನೀರಿನ ಪೂರೈಕೆ ಗಾಗಿ ವರ್ಗಾವಣೆ ಮಾಡುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಪತ್ರ ಬರೆಯುವೆ: ಉತ್ತರ ಕರ್ನಾಟಕ ಭಾಗದಲ್ಲಿ ಒಂದು ಕೊಡ ನೀರಿಗಾಗಿ 5-6 ಕಿ.ಮೀ ದೂರ ಹೋಗುತ್ತಿದ್ದಾರೆ. ಕಾಡಿನಲ್ಲಿ ವಾಸಿಸುವ ಪ್ರಾಣಿ ಪಕ್ಷಿಗಳಿಗೆ ನೀರಿಲ್ಲದೇ ನಾಡಿಗೆ ಬರುತ್ತಿವೆ. ಪಾವಗಡ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ತೋಟಗಳು ಒಣಗಿ ಹೋಗಿವೆ. ಕೊರಟಗೆರೆ ಪಟ್ಟಣದ 15 ವಾರ್ಡ್‌ನಲ್ಲಿ ಒಂದು ಹನಿ ಕುಡಿಯುವ ನೀರು ವ್ಯರ್ಥ ಆಗುತ್ತಿರುವ ಮಾಹಿತಿ ಬಂದರೆ ಅಧಿಕಾರಿಗಳ ವಿರುದ್ಧ ಸರ್ಕಾರಕ್ಕೆ ಪತ್ರ ಬರೆಯುತ್ತೇನೆಂದರು. ಪಟ್ಟಣದ 15 ವಾರ್ಡುಗಳಿಗೆ ಪ್ರತಿದಿನ 1 ಗಂಟೆ ನೀರು ಬಿಡುವಂತಹ ಸಮಯವನ್ನು ನಿಗದಿ ಮಾಡಿ ಪಪಂ ಕಚೇರಿ ಸೂಚನಾ ಫ‌ಲಕ ಮತ್ತು ಆಯಾ ವಾರ್ಡುಗಳಿಗೆ ಬಿತ್ತಿಪತ್ರದ ಮೂಲಕ ಪ್ರಚಾರಪಡಿಸಬೇಕು.

ನೀರಿನ ಸರಬರಾಜು ಆಗದಿರುವ ವಾರ್ಡುಗಳಿಗೆ ಪ್ರತಿದಿನ ನೀರಿನ ಟ್ಯಾಂಕರ್‌ಗಳ ಮೂಲಕ ಸರಬ ರಾಜು ಮಾಡಬೇಕು. ದಿನಪತ್ರಿಕೆಗಳಿಗೆ ಮಾಹಿತಿ ನೀಡಿ ಕುಡಿಯುವ ನೀರಿನ ಅರಿವು ಮೂಡಿಸಿ ಪ್ರಯತ್ನ ಮಾಡಿ ಎಂದು ಪಪಂ ಮುಖ್ಯಾಧಿಕಾರಿಗೆ ಸೂಚಿಸಿದರು.

ಮುಲಾಜಿಲ್ಲದೇ ಕ್ರಮ: ಪಪಂ ಮುಖ್ಯಾಧಿಕಾರಿ ರುಕ್ಮಿಣಿ ಪ್ರತಿಕ್ರಿಯಿಸಿ, ಪಟ್ಟಣಕ್ಕೆ ಆಗುವಷ್ಟು ಹೇಮಾವತಿ ನೀರು ಜೆಟ್ಟಿಅಗ್ರಹಾರ ಕೆರೆಯಲ್ಲಿ ಶೇಖರಣೆ ಆಗಿದೆ. ನಿರ್ವಹಣೆ ಕೊರತೆಯಿಂದ ನೀರಿನ ಅಭಾವ ಸೃಷ್ಟಿಯಾಗಿದೆ. ಸ್ವಚ್ಛತೆ ನಿರ್ವಹಣೆ ಮತ್ತು ಕುಡಿಯುವ ನೀರಿನ ಪೂರೈಕೆ ಬಗ್ಗೆ ತಾನೇ ಖುದ್ದಾಗಿ ಪಟ್ಟಣದ ವಾರ್ಡುಗಳಿಗೆ ಭೇಟಿ ನೀಡಿ ಸಾರ್ವ ಜನಿಕರಿಂದ ಮಾಹಿತಿ ಕಲೆ ಹಾಕುತ್ತೇನೆ. ನಿರ್ಲಕ್ಷ್ಯ ವಹಿಸುವ ಸಿಬ್ಬಂದಿ ವಿರುದ್ಧ ಮುಲಾಜಿಲ್ಲದೇ ಕ್ರಮಕ್ಕೆ ಸೂಚಿಸುತ್ತೇನೆಂದರು.

ಪಪಂ ಎಂಜಿನಿಯರ್‌ ತ್ಯಾಗರಾಜು ಮಾತನಾಡಿ, ಕೊರಟಗೆರೆ ಪಟ್ಟಣಕ್ಕೆ ಪ್ರತಿದಿನ 28 ಲಕ್ಷ ಲೀಟರ್‌ ಕುಡಿಯುವ ನೀರಿನ ಸರಬರಾಜು ಆಗುತ್ತಿದೆ. 15 ವಾರ್ಡುಗಳ 144 ಲೈನ್‌ಗಳಿಗೆ ನೀರು ಸರಬರಾಜು ಮಾಡಲು ಗಿರಿನಗರ, ತಾಪಂ ಕಚೇರಿ, ಕೋಟೆ ಬೀದಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ನೀರಿನ ಶೇಖರಣೆ ಘಟಕವಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ರುಕ್ಮಿಣಿ, ಆರೋಗ್ಯ ಅಧಿಕಾರಿ ರೈಸ್‌ಅಹಮ್ಮದ್‌, ಸಿಬ್ಬಂದಿಗಳಾದ ವೆಂಕಟಾಪತಿ, ನಾಗರತ್ನಮ್ಮ, ಸಾವಿತ್ರಮ್ಮ ಮತ್ತಿತರರಿದ್ದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.